10:30 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

Covid | ಮೇ ತಿಂಗಳ ಬಳಿಕ ಕೋವಿಡ್ ಪರೀಕ್ಷೆ ಹೆಚ್ಚಿಸಲಾಗಿದೆ; ಭಯ ಬೇಡ: ಮುಖ್ಯಮಂತ್ರಿ

11/06/2025, 21:39

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ನಡೆಸಿದ ಸಭೆಯ ಮುಖ್ಯಾಂಶಗಳು:


•ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆದರೂ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಬೇಕು.

•ರಾಜ್ಯದಲ್ಲಿ ಮೇ ತಿಂಗಳ ಬಳಿಕ ಕೋವಿಡ್ ಪರೀಕ್ಷೆ ಹೆಚ್ಚಿಸಲಾಗಿದೆ. ಈ ತಿಂಗಳು ಪ್ರತಿ ದಿನ ಸರಾಸರಿ 500 ಪರೀಕ್ಷೆ ನಡೆಸುತ್ತಿದ್ದೇವೆ.

•ಕಳೆದ 10ದಿನಗಳಲ್ಲಿ 5ಸಾವಿರ ಪರೀಕ್ಷೆ ನಡೆಸಲಾಗಿದ್ದು, 862 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ 11ಸಾವು ಸಂಭವಿಸಿದೆ. ಆದರೂ ಇದರಲ್ಲಿ 10 ಪ್ರಕರಣಗಳಲ್ಲಿ ಕೋವಿಡ್ ಕಾರಣದಿಂದ ಸಾವು ಸಂಭವಿಸಿಲ್ಲ. ವಿವಿಧ ರೀತಿಯ ಅನಾರೋಗ್ಯಕ್ಕೆ ತುತ್ತಾಗಿದ್ದ ರೋಗಿಗಳು ಈ ಪ್ರಕರಣಗಳಲ್ಲಿ ಸಾವನ್ನಪ್ಪಿದ್ದಾರೆ. ಒಂದು ಪ್ರಕರಣದ ಆಡಿಟ್ ವರದಿ ಬರಬೇಕಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

•ಕೋವಿಡ್ ಬಗ್ಗೆ ಯಾರೂ ಅನಗತ್ಯ ಗೊಂದಲ ಮೂಡಿಸಬಾರದು. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಪ್ರಕರಣಗಳನ್ನು ನಿಭಾಯಿಸಲು ಸೂಕ್ತ ವ್ಯವಸ್ಥೆಯನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

•ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.

•ಖಾಸಗಿ ಆಸ್ಪತ್ರೆಗಳಲ್ಲಿ ಅನಗತ್ಯವಾಗಿ ಕೋವಿಡ್ ಪರೀಕ್ಷೆ ಹೆಸರಿನಲ್ಲಿ ದುಬಾರಿ ಶುಲ್ಕ ವಿಧಿಸುತ್ತಿರುವ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು.

•ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು