10:53 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಉಳ್ಳಾಲ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ನಾಳೆ ಉಚಿತ ವೈದ್ಯಕೀಯ, ಕಣ್ಣಿನ ಮತ್ತು ದಂತ ತಪಾಸಣಾ ಶಿಬಿರ

14/06/2025, 20:57

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಉಳ್ಳಾಲ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ಪಡೀಲ್, ಮಂಗಳೂರು, ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘ (ರಿ.) ಮತ್ತು ಮಹಿಳಾ ವಿಭಾಗ, ಬಂಡಿಕೊಟ್ಯ, ಉಳ್ಳಾಲ ಮತ್ತು ವಿದ್ಯಾರಣ್ಯ ಯುವಕ ವೃಂದ (ರಿ.) ಮತ್ತು ವಿದ್ಯಾರಣ್ಯ ಕಲಾವೃಂದ ಉಳ್ಳಾಲ, ಶಿವಶಕ್ತಿ ಯುವಕ ಮಂಡಲ (ರಿ.) ಉಳ್ಳಾಲ ಇವರ ಜಂಟಿ ಸಹಯೋಗದೊಂದಿಗೆ ಉಚಿತ ವೈದ್ಯಕೀಯ, ಕಣ್ಣಿನ ತಪಾಸಣೆ ಮತ್ತು ದಂತ ತಪಾಸಣಾ ಶಿಬಿರವನ್ನು ಜೂನ್ 15ರಂದು ಭಾನುವಾರ ಪೂರ್ವಾಹ್ನ ಸಮಯ 9.30ರಿಂದ ಮಧ್ಯಾಹ್ನ 12.30ರ ವರೆಗೆ ಸಮುದಾಯ ಭವನ, ಉಳ್ಳಾಲ ನಗರಸಭೆ ಆವರಣ, ಉಳ್ಳಾಲ ಇಲ್ಲಿ ಆಯೋಜಿಸಲಾಗಿದೆ.
ವೈದ್ಯಕೀಯ ಶಿಬಿರದಲ್ಲಿ ಕೆಎಂಸಿ ಆಸ್ಪತ್ರೆ ಅತ್ತಾವರ ಮತ್ತು ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್, ಮಂಗಳೂರು, ಇವರ ನುರಿತ ವೈದ್ಯರ ತಂಡದಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ, ಮಧುಮೇಹ, ಬಿ.ಪಿ. ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ, ಮೂಗು ಮತ್ತು ಗಂಟಲು ತಪಾಸಣೆ, ಅನಾರೋಗ್ಯಕರ ಹಲ್ಲುಗಳನ್ನು ಕೀಳುವುದು, ಹುಳುಕು ಹಲ್ಲುಗಳಿಗೆ ಸಿಮೆಂಟ್ ತುಂಬಿಸುವುದು, ಹಲ್ಲುಗಳನ್ನು ಸ್ವಚ್ಚಗೊಳಿಸುವುದು, ಉಚಿತ ಔಷಧಿ ವಿತರಣೆ, ಇನ್ನಿತರ ವೈದ್ಯಕೀಯ ಸೇವೆಗಳು, ಹೆಚ್ಚಿನ ಚಿಕಿತ್ಸೆಗೆ ಹಸಿರು ಕಾರ್ಡನ್ನು ನೀಡುವುದು ಹಾಗೂ ಸಂಘದ ವತಿಯಿಂದ ಉಚಿತ ಕನ್ನಡಕ ವಿತರಣೆ ಮಾಡಲಾಗುವುದು.
ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು