9:04 AM Wednesday5 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು ಸಮೀಪದ ಮನೆಗೆ ವಾಪಸ್!!

09/06/2025, 14:44

ಸಂತೋಷ್ ಅತ್ತಿಗೆರೆ
ಚಿಕ್ಕಮಗಳೂರು
info.reporterkarnataka@gmail.com

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದ ಕುಂಭಮೇಳದ ವೇಳೆ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ದರೊಬ್ಬರು 6 ತಿಂಗಳ ಬಳಿಕ ಪತ್ತೆಯಾಗಿದ್ದಾರೆ.
ಕಡೂರು ತಾಲೂಕಿನ ತಂಗಲಿ ಗ್ರಾಮದ ನರಸಿಂಹಮೂರ್ತಿ ಎಂಬವರು ಕುಂಭಮೇಳದ ವೇಳೆ ನಾಪತ್ತೆಯಾಗಿ, ಇದೀಗ ಪತ್ತೆಯಾದವರು.
ಜನವರಿ 28ರಂದು ನರಸಿಂಹಮೂರ್ತಿ ಅವರು
ಪ್ರಯಾಗ್ ರಾಜ್ ನಲ್ಲಿ ನಾಪತ್ತೆಯಾಗಿದ್ದರು. ಅವರು
ತಂಗಲಿ ಗ್ರಾಮದ ಚನ್ನಕೇಶವ ಸ್ವಾಮಿ ದೇವಾಲಯದ ಅರ್ಚಕರಾಗಿದ್ದರು. ಪುತ್ರ ಬದರೀನಾಥ್ ಜೊತೆ ಕುಟುಂಬ ಸಮೇತ ಕುಂಭ ಮೇಳಕ್ಕೆ ಹೋಗಿದ್ದರು‌. ಅಲ್ಲಿ ನಾಪತ್ತೆಯಾಗಿದ್ದರು. 3-4 ದಿನ ಹುಡುಕಿದ ಪುತ್ರ ಬದರೀನಾಥ್ ಕುಟುಂಬದೊಂದಿಗೆ ಊರಿಗೆ ವಾಪಸ್ಸಾಗಿದ್ದರು. ಕುಟುಂಬವನ್ನು ಊರಲ್ಲಿ ಬಿಟ್ಟು ಮತ್ತೆ ಹೋಗಿ ಹುಡುಕಿದ್ದರೂ ಸಿಕ್ಕಿರಲಿಲ್ಲ.
6 ತಿಂಗಳ ಬಳಿಕ ನಾಪತ್ತೆಯಾಗಿದ್ದ ನರಸಿಂಹಮೂರ್ತಿ ಮನೆಗೆ ವಾಪಸ್ ಬಂದಿದ್ದಾರೆ. ನರಸಿಂಹ ಮೂರ್ತಿಯವರು
ಮುಂಬೈನ ಶಾರದಾ ರಿಹ್ಯಾಬಿಲಿಟೇಷನ್ ಸಂಸ್ಥೆಯ ಆಶ್ರಯದಲ್ಲಿದ್ದರು. ಶಾರದಾ ಸಂಸ್ಥೆಯವರೇ ಕರೆತಂದು ನರಸಿಂಹಮೂರ್ತಿಯನ್ನ ಕುಟುಂಬಸ್ಥರಿಗೆ ಒಪ್ಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು