12:41 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಬೆಂಗಳೂರು ಕಾಲ್ತುಳಿತ: ಮೃತ ಶಿವಲಿಂಗನ‌ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರದ ಚೆಕ್ ಹಸ್ತಾಂತರ

09/06/2025, 23:35

ಶಿವು ರಾಠೋಡ ಯಾದಗಿರಿ

info.reporterjarnataka@gmail.cm

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ್ತಕ್ಕೆ ಬಲಿಯಾದ ಯಾದಗಿರಿ ಜಿಲ್ಲೆಯ ಹೊನಗೇರಾದ ಶಿವಲಿಂಗನ ಕುಟುಂಬಕ್ಕೆ ಜಿಲ್ಲಾಡಳಿತ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು 25 ಲಕ್ಷ ರೂ.ಗಳ ಚೆಕ್ ವಿತರಿಸಿದರು.
ಶಿವಲಿಂಗನ ತಂದೆ ಚಂದಪ್ಪ, ತಾಯಿ ಲಕ್ಷ್ಮಿ, ಅಣ್ಣ ಹೊನ್ನಪ್ಪ ಅವರನ್ನು ಸಚಿವರು ಮಾತಾಡಿ ಘಟನೆ ಬಗ್ಗೆ ವಿಷಾದ ವ್ಯಕ್ತ ಪಡಿಸಿ ಮಗನನ್ನು ತಂದು ಕೊಡಲು ಯಾರಿಂದಲ್ಲೂ ಸಾಧ್ಯವಿಲ್ಲ. ಕಾರಣ ಇನ್ನೊಬ್ಬ ಮಗ ಹೊನ್ನಪ್ಪನಲ್ಲಿಯೇ ಶಿವಲಿಂಗನನ್ನು ಕಾಣುವ ಮೂಲಕ ನೆಮ್ಮದಿ ಜೀವನ ನಡೆಸಿರಿ. ಹಣದ ಸದ್ಬಳಕೆ ಮಾಡಿಕೊಳ್ಳಿ ಎಂದು ಹೇಳಿದರು.
ನಡೆಯಬಾರದ್ದು ನಡೆದಿದೆ ವಿಧಿಯಾಟ, ಎದೆಗುಂದದೆ ಬದುಕು ಸಾಗಿಸಿ, ನಿಮ್ಮ ಇನ್ನೊಬ್ಬ ಮಗನಿಗೆ ಇಲ್ಲಿನ‌ ಮೆಡಿಕಲ್ ಕಾಲೇಜಿನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೌಕರಿ ಕೊಡಿಸುವ ಭರವಸೆ ನೀಡಿದರು.
ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರು ಮಾತನಾಡಿ, ಸರ್ಕಾರದ ಈ ಪರಿಹಾರದ ಹಣ ಪೊಲಾಗಿಸದೆ ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಲಿ ಎಂದರು.
ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನುರು, ಜಿಲ್ಲಾಧಿಕಾರಿ ಡಾ.ಸುಶೀಲಾ, ಹೆಚ್ಚುವರಿ ಡಿಸಿ ಶರಣಬಸಪ್ಪ ಕೋಟಪ್ಪಗೋಳ, ಎಸಿ ಡಾ.ಹಂಪಣ್ಣ ಸಜ್ಜನ್ ಸೇರಿದಂತೆಯೇ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು