9:11 PM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಶವಗಳ ನಡುವಿಂದ ಸಾವು ಗೆದ್ದು ಬಂದ ಮೃತ್ಯುಂಜಯ!: ವಿಮಾನ ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ರಮೇಶ್ ಬಿಸ್ವಾಸ್!!

12/06/2025, 21:53

ಅಹಮದಾಬಾದ್(reporterkarnataka.com):
ಅಹಮದಾಬಾದ್ ನ ಏರ್ ಪೋರ್ಟ್ ನಿಂದ ಟೇಕಾಫ್ ಆದ ತಕ್ಷಣ ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ
ಎಲ್ಲ 242 ಮಂದಿ ಪ್ರಯಾಣಕರು ಸಾವನ್ಬಪ್ಪಿದ್ದಾರೆ ಅಂದುಕೊಳ್ಳುವಷ್ಟರಲ್ಲಿ ಶವಗಳ ರಾಶಿಯಿಂದ ಓರ್ವ ಎದ್ದು ಬಂದಿದ್ದಾರೆ.
ಬ್ರಿಟಿಷ್ ಪ್ರಜೆಯಾದ ಭಾರತೀಯ ಮೂಲದ ರಮೇಶ್ ಬಿಸ್ವಾಸ್ ಎಂಬವರೇ ಸಾವಿನಿಂದ ಗೆದ್ದು ಬಂದ ಮೃತ್ಯುಂಜಯ. ರಮೇಶ್ ಬಿಸ್ವಾಸ್ ಅವರು ವಿಮಾನಕ್ಕೆ ಬೆಂಕಿ ಹತ್ತಿಕೊಳ್ಳುವುದರೊಳಗೆ ವಿಮಾನದಿಂದ ಹೊರಗೆ ಜಿಗಿದಿದ್ದಾರೆ. ಸಣ್ಣಪುಟ್ಟ ಗಾಯಗಳನ್ನು ಬಿಟ್ಟರೆ ಬಿಸ್ವಾಸ್ ಅವರಿಗೆ ಬೇರೆ ಏನೂ ತೊಂದರೆಯಾಗಿಲ್ಲ. ಅವರು ನಡೆದುಕೊಂಡೇ ದುರಂತ ಸ್ಥಳದಿಂದ ಹೊರಗೆ ಬಂದಿದ್ದಾರೆ. ಟೇಕ್ ಆಫ್ ಆದ 30 ಸೆಕೆಂಡ್‌ಗಳಲ್ಲಿ ವಿಮಾನ ಪತನಗೊಂಡಿದೆ ಎಂದು ರಮೇಶ್ ಕುಮಾರ್ ಹೇಳಿದ್ದಾರೆ. ನಂತರ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್‌ನ ಗೇಟ್‌ವಿಕ್ ವಿಮಾನ ನಿಲ್ದಾಣಕ್ಕೆ ಹೊರಟ ಏರ್ ಇಂಡಿಯಾ ಬೋಯಿಂಗ್ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿತು.

ಭಾರತದ 169 ಮಂದಿ ಸೇರಿದಂತೆ 53 ಬ್ರಿಟನ್ ಪ್ರಜೆಗಳು ಹಾಗೂ ಇತರರು ಸೇರಿ ಒಟ್ಟು 243 ಮಂದಿ ವಿಮಾನದಲ್ಲಿದ್ದರು ಎನ್ನಲಾಗಿದ್ದು, ಇವರಲ್ಲಿ ಭಾರತೀಯ ಮೂಲದ ಬ್ರಿಟನ್ ಪ್ರಜೆ ರಮೇಶ್ ವಿಶ್ವಾಸ್ ಕುಮಾರ್ ಪವಾಡ ಸದೃಶರಾಗಿ ಬದುಕುಳಿದಿದ್ದಾರೆ.

ವಿಮಾನದ ತುರ್ತು ನಿರ್ಗಮನ ದ್ವಾರದ ಬಳಿಯ 11ಏ ಸೀಟ್‌ನಲ್ಲಿ ಆಸೀನರಾಗಿದ್ದ, ರಮೇಶ್ ಅವರು ವಿಮಾನ ಪತನಗೊಳ್ಳುತ್ತಿದ್ದ ಸಂದರ್ಭದಲ್ಲಿ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು