ಇತ್ತೀಚಿನ ಸುದ್ದಿ
ಜುಮಾಲಾಪುರ್: ಸಕಲ ಸರಕಾರಿ ಗೌರವಗಳೊಂದಿಗೆ ಯೋಧ ವೆಂಕಟೇಶ್ ರಾಠೋಡ ಅಂತ್ಯಕ್ರಿಯೆ
14/06/2025, 22:03

ಶಿವು ರಾಠೋಡ ಹುಣಸಗಿ ಬಾಗಲಕೋಟೆ
info.reporterkarnataka@gmail.com
ಬಾಗಲಕೋಟೆ ಕೇರೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಯೋಧ ವೆಂಕಟೇಶ್ ಎಂ. ರಾಠೋಡ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮ ಜುಮಾಲಾಪುರ್ ತಾಂಡದಲ್ಲಿ ನೆರವೇರಿತು.
ಬಾಗಲಕೋಟೆ ಕೇರೋಡಿ ಆಸ್ಪತ್ರೆಯಲ್ಲಿ ಬಿಳಿರಕ್ತ ಕಣಗಳು ಕಡಿಮೆ ಆಗಿರೋದರಿನ ಯೋಧ ಮೃತಪಟ್ಟಿದ್ದರು.
ಮೃತರ ಪಾರ್ಥಿವ ಶರೀರವು ಬಾಗಲಕೋಟ ಆಸ್ಪತ್ರೆಯಿಂದ ಗುರುವಾರ ಮಧ್ಯರಾತ್ರಿ ಬಾಗಲಕೋಟದಿಂದ ಬಂದು ಶುಕ್ರವಾರ ಬೆಳಿಗ್ಗೆ ಜುಮಾಲಾಪುರ್ ತಾಂಡಕ್ಕೆ ತರಲಾಯಿತು. ಅಲ್ಲಿಂದ ರಸ್ತೆ ಮೂಲಕ ಆಂಬುಲೆನ್ಸ್ ವಾಹನದ ಮೂಲಕ ತರಲಾಯಿತು. ನಾರಾಯಣಪುರದಿಂದ ಸುಮಾರ 15 ಕಿ.ಮೀ ದೂರವಿರುವ ಯೋಧನ ಸ್ವಗ್ರಾಮ ಜುಮಾಲಾಪುರ್ ತಾಂಡವರೆಗೆ ಪಾರ್ಥಿವ ಶರೀರದ ಮೆರವಣಿಗೆ ಮಾಡಲಾಯಿತು.
ಮೆರವಣಿಗೆ ಉದ್ದಕ್ಕೂ ವೆಂಕಟೇಶ ಅಮರ ರಹೇ, ಬೋಲೊ ಭಾರತ್ ಮಾತಾಕಿ ಜೈ’ ಘೋಷಣೆಗಳು ಮೊಳಗಿದವು. ಮೆರವಣಿಗೆಯಲ್ಲಿ ಮಾಜಿ ಸೈನಿಕರು, ಯುವಕರು, ಗ್ರಾಮಸ್ಥರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ಮೃತ ಯೋಧನ ಪಾರ್ಥಿವ ಶರೀರ ಕಂಡು ಕುಟುಂಬಸ್ಥರು ಆಕ್ರಂದನ ಮುಗಿಲು ಮುಟ್ಟಿತ್ತು. ಯೋಧನ ಅಗಲಿಕೆಗೆ ಗ್ರಾಮಸ್ಥರು ಕಂಬನಿ ಮಿಡಿದರು.
ಸ್ವಗ್ರಾಮದ ಹೊರವಲಯದಲ್ಲಿ ಸಾರ್ವಜನಿಕರಿಗೆ ಯೋಧನ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಹುಣಸಗಿ ತಶೀಲದಾರರು ಹುಸೇನಾ.ಎ. ಸರ್ಕಾವಾಸ್, ಕೊಡೇಕಲ್ ಉಪ ತಶೀಲದಾರರು ಕಾಲಪ್ಪ ಜಂಜಿಗಡ್ಡಿ. ಗ್ರಾಮ ಆಡಳಿತ ಅಧಿಕಾರಿ ಪರಶುರಾಮ, ಹುಣಸಗಿ ಪೊಲೀಸ್ ಸಿ.ಪಿ.ಐ ರವಿಕುಮಾರ್ , ಕೊಡೇಕಲ್ ಪಿ.ಎಸ್.ಐ ಅಯ್ಯಣ್ಣ ನವರು ಪೊಲೀಸ್ ಬಂದೋಬಸ್ತಾ ನೀಡಿದರು ಜೊತೆಯಲ್ಲಿ
ಮೃತ ಯೋಧನಿಗೆ ಅಂತಿಮ ನಮನ ಸಲ್ಲಿಸಿದರು.