7:07 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಹಾಮಳೆಗೆ ಮಂಗಳೂರು ತತ್ತರ: ಜನಜೀವನ ಅಸ್ತವ್ಯಸ್ತ; 12 ಕುಟುಂಬಗಳ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರ

15/06/2025, 12:19

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ ಮಂಗಳೂರಿನಲ್ಲಿ ಸಾಕಷ್ಟು ಹಾನಿಯಾಗಿದ್ದು, ತಗ್ಗು ಪ್ರದೇಶ ಜಲಾವೃತಗೊಂಡಿದೆ. ನಗರದ ಅತ್ತಾವರ ಸೇರಿದಂತೆ ವಿವಿಧ ಕಡೆಗಳಿಂದ 12 ಕುಟುಂಬಗಳನ್ನು ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.


ಮಹಾಮಳೆಗೆ ಮಂಗಳೂರಿನ ಗೇಟ್ ವೇ ಎಂದೇ ಕರೆಯಲ್ಪಡುವ ಪಂಪ್ ವೆಲ್ ಸಂಪೂರ್ಣ ಜಲಾವೃತವಾಗಿದೆ. ಕೊಟ್ಟಾರ ಚೌಕಿ, ಮಾಲೆಮಾರ್, ಅತ್ತಾವರ, ಪಾಂಡೇಶ್ವರ, ಎಕ್ಕಾರು ಮುಂತಾದ ಕಡೆಗಳ ತಗ್ಗು ಪ್ರದೇಶ ಜಲಾವೃತವಾಗಿದೆ.
ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಎಲ್ಲಾ ತಹಶೀಲ್ದಾರರು ಹಾಗೂ ಇನ್ಸಿಡೆಂಟ್ ಕಮಾಂಡರ್ ಗಳು ಅಪಾಯದಂಚಿನಲ್ಲಿರುವ ಮನೆಗಳ ಕುಟುಂಬಗಳನ್ನು ಕಾಳಜಿ ಕೇಂದ್ರ /ಸುರಕ್ಷಿತ ಸ್ಥಳಗಳಿಗೆ ಕೂಡಲೇ ಸ್ಥಳಾಂತರಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ.
ನೆರೆ ಉಂಟಾಗುವ ಪ್ರದೇಶಗಳ ಮೇಲೆ ತೀರಾ ನಿಗಾ ವಹಿಸಿ ಎಲ್ಲಾ ರಕ್ಷಣಾ ಸಾಮಾಗ್ರಿಗಳನ್ನು ಸನ್ನದ್ಧವಾಗಿರಿಸಬೇಕು. ಯಾವುದೇ ಸಾವು ನೋವು ಸಂಭವಿಸದಂತೆ ಎಚ್ಚರಿಕೆಯನ್ನು ವಹಿಸಬೇಕು. ಎಲ್ಲಾ ತಾಲೂಕು ಹಾಗೂ ಮಹಾನಗರಪಾಲಿಕೆ ಕಂಟ್ರೋಲ್‌ ರೂಂ ನಿರಂತರ ಕಾರ್ಯಾಚರಣೆಯಲ್ಲಿರಬೇಕು ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಪ್ರಾಕೃತಿಕ ವಿಕೋಪ ಕಾರ್ಯಾಚರಣೆಯಲ್ಲಿ ಯಾವುದೇ ನಿರ್ಲಕ್ಷ್ಯವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

*ಜಿಲ್ಲಾಧಿಕಾರಿ ಭೇಟಿ*
ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮತ್ತು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಅವರು ಶನಿವಾರ ನಗರದಲ್ಲಿ ಮಳೆ ನೀರು ನಿಂತು ಸಮಸ್ಯೆಗೀಡಾದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಪಂಪ್ ವೆಲ್ ಗೆ ಭೇಟಿ ನೀಡಿ, ಮಳೆ ನೀರು ಸರಾಗ ಹರಿವಿನ ಸಮಸ್ಯೆಗಳ ಬಗ್ಗೆ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿದರು.

*12 ಕುಟುಂಬಗಳು ಪುನರ್ವಸತಿ ಕೇಂದ್ರಕ್ಕೆ*
ಮಂಗಳೂರು‌ ನಗರದ ಅತ್ತಾವರ ಸೇರಿದಂತೆ ಕೇಂದ್ರ ಭಾಗದ ವಿವಿಧೆಡೆ ಮಳೆ ನೀರು ಮನೆಗಳಿಗೆ ನುಗ್ಗಿ ತೊಂದರೆಗೀಡಾದ 12 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಇವರಿಗೆ ಮಹಾನಗರಪಾಲಿಕೆ ವತಿಯಿಂದ ಪುರಭವನ ಆವರಣದಲ್ಲಿ ತಾತ್ಕಾಲಿಕ ಪುನರ್ವಸತಿ‌ ಕೇಂದ್ರದಲ್ಲಿ ಆಶ್ರಯ ನೀಡಿ‌, ಆಹಾರ ಮತ್ತು ಅಗತ್ಯ ಸಾಮಾಗ್ರಿಗಳನ್ನು ಒದಗಿಸಲಾಗಿದೆ. ನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಅವರು ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು