9:43 AM Saturday14 - June 2025
ಬ್ರೇಕಿಂಗ್ ನ್ಯೂಸ್
Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು… ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ… ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ:… ಡಿಸಿಎಂ ಡಿಕೆಶಿ ರಾಜೀನಾಮೆಗೆ ಹೈಕಮಾಂಡ್‌ ಸೂಚಿಸಲಿ: ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ…

ಇತ್ತೀಚಿನ ಸುದ್ದಿ

ಈಶ್ವರ ಖಂಡ್ರೆ – ಕೇರಳ ಅರಣ್ಯ ಸಚಿವ ಸಶೀಂದ್ರನ್ ಭೇಟಿ: ಕೇರಳ ಮೃಗಾಲಯಕ್ಕೆ ತಾಂತ್ರಿಕ ನೈಪುಣ್ಯತೆಯ ವಿನಿಮಯಕ್ಕೆ ಸಮ್ಮತಿ

12/06/2025, 23:56

ಬೆಂಗಳೂರು(reporterkarnataka.com): ಕೇರಳದ ತ್ರಿಶೂರ್ ಜಿಲ್ಲೆಯ ಪುಥೂರ್ ನಲ್ಲಿ ನೂತನವಾಗಿ ಆರಂಭಿಸುತ್ತಿರುವ ಜೈವಿಕ ಉದ್ಯಾನದಲ್ಲಿ ವನ್ಯಜೀವಿ ಮತ್ತು ಪಕ್ಷಿಗಳ ನಿರ್ವಹಣೆಗೆ ಅಗತ್ಯವಾದ ನೈಪುಣ್ಯತೆ ಮತ್ತು ಜ್ಞಾನ ವಿನಿಮಯಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಮ್ಮತಿಸಿದ್ದಾರೆ.
ವಿಕಾಸಸೌಧದಲ್ಲಿಂದು ತಮ್ಮನ್ನು ಭೇಟಿಯಾದ ಕೇರಳ ಅರಣ್ಯ ಸಚಿವ ಎ.ಕೆ. ಸಶೀಂದ್ರನ್, ಕೇರಳ ಅರಣ್ಯ ಇಲಾಖೆಯಿಂದ ಆರಂಭಿಸಲಾಗುತ್ತಿರುವ ಪ್ರಥಮ ಜೈವಿಕ ಉದ್ಯಾನದಲ್ಲಿ ವನ್ಯಜೀವಿಗಳ ನಿರ್ವಹಣೆ ಕುರಿತಂತೆ ತಾಂತ್ರಿಕ ನೈಪುಣ್ಯತೆ ಹಂಚಿಕೊಳ್ಳುವಂತೆ ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.
ವಿಶ್ವ ವಿಖ್ಯಾತ ಮೃಗಾಲಯ ವಿನ್ಯಾಸಕಾರ ಆಸ್ಟ್ರೇಲಿಯಾದ ಜಾನ್ ಸಿಯೋ ಅವರಿಂದ ಜೈವಿಕ ಉದ್ಯಾನದ ವಿನ್ಯಾಸ ಮಾಡಿಸಿದ್ದು, 136.8 ಎಕರೆ ಪ್ರದೇಶದಲ್ಲಿ ಇದು ಸಾಕಾರವಾಗುತ್ತಿದ್ದು, ಬರುವ ಆಗಸ್ಟ್ ಅಂತ್ಯಕ್ಕೆ ಕಾರ್ಯಾರಂಭ ಮಾಡಲಿದೆ ಎಂದು ಸಚಿವ ಸಶೀಂದ್ರನ್ ಮಾಹಿತಿ ನೀಡಿದರು, ಹೊಸ ಮೃಗಾಲಯಕ್ಕೆ ಕರ್ನಾಟಕದ ಮೃಗಾಲಯಗಳಲ್ಲಿ ಹೆಚ್ಚುವರಿಯಾಗಿರುವ ಕೆಲವು ವನ್ಯಜೀವಿಗಳನ್ನು ನೀಡುವಂತೆಯೂ ಮನವಿ ಮಾಡಿದರು.
ಈ ಭೇಟಿಯ ವೇಳೆ ಕೇರಳ ರಾಜ್ಯದಲ್ಲಿ ಡೀಮ್ಡ್ ಅರಣ್ಯ ಕುರಿತಂತೆ ಕೈಗೊಂಡಿರುವ ಕ್ರಮಗಳು, ಕಸ್ತೂರಿ ರಂಗನ್ ವರದಿಯ ಕುರಿತಂತೆ ಕೈಗೊಳ್ಳಲಾಗಿರುವ ನಿರ್ಣಯಗಳ ಕುರಿತಂತೆಯೂ ಸಮಾಲೋಚಿಸಲಾಯಿತು.

ಕೇರಳ ಅರಣ್ಯ ಇಲಾಖೆಯ ಮುಖ್ಯ ವನ್ಯಜೀವಿ ಪರಿಪಾಲಕ ಪ್ರಮೋದ್ ಜಿ ಕೃಷ್ಣನ್ ಮತ್ತು ಕರ್ನಾಟಕದ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳಾದ ಮೀನಾಕ್ಷಿ ನೇಗಿ, ಸುಭಾಷ್ ಮಲ್ಕಡೆ, ಸುನೀಲ್ ಪನ್ವಾರ್, ಸೂರ್ಯ ಸೇನ್ ಮತ್ತಿತರರು ಸಭೆಯಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು