1:18 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಟೀಕೆ

14/06/2025, 22:38

Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಟೀಕೆ

* ರಾಜ್ಯ ಸರ್ಕಾರದ ವೈಫಲ್ಯ ಮರೆಮಾಚಲು ಸಿಎಂ ಸಿದ್ದರಾಮಯ್ಯ ಯತ್ನ

ಕಲಬುರ್ಗಿ(reporterkarnataka.com): ಕಾಂಗ್ರೆಸ್‌ ಒಂದು ರಾಷ್ಟ್ರೀಯ ಪಕ್ಷವಾಗಿ ಯಾವತ್ತೂ ಸಾಮಾಜಿಕ ಬದ್ಧತೆ ತೋರಿಲ್ಲ. ಈಗಲೂ ಮೀಸಲಾತಿ-ಜಾತಿ ಗಣತಿ ಎನ್ನುತ್ತ ರಾಜಕೀಯ ಡ್ರಾಮಾ ಮಾಡುತ್ತಿದೆ ಅಷ್ಟೇ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದರು.

ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡುತ್ತ, ಪಂಡಿತ್‌ ನೆಹರು ಕಾಲದಿಂದಲೂ ಕಾಂಗ್ರೆಸ್‌ ಮೀಸಲಾತಿ ವಿರೋಧಿ ಆಗಿಯೇ ನಡೆದುಕೊಂಡಿದೆ. ಮೀಸಲಾತಿ ವಿರೋಧಿಸಿ ನೆಹರು ಪತ್ರವನ್ನೇ ಬರೆದಿದ್ದರು. ಇನ್ನು, ರಾಜೀವ್‌ ಗಾಂಧಿ ಸಹ ಮೀಸಲಾತಿ ವಿರುದ್ಧ ಸಂಸತ್‌ನಲ್ಲಿ ಸುದೀರ್ಘ ಭಾಷಣ ಬಿಗಿದಿದ್ದರು ಎಂದು ನೆನಪಿಸಿದರು.
ಈಗ ಕಾಂಗ್ರೆಸ್‌ ಮೀಸಲಾತಿ ವಿಚಾರದಲ್ಲಿ ಜನರ ಕಣ್ಣಿಗೆ ಮಣ್ಣೆರೆಚಲು ನೋಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದ ಆಡಳಿತ ವೈಫಲ್ಯವನ್ನು ಮರೆಮಾಚಲು ʼಜಾತಿ ಗಣತಿʼ ವಿಷಯ ಹರಿಬಿಡುತ್ತಿದ್ದಾರೆ ಎಂದು ಜೋಶಿ ಟೀಕಿಸಿದರು.
ಇತಿಹಾಸದಲ್ಲಿ ಯಾವತ್ತೂ ಕಾಂಗ್ರೆಸ್ ಮುಖಂಡರು ಮೀಸಲಾತಿ ಪರ ನಿಂತಿದ್ದಿಲ್ಲ. ಸಂವಿಧಾನದಲ್ಲಿ ಅಂಬೇಡ್ಕರ್‌ ಮೀಸಲಾತಿ ಕಲ್ಪಿಸಿದರೆ, ಕಾಂಗ್ರೆಸ್‌ ಅಧಿನಾಯಕರು ಸಂಸತ್ ನಲ್ಲಿ ಮೀಸಲಾತಿ ವಿರೋಧಿಸಿ ಉದ್ದುದ್ದ ಭಾಷಣ ಮಾಡಿದರು. ಈಗ ಜಾತಿ ಗಣತಿ, ಮೀಸಲಾತಿ ಎನ್ನುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ ಎಂದು ಲೇವಡಿ ಮಾಡಿದ ಸಚಿವರು, ಇದೊಂದು ರಾಜಕೀಯ ನಾಟಕವಾಗಿದೆ ಎಂದು ಟೀಕಿಸಿದರು.

*ವಿಮಾನ ದುರಂತದ ಸಮಗ್ರ ತನಿಖೆ:*
ವಿಮಾನ ದುರಂತ ದುರದೃಷ್ಟಕರ ಅವಘಡ. ಈ ದುರ್ಘಟನೆಯಲ್ಲಿ ಅನೇಕರ ಸಾವು ಸಂಭವಿಸಿರುವುದು ತೀವ್ರ ದುಃಖ ತರಿಸಿದೆ. ವಿಮಾನ ದುರಂತ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಡಿಜಿಸಿಎ ಸಮಗ್ರ ತನಿಖೆ ನಡೆಸಲಿದೆ. ಭವಿಷ್ಯದಲ್ಲಿ ಇಂಥ ಅವಘಡಗಳು ಘಟಿಸದಂತೆ ಸರ್ಕಾರ ಮುನ್ನೆಚ್ಚರಿಕೆ ತೆಗೆದುಕೊಳ್ಳಲಿದೆ ಎಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.
ವಿಮಾನ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಭಗವಂತ ದುಃಖ ಸಹಿಸಿಕೊಳ್ಳುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ. ಕೇಂದ್ರ ಸರ್ಕಾರ, ವಿಮಾ ಕಂಪನಿ ಮತ್ತು ವಿಮಾನ ಸಂಸ್ಥೆಗಳಿಂದ ಸಮರ್ಪಕ ಪರಿಹಾರ ನೀಡಲಾಗುತ್ತದೆ. ಅಲ್ಲದೇ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು