11:20 PM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಈಶ್ವರ ಖಂಡ್ರೆ – ಕೇರಳ ಅರಣ್ಯ ಸಚಿವ ಸಶೀಂದ್ರನ್ ಭೇಟಿ: ಕೇರಳ ಮೃಗಾಲಯಕ್ಕೆ ತಾಂತ್ರಿಕ ನೈಪುಣ್ಯತೆಯ ವಿನಿಮಯಕ್ಕೆ ಸಮ್ಮತಿ

12/06/2025, 23:56

ಬೆಂಗಳೂರು(reporterkarnataka.com): ಕೇರಳದ ತ್ರಿಶೂರ್ ಜಿಲ್ಲೆಯ ಪುಥೂರ್ ನಲ್ಲಿ ನೂತನವಾಗಿ ಆರಂಭಿಸುತ್ತಿರುವ ಜೈವಿಕ ಉದ್ಯಾನದಲ್ಲಿ ವನ್ಯಜೀವಿ ಮತ್ತು ಪಕ್ಷಿಗಳ ನಿರ್ವಹಣೆಗೆ ಅಗತ್ಯವಾದ ನೈಪುಣ್ಯತೆ ಮತ್ತು ಜ್ಞಾನ ವಿನಿಮಯಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಮ್ಮತಿಸಿದ್ದಾರೆ.
ವಿಕಾಸಸೌಧದಲ್ಲಿಂದು ತಮ್ಮನ್ನು ಭೇಟಿಯಾದ ಕೇರಳ ಅರಣ್ಯ ಸಚಿವ ಎ.ಕೆ. ಸಶೀಂದ್ರನ್, ಕೇರಳ ಅರಣ್ಯ ಇಲಾಖೆಯಿಂದ ಆರಂಭಿಸಲಾಗುತ್ತಿರುವ ಪ್ರಥಮ ಜೈವಿಕ ಉದ್ಯಾನದಲ್ಲಿ ವನ್ಯಜೀವಿಗಳ ನಿರ್ವಹಣೆ ಕುರಿತಂತೆ ತಾಂತ್ರಿಕ ನೈಪುಣ್ಯತೆ ಹಂಚಿಕೊಳ್ಳುವಂತೆ ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.
ವಿಶ್ವ ವಿಖ್ಯಾತ ಮೃಗಾಲಯ ವಿನ್ಯಾಸಕಾರ ಆಸ್ಟ್ರೇಲಿಯಾದ ಜಾನ್ ಸಿಯೋ ಅವರಿಂದ ಜೈವಿಕ ಉದ್ಯಾನದ ವಿನ್ಯಾಸ ಮಾಡಿಸಿದ್ದು, 136.8 ಎಕರೆ ಪ್ರದೇಶದಲ್ಲಿ ಇದು ಸಾಕಾರವಾಗುತ್ತಿದ್ದು, ಬರುವ ಆಗಸ್ಟ್ ಅಂತ್ಯಕ್ಕೆ ಕಾರ್ಯಾರಂಭ ಮಾಡಲಿದೆ ಎಂದು ಸಚಿವ ಸಶೀಂದ್ರನ್ ಮಾಹಿತಿ ನೀಡಿದರು, ಹೊಸ ಮೃಗಾಲಯಕ್ಕೆ ಕರ್ನಾಟಕದ ಮೃಗಾಲಯಗಳಲ್ಲಿ ಹೆಚ್ಚುವರಿಯಾಗಿರುವ ಕೆಲವು ವನ್ಯಜೀವಿಗಳನ್ನು ನೀಡುವಂತೆಯೂ ಮನವಿ ಮಾಡಿದರು.
ಈ ಭೇಟಿಯ ವೇಳೆ ಕೇರಳ ರಾಜ್ಯದಲ್ಲಿ ಡೀಮ್ಡ್ ಅರಣ್ಯ ಕುರಿತಂತೆ ಕೈಗೊಂಡಿರುವ ಕ್ರಮಗಳು, ಕಸ್ತೂರಿ ರಂಗನ್ ವರದಿಯ ಕುರಿತಂತೆ ಕೈಗೊಳ್ಳಲಾಗಿರುವ ನಿರ್ಣಯಗಳ ಕುರಿತಂತೆಯೂ ಸಮಾಲೋಚಿಸಲಾಯಿತು.

ಕೇರಳ ಅರಣ್ಯ ಇಲಾಖೆಯ ಮುಖ್ಯ ವನ್ಯಜೀವಿ ಪರಿಪಾಲಕ ಪ್ರಮೋದ್ ಜಿ ಕೃಷ್ಣನ್ ಮತ್ತು ಕರ್ನಾಟಕದ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳಾದ ಮೀನಾಕ್ಷಿ ನೇಗಿ, ಸುಭಾಷ್ ಮಲ್ಕಡೆ, ಸುನೀಲ್ ಪನ್ವಾರ್, ಸೂರ್ಯ ಸೇನ್ ಮತ್ತಿತರರು ಸಭೆಯಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು