3:26 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಈಶ್ವರ ಖಂಡ್ರೆ – ಕೇರಳ ಅರಣ್ಯ ಸಚಿವ ಸಶೀಂದ್ರನ್ ಭೇಟಿ: ಕೇರಳ ಮೃಗಾಲಯಕ್ಕೆ ತಾಂತ್ರಿಕ ನೈಪುಣ್ಯತೆಯ ವಿನಿಮಯಕ್ಕೆ ಸಮ್ಮತಿ

12/06/2025, 23:56

ಬೆಂಗಳೂರು(reporterkarnataka.com): ಕೇರಳದ ತ್ರಿಶೂರ್ ಜಿಲ್ಲೆಯ ಪುಥೂರ್ ನಲ್ಲಿ ನೂತನವಾಗಿ ಆರಂಭಿಸುತ್ತಿರುವ ಜೈವಿಕ ಉದ್ಯಾನದಲ್ಲಿ ವನ್ಯಜೀವಿ ಮತ್ತು ಪಕ್ಷಿಗಳ ನಿರ್ವಹಣೆಗೆ ಅಗತ್ಯವಾದ ನೈಪುಣ್ಯತೆ ಮತ್ತು ಜ್ಞಾನ ವಿನಿಮಯಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಮ್ಮತಿಸಿದ್ದಾರೆ.
ವಿಕಾಸಸೌಧದಲ್ಲಿಂದು ತಮ್ಮನ್ನು ಭೇಟಿಯಾದ ಕೇರಳ ಅರಣ್ಯ ಸಚಿವ ಎ.ಕೆ. ಸಶೀಂದ್ರನ್, ಕೇರಳ ಅರಣ್ಯ ಇಲಾಖೆಯಿಂದ ಆರಂಭಿಸಲಾಗುತ್ತಿರುವ ಪ್ರಥಮ ಜೈವಿಕ ಉದ್ಯಾನದಲ್ಲಿ ವನ್ಯಜೀವಿಗಳ ನಿರ್ವಹಣೆ ಕುರಿತಂತೆ ತಾಂತ್ರಿಕ ನೈಪುಣ್ಯತೆ ಹಂಚಿಕೊಳ್ಳುವಂತೆ ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.
ವಿಶ್ವ ವಿಖ್ಯಾತ ಮೃಗಾಲಯ ವಿನ್ಯಾಸಕಾರ ಆಸ್ಟ್ರೇಲಿಯಾದ ಜಾನ್ ಸಿಯೋ ಅವರಿಂದ ಜೈವಿಕ ಉದ್ಯಾನದ ವಿನ್ಯಾಸ ಮಾಡಿಸಿದ್ದು, 136.8 ಎಕರೆ ಪ್ರದೇಶದಲ್ಲಿ ಇದು ಸಾಕಾರವಾಗುತ್ತಿದ್ದು, ಬರುವ ಆಗಸ್ಟ್ ಅಂತ್ಯಕ್ಕೆ ಕಾರ್ಯಾರಂಭ ಮಾಡಲಿದೆ ಎಂದು ಸಚಿವ ಸಶೀಂದ್ರನ್ ಮಾಹಿತಿ ನೀಡಿದರು, ಹೊಸ ಮೃಗಾಲಯಕ್ಕೆ ಕರ್ನಾಟಕದ ಮೃಗಾಲಯಗಳಲ್ಲಿ ಹೆಚ್ಚುವರಿಯಾಗಿರುವ ಕೆಲವು ವನ್ಯಜೀವಿಗಳನ್ನು ನೀಡುವಂತೆಯೂ ಮನವಿ ಮಾಡಿದರು.
ಈ ಭೇಟಿಯ ವೇಳೆ ಕೇರಳ ರಾಜ್ಯದಲ್ಲಿ ಡೀಮ್ಡ್ ಅರಣ್ಯ ಕುರಿತಂತೆ ಕೈಗೊಂಡಿರುವ ಕ್ರಮಗಳು, ಕಸ್ತೂರಿ ರಂಗನ್ ವರದಿಯ ಕುರಿತಂತೆ ಕೈಗೊಳ್ಳಲಾಗಿರುವ ನಿರ್ಣಯಗಳ ಕುರಿತಂತೆಯೂ ಸಮಾಲೋಚಿಸಲಾಯಿತು.

ಕೇರಳ ಅರಣ್ಯ ಇಲಾಖೆಯ ಮುಖ್ಯ ವನ್ಯಜೀವಿ ಪರಿಪಾಲಕ ಪ್ರಮೋದ್ ಜಿ ಕೃಷ್ಣನ್ ಮತ್ತು ಕರ್ನಾಟಕದ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳಾದ ಮೀನಾಕ್ಷಿ ನೇಗಿ, ಸುಭಾಷ್ ಮಲ್ಕಡೆ, ಸುನೀಲ್ ಪನ್ವಾರ್, ಸೂರ್ಯ ಸೇನ್ ಮತ್ತಿತರರು ಸಭೆಯಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು