12:27 PM Thursday31 - July 2025
ಬ್ರೇಕಿಂಗ್ ನ್ಯೂಸ್
ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಸ್ಪಾಟ್ ನಂಬರ್ 4ರ ಉತ್ಖನನ ಪ್ರಕ್ರಿಯೆ ಆರಂಭ ಬಾಲಮಂದಿರ, ಮಹಿಳಾ ನಿಲಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ: ಚಿಣ್ಣರನ್ನು ಮುದ್ದಾಡಿದ… USA | ಡ್ರೈವರ್ ಇಲ್ಲದ ಕಾರಿನಲ್ಲಿ ಪ್ರಯಾಣಿಸಿದ ಸ್ಪೀಕರ್ ಯು.ಟಿ. ಖಾದರ್!: ಇದು… Bangaluru | ಪತ್ರಿಕಾ ಸಂಪಾದಕರ ಕೈಕಟ್ಟಿ ಹಾಕಲಾಗುತ್ತಿದೆ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ… Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ…

ಇತ್ತೀಚಿನ ಸುದ್ದಿ

ಬೆಂಗಳೂರು ಕಾಲ್ತುಳಿತ: ಮೃತ ಶಿವಲಿಂಗನ‌ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರದ ಚೆಕ್ ಹಸ್ತಾಂತರ

09/06/2025, 23:35

ಶಿವು ರಾಠೋಡ ಯಾದಗಿರಿ

info.reporterjarnataka@gmail.cm

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ್ತಕ್ಕೆ ಬಲಿಯಾದ ಯಾದಗಿರಿ ಜಿಲ್ಲೆಯ ಹೊನಗೇರಾದ ಶಿವಲಿಂಗನ ಕುಟುಂಬಕ್ಕೆ ಜಿಲ್ಲಾಡಳಿತ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು 25 ಲಕ್ಷ ರೂ.ಗಳ ಚೆಕ್ ವಿತರಿಸಿದರು.
ಶಿವಲಿಂಗನ ತಂದೆ ಚಂದಪ್ಪ, ತಾಯಿ ಲಕ್ಷ್ಮಿ, ಅಣ್ಣ ಹೊನ್ನಪ್ಪ ಅವರನ್ನು ಸಚಿವರು ಮಾತಾಡಿ ಘಟನೆ ಬಗ್ಗೆ ವಿಷಾದ ವ್ಯಕ್ತ ಪಡಿಸಿ ಮಗನನ್ನು ತಂದು ಕೊಡಲು ಯಾರಿಂದಲ್ಲೂ ಸಾಧ್ಯವಿಲ್ಲ. ಕಾರಣ ಇನ್ನೊಬ್ಬ ಮಗ ಹೊನ್ನಪ್ಪನಲ್ಲಿಯೇ ಶಿವಲಿಂಗನನ್ನು ಕಾಣುವ ಮೂಲಕ ನೆಮ್ಮದಿ ಜೀವನ ನಡೆಸಿರಿ. ಹಣದ ಸದ್ಬಳಕೆ ಮಾಡಿಕೊಳ್ಳಿ ಎಂದು ಹೇಳಿದರು.
ನಡೆಯಬಾರದ್ದು ನಡೆದಿದೆ ವಿಧಿಯಾಟ, ಎದೆಗುಂದದೆ ಬದುಕು ಸಾಗಿಸಿ, ನಿಮ್ಮ ಇನ್ನೊಬ್ಬ ಮಗನಿಗೆ ಇಲ್ಲಿನ‌ ಮೆಡಿಕಲ್ ಕಾಲೇಜಿನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೌಕರಿ ಕೊಡಿಸುವ ಭರವಸೆ ನೀಡಿದರು.
ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರು ಮಾತನಾಡಿ, ಸರ್ಕಾರದ ಈ ಪರಿಹಾರದ ಹಣ ಪೊಲಾಗಿಸದೆ ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಲಿ ಎಂದರು.
ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನುರು, ಜಿಲ್ಲಾಧಿಕಾರಿ ಡಾ.ಸುಶೀಲಾ, ಹೆಚ್ಚುವರಿ ಡಿಸಿ ಶರಣಬಸಪ್ಪ ಕೋಟಪ್ಪಗೋಳ, ಎಸಿ ಡಾ.ಹಂಪಣ್ಣ ಸಜ್ಜನ್ ಸೇರಿದಂತೆಯೇ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು