7:50 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಐಟಿ, ಇಡಿಯನ್ನು ಬಿಜೆಪಿ ತನ್ನ ಮೋರ್ಚಾ ಮಾಡಿಕೊಂಡಿದೆ: ಅರಣ್ಯ ಸಚಿವ ಈಶ್ವರ ಖಂಡ್ರೆ

11/06/2025, 21:19

ಬೆಂಗಳೂರು(reporterkarnataka.com): ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿಯ ಅಂಕಿ ಅಂಶಗಳ ಪರಾಮರ್ಶೆಗಾಗಿ ಮರು ಸಮೀಕ್ಷೆ ನಡೆಸುವ ನಿರ್ಧಾರವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ವಾಗತಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಅವರು, ಈ ವರದಿ 10 ವರ್ಷಗಳಷ್ಟು ಹಳೆಯದಾಗಿತ್ತು, ನಂತರ ಸಾಕಷ್ಟು ಬದಲಾವಣೆ ಆಗಿದೆ ಎಂಬುದು ಜನರ ಅಭಿಪ್ರಾಯವಾಗಿತ್ತು. ಇದಕ್ಕೆ ಅನುಗುಣವಾಗಿ ನ್ಯೂನತೆಗಳನ್ನು ಸರಿಪಡಿಸುವುದು ರಾಜ್ಯ ಸರ್ಕಾರದ ಕರ್ತವ್ಯವಾಗಿದೆ. ಹೀಗಾಗಿ ಎಲ್ಲ ಸಮುದಾಯಗಳಿಗೂ ಸಾಮಾಜಿಕ ನ್ಯಾಯ ಒದಗಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಈಗ ಪ್ರತಿಪಕ್ಷಗಳು ಸರ್ಕಾರದ ನಿರ್ಧಾರ ಟೀಕಿಸುತ್ತಿವೆ. ಬಿಜೆಪಿ 5 ವರ್ಷ ಅಧಿಕಾರದಲ್ಲಿತ್ತು. ಆಗ ಏಕೆ ಯಾವುದೇ ತೀರ್ಮಾನ ಕೈಗೊಳ್ಳಲಿಲ್ಲ ಎಂದು ಈಶ್ವರ ಖಂಡ್ರೆ ಪ್ರಶ್ನಿಸಿದರು.

*ಸ್ವಾಯತ್ತ ಸಂಸ್ಥೆಗಳ ದುರುಪಯೋಗ:*
ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಇ.ಡಿ., ಐ.ಟಿ., ಸಿಬಿಐನಂತಹ ಸ್ವಾಯತ್ತ ಸಂಸ್ಥೆಗಳನ್ನು ರಾಜಕೀಯ ದುರುದ್ದೇಶಕ್ಕಾಗಿ ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಜಗಜ್ಜಾಹೀರಾಗಿದೆ. ನ್ಯಾಯಾಲಯಗಳು ಕೂಡ ಹಲವು ಬಾರಿ ಎಚ್ಚರಿಕೆ ನೀಡಿವೆ ಎಂದರು.
ಸ್ವಾಯತ್ತ ಸಂಸ್ಥೆಗಳನ್ನು ಬಿಜೆಪಿಯು ತನ್ನ ಒಂದು ಮೋರ್ಚಾದಂತೆ ವರ್ತಿಸುವಂತೆ ಮಾಡಿದೆ. ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಮಾಡಿದ ಅಪಚಾರವಾಗಿದೆ ಎಂದು ಈಶ್ವರ ಖಂಡ್ರೆ ಹೇಳಿದರು.

*ಗೋಕುಲ್ ಅಮಾನತು ಸಮರ್ಥನೆ:*
ಎಚ್ಎಂಟಿ ವಶದಲ್ಲಿರುವ ಅರಣ್ಯ ಭೂಮಿಯನ್ನು ಡಿನೋಟಿಫೈ ಮಾಡಲು ಅಂದಿನ ಅರಣ್ಯ ಸಚಿವರ ಮತ್ತು ಸಚಿವ ಸಂಪುಟದ ಅನುಮತಿ ಇಲ್ಲದೆ ಅರ್ಜಿ ಸಲ್ಲಿಸಿರುವ ಐ.ಎಫ್.ಎಸ್. ಅಧಿಕಾರಿ ಆರ್. ಗೋಕುಲ್ ಅಮಾನತನ್ನು ಈಶ್ವರ ಖಂಡ್ರೆ ಸಮರ್ಥಿಸಿಕೊಂಡರು.
15 ಸಾವಿರ ಕೋಟಿ ರೂ. ಬೆಲೆ ಬಾಳುವ ಅರಣ್ಯ ಭೂಮಿಯಲ್ಲಿ ಇಂದಿಗೂ 280 ಎಕರೆಯಷ್ಟು ಅರಣ್ಯವಿದೆ. ಆದರೆ ಇದು ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಸುಪ್ರೀಂಕೋರ್ಟ್ ಗೆ ಸುಳ್ಳು ಪ್ರಮಾಣಪತ್ರ ನೀಡಿದ ಅಧಿಕಾರಿಗಳ ನಡೆ, ಕಾನೂನು ಬಾಹಿರವಾಗಿದ್ದು, ಇದು ಸರ್ಕಾರಕ್ಕೆ, 7 ಕೋಟಿ ಜನರಿಗೆ ಮಾಡಿದ ಅಪಚಾರ ಮತ್ತು ದ್ರೋಹ. ಹೀಗಾಗಿ ಸಂಬಂಧಿತ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಿದೆ. ಇದಕ್ಕೆ ಯಾರಾದರೂ ವಿರೋಧ ವ್ಯಕ್ತಪಡಿಸಿದರೆ, ಅದು ರಾಜ್ಯಕ್ಕೆ ಮಾಡುವ ದ್ರೋಹ ಎಂದರು.

*ಬನ್ನೇರುಘಟ್ಟದಲ್ಲಿ ಪ್ರಥಮ ಇ.ವಿ. ಸಫಾರಿ ಬಸ್:*
ವಾಹನಗಳಿಂದ ಹೆಚ್ಚುತ್ತಿರುವ ಇಂಗಾಲದ ಹೊರಹೊಮ್ಮುವಿಕೆ ತಡೆಯಲು ಇಲಾಖೆ ಪ್ರಯತ್ನಶೀಲವಾಗಿದ್ದು, ದೇಶದಲ್ಲೇ ಮೊದಲ ಬಾರಿಗೆ ಪ್ರಾಯೋಗಿಕವಾಗಿ ಬನ್ನೇರುಘಟ್ಟ ಸಫಾರಿಯಲ್ಲಿ ಹೊಗೆ ರಹಿತ ಇ.ವಿ. – ವಿದ್ಯುತ್ ಚಾಲಿತ ವಾಹನ ಬಳಕೆ ಮಾಡಲು ತೀರ್ಮಾನಿಸಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.
ನಾಳೆ ಈ ವಾಹನಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಲಾಗುವುದು ಎಂದು ತಿಳಿಸಿದ ಅವರು, ನಾಳೆ ಸಚಿವ ಸಂಪುಟದ ಸಭೆ ಇದ್ದು, ಕೇರಳ ರಾಜ್ಯದ ಅರಣ್ಯ ಸಚಿವರು ಭೇಟಿಯಾಗಲು ಬರುತ್ತಿರುವ ಹಿನ್ನೆಲೆಯಲ್ಲಿ ಈ ವಾರಾಂತ್ಯದೊಳಗೆ ಇ.ವಿ. ಸಫಾರಿ ವಾಹನಕ್ಕೆ ಚಾಲನೆ ನೀಡುವುದಾಗಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು