10:50 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಜತೆ ಕುಡುಪು ಗುಂಪು ಹತ್ಯೆ, ರೆಹ್ಮಾನ್ ಕೊಲೆಯನ್ನೂ ಎನ್‌ಐಎಗೆ ನೀಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ

09/06/2025, 23:31

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೂವರೆ ತಿಂಗಳಿನಿಂದೀಚೆಗೆ ನಡೆದಿರುವ ಮೂರು ಕೊಲೆ ಪ್ರಕರಣಗಳು ಇಡೀ ಕರಾವಳಿಯಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಕೊಲೆಗಳು ಒಂದಕ್ಕೊಂದು ಪ್ರತೀಕಾರದ ಕೊಲೆಯಾಗಿರುವ ಸಾಧ್ಯತೆಯಿದ್ದು, ಈ ಮೂರು ಪ್ರಕರಣಗಳನ್ನು ಕೂಡ ಎನ್ ‌ಐಎ ತನಿಖೆಗೆ ವಹಿಸಿದರೆ ದುಷ್ಜೃತ್ಯದ ಹಿಂದಿನ ಸತ್ಯ ಬಯಲಿಗೆ ಬರಲಿದೆ ಎಂದು ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.
ಕೇಂದ್ರ ಗೃಹ ಇಲಾಖೆಯು ಬಜಪೆ ಕಿನ್ನಿಪದವಿನಲ್ಲಿ ನಡೆದ ಸುಹಾಸ್ ಕೊಲೆ ಪ್ರಕರಣವನ್ನು ಎನ್‌ಐಎಗೆ ವಹಿಸಿದೆ. ಇದೇ ಮಾದರಿಯಲ್ಲಿ ಕುಡುಪುವಿನಲ್ಲಿ ಏ.27ರಂದು ಅಶ್ರಫ್ ಎಂಬಾತನನ್ನು ಗುಂಪು ಹತ್ಯೆ ಮಾಡಲಾಗಿದೆ. ಇದಾದ ಬಳಿಕ ಬಜಪೆ ಕಿನ್ನಿಪದವಿನಲ್ಲಿ ಮೇ 1ರಂದು ಸುಹಾಸ್ ಶೆಟ್ಟಿ ಕೊಲೆ ನಡೆದರೆ, ಈ ಘಟನೆ ನಡೆದ ಕೆಲವೇ ದಿನದ ಬಳಿಕ ಮೇ 27ರಂದು ಕುರಿಯಾಳ ಕಾಂಬೋಡಿ ಬಳಿ ಅಬ್ದುಲ್ ರಹೀಮಾನ್ ಕೊಲೆಯಾಗುತ್ತದೆ. ಈ ಮೂರು ಪ್ರಕರಣಗಳು ಒಂದಕ್ಕೊಂದು ಪ್ರತೀಕಾರದ ಕೊಲೆಯಾಗಿರುವ ಸಾಧ್ಯತೆಯಿದ್ದು, ಈ ಹಿನ್ನಲೆಯಲ್ಲಿ ಕೇಂದ್ರ ಸರಕಾರ ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಬಳಿಯುವ ಬದಲು ಮೂರು ಪ್ರಕರಣಗಳನ್ನು ಎನ್‌ ಐಎ ವಹಿಸಲಿ. ಆಗ ಇಡೀ ಕರಾವಳಿಯ ಕೋಮು ಸಂಘರ್ಷದ ಜಾಲ ಬಯಲಾಗಲಿದೆ. ನಾಗರಿಕರಿಗೂ ಇದರ ಹಿಂದಿರುವ ಸತ್ಯವನ್ನು ಅರಿಯಬಹುದಾಗಿದೆ. ಈ ಕಾರಣದಿಂದ ಕೇಂದ್ರ ಸರಕಾರ ಮೂರು ಪ್ರಕರಣವನ್ನು ಎನ್‌ಐಎಗೆ ವಹಿಸಬೇಕಾದ ಅಗತ್ಯವಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು