12:05 AM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಶವಗಳ ನಡುವಿಂದ ಸಾವು ಗೆದ್ದು ಬಂದ ಮೃತ್ಯುಂಜಯ!: ವಿಮಾನ ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ರಮೇಶ್ ಬಿಸ್ವಾಸ್!!

12/06/2025, 21:53

ಅಹಮದಾಬಾದ್(reporterkarnataka.com):
ಅಹಮದಾಬಾದ್ ನ ಏರ್ ಪೋರ್ಟ್ ನಿಂದ ಟೇಕಾಫ್ ಆದ ತಕ್ಷಣ ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ
ಎಲ್ಲ 242 ಮಂದಿ ಪ್ರಯಾಣಕರು ಸಾವನ್ಬಪ್ಪಿದ್ದಾರೆ ಅಂದುಕೊಳ್ಳುವಷ್ಟರಲ್ಲಿ ಶವಗಳ ರಾಶಿಯಿಂದ ಓರ್ವ ಎದ್ದು ಬಂದಿದ್ದಾರೆ.
ಬ್ರಿಟಿಷ್ ಪ್ರಜೆಯಾದ ಭಾರತೀಯ ಮೂಲದ ರಮೇಶ್ ಬಿಸ್ವಾಸ್ ಎಂಬವರೇ ಸಾವಿನಿಂದ ಗೆದ್ದು ಬಂದ ಮೃತ್ಯುಂಜಯ. ರಮೇಶ್ ಬಿಸ್ವಾಸ್ ಅವರು ವಿಮಾನಕ್ಕೆ ಬೆಂಕಿ ಹತ್ತಿಕೊಳ್ಳುವುದರೊಳಗೆ ವಿಮಾನದಿಂದ ಹೊರಗೆ ಜಿಗಿದಿದ್ದಾರೆ. ಸಣ್ಣಪುಟ್ಟ ಗಾಯಗಳನ್ನು ಬಿಟ್ಟರೆ ಬಿಸ್ವಾಸ್ ಅವರಿಗೆ ಬೇರೆ ಏನೂ ತೊಂದರೆಯಾಗಿಲ್ಲ. ಅವರು ನಡೆದುಕೊಂಡೇ ದುರಂತ ಸ್ಥಳದಿಂದ ಹೊರಗೆ ಬಂದಿದ್ದಾರೆ. ಟೇಕ್ ಆಫ್ ಆದ 30 ಸೆಕೆಂಡ್‌ಗಳಲ್ಲಿ ವಿಮಾನ ಪತನಗೊಂಡಿದೆ ಎಂದು ರಮೇಶ್ ಕುಮಾರ್ ಹೇಳಿದ್ದಾರೆ. ನಂತರ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್‌ನ ಗೇಟ್‌ವಿಕ್ ವಿಮಾನ ನಿಲ್ದಾಣಕ್ಕೆ ಹೊರಟ ಏರ್ ಇಂಡಿಯಾ ಬೋಯಿಂಗ್ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿತು.

ಭಾರತದ 169 ಮಂದಿ ಸೇರಿದಂತೆ 53 ಬ್ರಿಟನ್ ಪ್ರಜೆಗಳು ಹಾಗೂ ಇತರರು ಸೇರಿ ಒಟ್ಟು 243 ಮಂದಿ ವಿಮಾನದಲ್ಲಿದ್ದರು ಎನ್ನಲಾಗಿದ್ದು, ಇವರಲ್ಲಿ ಭಾರತೀಯ ಮೂಲದ ಬ್ರಿಟನ್ ಪ್ರಜೆ ರಮೇಶ್ ವಿಶ್ವಾಸ್ ಕುಮಾರ್ ಪವಾಡ ಸದೃಶರಾಗಿ ಬದುಕುಳಿದಿದ್ದಾರೆ.

ವಿಮಾನದ ತುರ್ತು ನಿರ್ಗಮನ ದ್ವಾರದ ಬಳಿಯ 11ಏ ಸೀಟ್‌ನಲ್ಲಿ ಆಸೀನರಾಗಿದ್ದ, ರಮೇಶ್ ಅವರು ವಿಮಾನ ಪತನಗೊಳ್ಳುತ್ತಿದ್ದ ಸಂದರ್ಭದಲ್ಲಿ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು