1:24 AM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು, ಮಲೆನಾಡಿನಲ್ಲಿ ಶಾಂತಿ ಸ್ಥಾಪನೆಗೆ ಕ್ರಮ

11/06/2025, 21:15

ಬೆಂಗಳೂರು(reporterkarnataka.com): ಕರಾವಳಿ(ತುಳುನಾಡು) ಮತ್ತು ಮಲೆನಾಡು ಪ್ರದೇಶಗಳಲ್ಲಿ ಕೋಮುದ್ವೇಷ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ವಿಶೇಷ ಕೋಮು ನಿಗ್ರಹ ಪಡೆ ರಚಿಸಿದ್ದು, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅವರನ್ನು ಈ ವಿಶೇಷ ಪಡೆಯ ಪ್ರಭಾರ ಮುಖ್ಯಸ್ಥರಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
ಸುಹಾಸ್ ಶೆಟ್ಟಿ ಮತ್ತು ಅಬ್ದುಲ್ ರಹೀಂ ಹತ್ಯೆಗಳ ಬೆನ್ನಲ್ಲೇ ಈ ಕಾರ್ಯಕ್ಕೆ ವೇಗ ಸಿಕ್ಕಿದ್ದು, ಈಗ ಕಾಲ ಕೂಡಿ ಬಂದಿದೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಮಂಗಳೂರು ಕಮೀಷನರ್ ಅವರ ಕಾರ್ಯದಕ್ಷತೆಯ ಬಗ್ಗೆ ಆಕ್ಷೇಪಗಳು ಕೇಳಿ ಬಂದಿರುವುದರಿಂದ ಅವರನ್ನು ವರ್ಗಾವಣೆ ಮಾಡಿ ಹೊಸ ಅಧಿಕಾರಿಗಳನ್ನು ನೇಮಿಸಲಾಗಿದೆ. ಈ ಹೊಸ ಅಧಿಕಾರಿಗಳು ಕೆಲವು ತ್ವರಿತ ಕ್ರಮಗಳನ್ನು ಕೈಗೊಂಡಿದ್ದಾರಾದರೂ, ಇದು ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದೆ.
ಗೃಹ ಸಚಿವ ಜಿ. ಪರಮೇಶ್ವರ್ ಅವರು ಈ ಹಿಂದೆ ಕೋಮು ನಿಗ್ರಹ ಪಡೆ ರಚನೆಯ ಬಗ್ಗೆ ಪ್ರಸ್ತಾಪಿಸಿದ್ದರೂ, ಅದು ಕಾರ್ಯರೂಪಕ್ಕೆ ಬಂದಿರಲಿಲ್ಲ. ಈಗ 236 ಅಧಿಕಾರಿ-ಸಿಬ್ಬಂದಿಯನ್ನು ಒಳಗೊಂಡಂತೆ ಈ ವಿಶೇಷ ಪಡೆಗೆ ರಾಜ್ಯ ಪೊಲೀಸ್ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ. ಈ ಪಡೆ ಶಿವಮೊಗ್ಗ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಲಿದೆ.
ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್)ಯಿಂದ ಡಿಐಜಿ ಸೇರಿ 240 ಹುದ್ದೆಗಳನ್ನು ಹಿಂಪಡೆದು ಈ ವಿಶೇಷ ಕಾರ್ಯಪಡೆ ರಚಿಸಲಾಗಿದೆ. ಇಬ್ಬರು ಇನ್ಸ್‌ಪೆಕ್ಟರ್‌ಗಳು ಸೇರಿದಂತೆ 236 ಮಂದಿಯನ್ನು ನಿಯೋಜಿಸಲಾಗಿದೆ. ಅಮಿತ್ ಸಿಂಗ್ ಅವರು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಕೋಮು ಸೂಕ್ಷ್ಮ ವಿಷಯಗಳಲ್ಲಿ ಸಾಮರಸ್ಯ ಸ್ಥಾಪಿಸುವ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ.
ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಭವಿಷ್ಯದಲ್ಲಿ ಕೋಮು ಸಂಘರ್ಷಗಳಿಲ್ಲದೇ ಶಾಂತಿ ಮತ್ತು ಸಹಬಾಳ್ವೆ ಕಾಪಾಡುವ ನಿರೀಕ್ಷೆ ಎಲ್ಲರಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು