6:31 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

19ನೇ ರಾಜ್ಯ ಮಟ್ಟದ ಅಂತರ್‌ ಕ್ಲಬ್ ರೋಟರಾಕ್ಟ್ ರಸಪ್ರಶ್ನೆ ಸ್ಪರ್ಧಾಕೂಟ ; ರೋಟರ‌್ಯಾಕ್ಟ್ ಕ್ಲಬ್ ಮಂಗಳೂರು ಸಿಟಿಗೆ ಪ್ರಶಸ್ತಿ

14/06/2025, 08:11

ಮಂಗಳೂರು (reporterkarnataka.com)
ಜಿಲ್ಲಾ ರೋಟರಾಕ್ಟ್ ಸಂಸ್ಥೆಯ ಮತ್ತು ರೋಟರಾಕ್ಟ್ ಮಂಗಳೂರು ಸಿಟಿ‌ ಸಂಸ್ಥೆಯ ಜಂಟಿ ಆಶ್ರಯದಲ್ಲಿ ರೋಟರಾಕ್ಟ್ ಮಾಹಿತಿ ಮತ್ತು ಜಾಗೃತಿ ಅಭಿಯಾನದ ಅಂಗವಾಗಿ ದಿ| ರೋ. ಶಾಂತಾರಾಮ್ ವಾಮಂಜೂರು ಸ್ಮಾರಕ 19ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ್‌ ಕ್ಲಬ್ ರೋಟರಾಕ್ಟ್ ರಸಪ್ರಶ್ನೆ ಸ್ಪರ್ಧಾಕೂಟ ಸಂಸ್ಥೆಯ ಸಭಾಪತಿ ರೋ। ಡಾ| ದೇವದಾಸ್ ರೈ ನೇತೃತ್ವದಲ್ಲಿ ಇತ್ತೀಚೆಗೆ ನಗರದ ಈಡನ್ ಕ್ಲಬ್ ಸಭಾಂಗಣದಲ್ಲಿ ಜರಗಿತು.

ರೋಟರಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯನ್ನು ಪ್ರತಿನಿಧಿಸಿದ ರೋ। ಸಾತ್ವಿಕ್ ಕೊಟೆಕಾರ್ ಮತ್ತು ರೋ ಶಮನ್ ಜೋಡಿ ಪ್ರಥಮ ಸ್ಥಾನ ಗಳಿಸಿತು. ರೋಟರಾಕ್ಟ್ ಕ್ಲಬ್ ನವಚೈತನ್ಯ. ಬೆಂಗಳೂರು ಸಂಸ್ಥೆಯನ್ನು ಪ್ರತಿನಿಧಿಸಿದ ರೋ। ಶ್ರೀಖರ್ ದ್ವಿತೀಯ ಸ್ಥಾನ ಪಡೆದರು.

ಖ್ಯಾತ ತುಳು ಚಲನಚಿತ್ರ ನಟ ಬೋಜರಾಜ ವಾಮಂಜೂರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ತಮ್ಮ ದಿವಂಗತ ಸಹೋದರ ರೋ। ಶಾಂತಾರಾಮ್ ವಾಮಂಜೂರು ಸ್ಮರಣಾರ್ಥ ವರ್ಷಂಪ್ರತಿ ಈ ಸ್ಪರ್ಧಾಕೂಟವನ್ನು ಆಯೋಜಿಸುವ ರೋಟರಾಕ್ಟ್ ಸಂಸ್ಥೆಯ ನಿಸ್ವಾರ್ಥ ಸಮಾಜಸೇವಾ ಕಾರ್ಯ ಶ್ಲಾಘನೀಯ ಎಂದು ನುಡಿದು ರೋಟರಾಕ್ಟ್ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿ, ಸ್ಪರ್ಧಾ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಅಂತರಾಷ್ಟ್ರೀಯ ರೋಟರಾಕ್ಟ್ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ಗುಂಟೂರು ನಗರ ಮೂಲದ ರೋ। ರವಿ ವಡ್ಡಮಣಿಯವರು ಗೌರವ ಅತಿಥಿಯಾಗಿ ಪಾಲ್ಗೊಂಡು, ರೋಟರಾಕ್ಟ್ ಸಂಸ್ಥೆಯ ಯುವ ಸದಸ್ಯರು ಸಂಸ್ಥೆಯ ಧೈಯ, ನೀತಿ, ಮಾಹಿತಿ, ಉದ್ದೇಶಗಳ ಜ್ಞಾನವನ್ನು ವೃದ್ಧಿಸಬೇಕು ಮತ್ತು ಸಂಸ್ಥೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಸಲಹೆ ನೀಡಿ ಸ್ಪರ್ಧಾ ವಿಜೇತರನ್ನು ಅಭಿನಂದಿಸಿದರು.

ವೇದಿಕೆಯಲ್ಲಿ ರೋಟರಾಕ್ಟ್ ಜಿಲ್ಲಾ ಚುನಾಯಿತ ಪ್ರತಿನಿಧಿ ಮೈಸೂರು ನಗರ ಮೂಲದ ರೋ। ಪ್ರಜ್ವಲ್, ರೋಟರಾಕ್ಟ್ ದಕ್ಷಿಣ ಏಷ್ಯಾದ ಸಂಸ್ಥೆಯ ಅಧ್ಯಕ್ಷ ಡೇರಿಲ್ ಡಿ’ಸೋಜಾ, ರೋಟರಿ ಮಂಗಳೂರು ಸೆಂಟ್ರಲ್ ಸಂಸ್ಥೆಯ ಚುನಾಯಿತ ಅಧ್ಯಕ್ಷರಾದ ರೋ। ಭಾಸ್ಕರ್ ರೈ, ಶ್ರೀಮತಿ ವಾಣಿ ವಾಮಂಜೂರ್ ಉಪಸ್ಥಿತರಿದ್ದರು. ರೋಟರಾಕ್ಟ್ ಮಂಗಳೂರು ಸಿಟಿ ಸಂಸ್ಥೆಯ ಅಧ್ಯಕ್ಷರಾದ ರೋ। ಅವಿನಾಶ್ ಅಧ್ಯಕ್ಷತೆ ವಹಿಸಿದ್ದರು.

ಮೈಸೂರು, ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲೆಯ 10 ತಂಡಗಳು ಅಂತಿಮ ಮತ್ತು ನಿರ್ಣಾಯಕ ಸುತ್ತಿಗೆ ಪ್ರವೇಶ ಪಡೆದಿದ್ದವು. ಈ ಸ್ಪರ್ಧಾಕೂಟವನ್ನು ರೋಟರಾಕ್ಟ್ ಮಂಗಳೂರು ಸಿಟಿ ಸಂಸ್ಥೆಯ ಸಭಾಪತಿಯವರಾದ ರೋ। ಡಾ। ದೇವದಾಸ್ ರೈ ನಿರೂಪಿಸಿದ್ದರು. ಕಾರ್ಯದರ್ಶಿ ರೋ। ಅಕ್ಷಯ್ ರೈ ವಂದಿಸಿದರು.

ರೋ। ದಿ। ಶಾಂತಾರಾಮ್ ವಾಮಂಜೂರ್‌ರವರು ಸಂಸ್ಥೆಯ ನಿಷ್ಠಾವಂತ ಸದಸ್ಯರಾಗಿದ್ದು, ನಿಸ್ವಾರ್ಥ ಸೇವಾ ಮನೋಭಾವ ಹೊಂದಿದ್ದು, 2006 ರಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಆಕಸ್ಮಿಕ ವಾಹನ ರಸ್ತೆ ಅಪಘಾತದ ದುರಂತದಲ್ಲಿ ವಿಧಿವಶರಾಗಿದ್ದರು. ಅವರ ಸ್ಮರಣಾರ್ಥ ಪ್ರತಿವರ್ಷ ವಾರ್ಷಿಕ ರೋಟರಾಕ್ಟ್ ರಸಪ್ರಶ್ನೆ ಸ್ಪರ್ಧಾಕೂಟವನ್ನು ಆಯೋಜಿಸಲಾಗುವುದು ಎಂದು ಡಾ| ದೇವದಾಸ್ ರೈಯವರು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು