10:45 PM Monday23 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಅಹಮದಾಬಾದ್: ಹಾಸ್ಟೆಲ್ ಮೇಲೆ ವಿಮಾನ ಪತನ; ಗುಜರಾತ್‌ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸಾವು

12/06/2025, 18:22

ನವದೆಹಲಿ(reporterkarnataka.com); ಟೇಕಾಫ್ ಆದ ತಕ್ಷಣ ಪತನಗೊಂಡ ಏರ್ ಇಂಡಿಯಾ ಬೋಯಿಂಗ್ ನಲ್ಲಿ ಪ್ರಯಾಣಿಸುತ್ತಿದ್ದ
ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸಾವನ್ನಪ್ಪಿದ್ದಾರೆ ಎಂದು ನಂಬಲಾರ್ಹ ಮೂಲಗಳು ತಿಳಿಸಿವೆ.
ವಿಜಯ್ ರೂಪಾನಿ ಅವರು ಅಹಮದಾಬಾದ್ ನಿಂದ ಲಂಡನ್ ಗೆ ಪ್ರಯಾಣಿಸುತ್ತಿದ್ದರು. ವಿಮಾನ
ಗುರುವಾರ ಮಧ್ಯಾಹ್ನ ಅಹಮದಾಬಾದ್
ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೂಡಲೇ ಏರ್ ಪೋರ್ಟ್ ಬಳಿ ವಿದ್ಯಾರ್ಥಿಗಳ ಹಾಸ್ಟೆಲ್ ಮೇಲೆ ಪತನಗೊಂಡಿತ್ತು. ಕೇವಲ 5 ನಿಮಿಷಗಳ ಕಾಲ ಮಾತ್ರ ಹಾರಾಟ ನಡೆಸಿತ್ತು. ವಿಮಾನ ಪೈಲಟ್ ವಿಮಾನವನ್ನು ಮೇಲಕ್ಕೆತ್ತಲು ಬಹಳಷ್ಟು ಪ್ರಯತ್ನ ಪಟ್ಟರೂ ವಿಮಾನ ಮೇಲೇರದೆ ಪತನಗೊಂಡಿತು.
ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಪ್ರಯಾಣಿಸುತ್ತಿದ್ದರು ಎಂದು ಈ ಮುನ್ನವೇ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದರು.
ವಿಜಯ್ ರೂಪಾನಿ ಅವರು ಏರ್ ಇಂಡಿಯಾ ವಿಮಾನದಲ್ಲಿ ಲಂಡನ್‌ಗೆ ಹೋಗುತ್ತಿದ್ದರು ಎಂದು ರಾಜ್ಯ ಬಿಜೆಪಿಯ ಹಿರಿಯ ನಾಯಕ ಭೂಪೇಂದ್ರಸಿನ್ಹ್ ಚುಡಾಸಮಾ ಹೇಳಿದ್ದರು.
ಗುರುವಾರ ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ 242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತು ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಇಲ್ಲಿನ ವಸತಿ ಪ್ರದೇಶದಲ್ಲಿ ಹಾಸ್ಟೇಲ್ ಮೇಲೆ ಪತನಗೊಂಡಿದೆ. ಹಾಸ್ಟೇಲ್ ನಲ್ಲಿದ್ದ ವಿದ್ಯಾರ್ಥಿಗಳು ಕೂಡ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು