10:31 AM Friday1 - August 2025
ಬ್ರೇಕಿಂಗ್ ನ್ಯೂಸ್
ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಸ್ಪಾಟ್ ನಂಬರ್ 4ರ ಉತ್ಖನನ ಪ್ರಕ್ರಿಯೆ ಆರಂಭ ಬಾಲಮಂದಿರ, ಮಹಿಳಾ ನಿಲಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ: ಚಿಣ್ಣರನ್ನು ಮುದ್ದಾಡಿದ…

ಇತ್ತೀಚಿನ ಸುದ್ದಿ

ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ ಕೇಳಿದ್ವಾ: ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನೆ

08/06/2025, 21:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಉಗ್ರಗಾಮಿಗಳು ನಡೆಸಿದ ದಾಳಿಗೆ 26 ಜನ ಸತ್ರು, ಇದು ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ ಕೇಳುದ್ವಾ ಎಂದು ಲೋಕೋಪಯೋಗಿ
ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನಿಸಿದರು.
ಚಿಕ್ಕಮಗಳೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿದ ಅವರು, ಹಿಂದಿನ ಸರ್ಕಾರಗಳಿದ್ದಾಗ ಬಹಳಷ್ಟು ಘಟನೆ ನಡೆದಿದೆ, ನಾವು ರಾಜೀನಾಮೆ ಕೇಳಿರಲಿಲ್ಲ. ಪಾಕಿಸ್ತಾನದ ಜೊತೆ ಯುದ್ಧವಾದಾಗ ಎಲ್ಲ ಪಕ್ಷಗಳು ಬಿಜೆಪಿ ಜೊತೆ ಕೈಜೋಡಿಸಿದ್ರು. ಅಲ್ಲೂ ಫೆಯ್ಲ್ಯೂರ್ ಆಗಿತ್ತು, ಆಗ ಯಾರೂ ರಾಜೀನಾಮೆ ಕೇಳಿಲ್ಲ.
ಯಾರು ತಮ್ಮ ಕೆಲಸ ಸರಿಯಾಗಿ ಮಾಡಿಲ್ಲ ಅನ್ನೋದು ತನಿಖೆಯಿಂದ ಹೊರಬರಬೇಕು. ಯಾರು ಅನುಮತಿ ಕೇಳಿದ್ರು, ಯಾರು ನಿರಾಕರಿಸಿದ್ರು, ಯಾವಾಗ ಕೊಟ್ರು ಯಾರಿಗೂ ಗೊತ್ತಿಲ್ಲ, ಎಲ್ಲಾ ಬೂದಿ ಮುಚ್ಚಿದ ಕೆಂಡ ಎಂದು ಸಚಿವ ಜಾರಕಿಹೊಳಿ ನುಡಿದರು.

ಕಮಿಷನರ್, ಡಿಸಿಪಿ, ಇನ್ಸ್ಪೆಕ್ಟರ್, ಪೊಲೀಸ್ ಒಬ್ಬೊಬ್ಬರ ಲೆವೆಲ್ ನಲ್ಲಿ ಒಂದೊಂದು ಆಗಿದೆ ತನಿಖೆಯಿಂದ ಸತ್ಯ ಹೊರಬರಲಿ. ಹೈಕಮಾಂಡ್ ಜವಾಬ್ದಾರಿ ಇದೆ, ದೆಹಲಿಗೆ ಕರೆಸಿ ವರದಿ ಕೇಳಬಹುದು, ಮುಂದೆ ಆಗದಂತೆ ಎಚ್ಚರ ವಹಿಸಲು ಸಲಹೆ ಸೂಚನೆ ಕೊಡಬಹುದು ಎಂದರು.
ಬೆಳಗಾವಿ ವಿಭಜನೆ ಸದ್ಯಕ್ಕಿಲ್ಲ, ಆಮೇಲೆ ಮಾಡಬಹುದು, ಮಾಡೋ ವಿಚಾರ ಇದೆ, ಸದ್ಯಕ್ಕಿಲ್ಲ ಎಂದು ಅವರು ನುಡಿದರು.

*ಸಿಎಂ ಬದಲಾವಣೆ ಪ್ರಶ್ನೆಗೆ ನಸುನಕ್ಕ ಸತೀಶ್ ಜಾರಕಿಹೊಳಿ:*
ಅದೇಗೆ ಬದಲಾವಣೆ ಮಾಡ್ತಾರೆ? ನಿಮಗೆ ಹೇಳಿದ್ದು ಯಾರು? ಎಂದು ಸಚಿವರು ನಸುನಕ್ಕರು.
ಎರಡೂವರೆ ವರ್ಷಕ್ಕೆ ಮಾಡ್ತಾರೆ ಅಂತ ನಿಮಗೆ ಯಾರು ಹೇಳಿದ್ದು?
ಎರಡೂವರೆ ವರ್ಷ ಅಂತ ಎಲ್ಲೂ ಇಲ್ಲ, ಅವರೇ ಇದ್ದಾರೆ ಮುಂದೆಯೂ ಇರುತ್ತಾರೆ ಅಷ್ಟೇ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು