7:04 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಅಹಮದಾಬಾದ್: ಹಾಸ್ಟೆಲ್ ಮೇಲೆ ವಿಮಾನ ಪತನ; ಗುಜರಾತ್‌ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸಾವು

12/06/2025, 18:22

ನವದೆಹಲಿ(reporterkarnataka.com); ಟೇಕಾಫ್ ಆದ ತಕ್ಷಣ ಪತನಗೊಂಡ ಏರ್ ಇಂಡಿಯಾ ಬೋಯಿಂಗ್ ನಲ್ಲಿ ಪ್ರಯಾಣಿಸುತ್ತಿದ್ದ
ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸಾವನ್ನಪ್ಪಿದ್ದಾರೆ ಎಂದು ನಂಬಲಾರ್ಹ ಮೂಲಗಳು ತಿಳಿಸಿವೆ.
ವಿಜಯ್ ರೂಪಾನಿ ಅವರು ಅಹಮದಾಬಾದ್ ನಿಂದ ಲಂಡನ್ ಗೆ ಪ್ರಯಾಣಿಸುತ್ತಿದ್ದರು. ವಿಮಾನ
ಗುರುವಾರ ಮಧ್ಯಾಹ್ನ ಅಹಮದಾಬಾದ್
ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೂಡಲೇ ಏರ್ ಪೋರ್ಟ್ ಬಳಿ ವಿದ್ಯಾರ್ಥಿಗಳ ಹಾಸ್ಟೆಲ್ ಮೇಲೆ ಪತನಗೊಂಡಿತ್ತು. ಕೇವಲ 5 ನಿಮಿಷಗಳ ಕಾಲ ಮಾತ್ರ ಹಾರಾಟ ನಡೆಸಿತ್ತು. ವಿಮಾನ ಪೈಲಟ್ ವಿಮಾನವನ್ನು ಮೇಲಕ್ಕೆತ್ತಲು ಬಹಳಷ್ಟು ಪ್ರಯತ್ನ ಪಟ್ಟರೂ ವಿಮಾನ ಮೇಲೇರದೆ ಪತನಗೊಂಡಿತು.
ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಪ್ರಯಾಣಿಸುತ್ತಿದ್ದರು ಎಂದು ಈ ಮುನ್ನವೇ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದರು.
ವಿಜಯ್ ರೂಪಾನಿ ಅವರು ಏರ್ ಇಂಡಿಯಾ ವಿಮಾನದಲ್ಲಿ ಲಂಡನ್‌ಗೆ ಹೋಗುತ್ತಿದ್ದರು ಎಂದು ರಾಜ್ಯ ಬಿಜೆಪಿಯ ಹಿರಿಯ ನಾಯಕ ಭೂಪೇಂದ್ರಸಿನ್ಹ್ ಚುಡಾಸಮಾ ಹೇಳಿದ್ದರು.
ಗುರುವಾರ ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ 242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತು ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಇಲ್ಲಿನ ವಸತಿ ಪ್ರದೇಶದಲ್ಲಿ ಹಾಸ್ಟೇಲ್ ಮೇಲೆ ಪತನಗೊಂಡಿದೆ. ಹಾಸ್ಟೇಲ್ ನಲ್ಲಿದ್ದ ವಿದ್ಯಾರ್ಥಿಗಳು ಕೂಡ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು