10:02 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Mysore | ಮೋದಿ ಸರ್ಕಾರಕ್ಕೆ ಸೊನ್ನೆ ಅಂಕ: ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

09/06/2025, 13:36

ಮೈಸೂರು(reporterkarnataka.com): ಮೋದಿ ಅವರ ಸರ್ಕಾರಕ್ಕೆ ಸೊನ್ನೆ ಅಂಕ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಅವರು ಇಂದು ಮೈಸೂರಿನ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು.

ಮೋದಿ ಪ್ರಚಾರದಿಂದ ಬದುಕಿರುವುದು.
ಮೋದಿ ಅವರು ಪ್ರಚಾರದಿಂದ ಬದುಕಿರುವುದು. ನೋಟು ಅಮಾನ್ಯೀಕರಣದಿಂದ ಯಾರಿಗೆ ಅನುಕೂಲವಾಗಿದೆ? ಅಚ್ಚೆ ದಿನ್ ಆಯೇಗಾ , ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಕೊಡುತ್ತೇನೆ ಎಂದರು. ರೈತರ ಸಮಸ್ಯೆ ಬಗೆಹರಿಸುತ್ತೇನೆ ಎಂದರು. ರೈತರು ಒಂದು ವರ್ಷ ಕಾಲ ಚಳುವಳಿಯನ್ನು ಏಕೆ ಮಾಡಿದರು ಎಂದು ಪ್ರಶ್ನಿಸಿದರು.

*ಹನ್ನೊಂದು ವರ್ಷ ತುಂಬಿಸಿದ್ದಾರೆ ಅಷ್ಟೇ:
ಪ್ರಧಾನಮಂತ್ರಿಗಳು ಪ್ರಮುಖವಾಗಿ ಏನು ಹೇಳಿದ್ದರೋ ಅದನ್ನು ಮಾಡಿಲ್ಲ. ಹನ್ನೊಂದು ವರ್ಷ ತುಂಬಿಸಿದ್ದಾರೆ ಅಷ್ಟೇ ಎಂದು ತಿಳಿಸಿದರು.

*ಸುಳ್ಳು ವಿಚಾರಗಳಿಗೆ ಪ್ರಚಾರ:
ಮಾಧ್ಯಮಗಳು ಅವರಿಗೆ ಹೆಚ್ಚಿನ ಪ್ರಚಾರ ನೀಡುತ್ತಿವೆ. ಅವುಗಳ ಮೂಲಕ ಸುಳ್ಳು ವಿಚಾರಗಳಿಗೆ ಪ್ರಚಾರ ನೀಡುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆ ಗಳನ್ನು ಘೋಷಣೆ ಮಾಡಿದಾಗ ಇದನ್ನು ಅನುಷ್ಠಾನ ಮಾಡಲಾಗುವುದಿಲ್ಲ,ರಾಜ್ಯ ಸರ್ಕಾರ ದಿವಾಳಿಯಾಗುತ್ತದೆ ಎಂದವರು ಅದನ್ನೇ ನಕಲು ಮಾಡಿದರು ಎಂದರು. ರಾಜಸ್ಥಾನ, ಉತ್ತರ ಪ್ರದೇಶ, ದೆಹಲಿಯಲ್ಲಿ ಅದನ್ನೇ ಜಾರಿ ಮಾಡಿದರು. ಗುಜರಾತ್ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಶೇ.50ರಷ್ಟು ತೆರಿಗೆ ಹಂಚಿಕೆ ಮಾಡಿದರು. ಇವರೇ ಪ್ರಧಾನಿಗಳಾದಾಗ ಏನು ಮಾಡಿದರು? ಎಂದು ಪ್ರಶ್ನಿಸಿದರು. ನಿರ್ಮಲಾ ಸೀತಾರಾಮನ್ 5300 ಕೋಟಿಗಳನ್ನು ಕೊಡುವುದಾಗಿ ಘೋಷಿಸಿ ಕೊಡಲಿಲ್ಲ. 15 ನೇ ಹಣಕಾಸು ಆಯೋಗದವರು 11495 ಕೋಟಿ ಕೊಡಬೇಕು ಎಂದು ಶಿಫಾರಸ್ಸು ಮಾಡಿದರೂ ಕೊಡಲಿಲ್ಲ. ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಬಿಜೆಪಿ ಪ್ರಶ್ನೆ ಮಾಡುವುದನ್ನು ಬಿಟ್ಟು ಅಪಪ್ರಚಾರ ಮಾಡುತ್ತಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು