12:07 PM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

Bangalore | ಸರ್ವಜ್ಞನಗರ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಕ್ರಮ: ಸಚಿವ ಕೆ.ಜೆ.ಜಾರ್ಜ್ ಸೂಚನೆ

14/06/2025, 21:50

ಬೆಂಗಳೂರು(reporterkarnataka.com): ಸರ್ವಜ್ಞನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕ್ಷೇತ್ರದ ಶಾಸಕರೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸರ್ವಜ್ಞನಗರ ಕ್ಷೇತ್ರದ ಸುಬ್ಬಣ್ಣಪಾಳ್ಯ ವಾರ್ಡ್ ಆರ್.ಎಸ್.ಪಾಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಬೆಸಿ ಗಾಲ್ಫ್ ಲಿಂಕ್ಸ್ ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್ಆರ್) ಅಡಿ ನಿರ್ಮಿಸಿರುವ 2 ಶಾಲಾ ಕೊಠಡಿಗಳು ಮತ್ತು ಒಂದು ಭೋಜನ ಕೊಠಡಿಯನ್ನು ಉದ್ಘಾಟಿಸಿದ ಬಳಿಕ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಪ್ರಾಥಮಿಕ ಶಿಕ್ಷಣ ಆದ್ಯತೆಯಾಗಿರುವುದರಿಂದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದರು.
ಶಾಲೆಯಲ್ಲಿ ಕೆಲವು ಕುಂದುಕೊರತೆಗಳಿರುವ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಮತ್ತು ಸ್ಥಳೀಯ ಕಾಂಗ್ರೆಸ್ ಮುಖಂಡರು ತಮ್ಮ ಗಮನಕ್ಕೆ ತಂದಾಗ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದಲ್ಲದೆ, ಅವಶ್ಯಕತೆ ಇದ್ದರೆ ಬಿಬಿಎಂಪಿ ಮುಖ್ಯ ಆಯುಕ್ತರೊಂದಿಗೆ ಚರ್ಚಿಸುವಂತೆಯೂ ತಿಳಿಸಿದರು.


ಹೊಸದಾಗಿ ನಿರ್ಮಿಸಿರುವ ಭೋಜನ ಕೊಠಡಿಯಲ್ಲಿ ಏಕಕಾಲದಲ್ಲಿ 200ರಿದ 250 ಮಕ್ಕಳು ಕುಳಿತು ಊಟ ಮಾಡಲು ಅವಕಾಶವಿದೆ. ಇಂತಹ ಭೋಜನ ಕೊಠಡಿ ಜತೆಗೆ ಶಾಲಾ ಕೊಠಡಿಗಳನ್ನು ನಿರ್ಮಿಸಿಕೊಟ್ಟ ಸಚಿವರಿಗೆ ಶಾಲಾ ಮಕ್ಕಳು ಮತ್ತು ಸಿಬ್ಬಂದಿ ಕೃತಜ್ಞತೆ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು