2:00 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ

15/06/2025, 12:52

ಶಿವು ರಾಠೋಡ ಯಾದಗಿರಿ

info.reporterkarnataka@gmail.com

ನಾರಾಯಣಪುರದ ಬಸವಸಾಗರವು ಶೇ.83 ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಜಲಾಶಯದ ಕ್ರಸ್ಟ್ ಗೇಟ್‌ಗೆ ಸಂಪ್ರದಾಯದಂತೆ ಪೂಜೆ ಸಲ್ಲಿಸ 5 ಸಾವಿರ ಕ್ಯೂಸೆಕ್ ಹಾಗೂ ಎಂಪಿಸಿಎಲ್ ಖಾಸಗಿ ಜಲವಿದ್ಯುತ್ ಸ್ಥಾವರದಿಂದ 3 ಸಾವಿರ ಕ್ಯೂಸೆಕ್ ಸೇರಿ 8 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಸಲಾಗಿದೆ.

ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಬಸವಸಾಗರಕ್ಕೆ ಆಲಮಟ್ಟಿ ಶಾಸ್ತ್ರೀ ಜಲಾಶಯದಿಂದ ಒಳಹರಿವು ಸದ್ಯ 20 ಸಾವಿರ ಕ್ಯೂಸೆಕ್‌ನಷ್ಟಿದೆ. ಜಲಾಶಯದ ಗರಿಷ್ಠ ಎತ್ತರದಲ್ಲಿ 491.5 ಮೀಟರ್‌ವರೆಗೂ ನೀರು ಸಂಗ್ರಹಿಸಿಕೊಂಡು ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ನೀರು ನದಿಗೆ ಹರಿಸಲಾಗುತ್ತಿದೆ, ಒಳಹರಿವು ಇನ್ನು ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಶನಿವಾರ ಬೆಳಗ್ಗೆವರೆಗೆ 10 ಸಾವಿರ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ನೀರು ಹರಿಬಿಡಲಾಗುತ್ತದೆ, ಹೀಗಾಗಿ ನದಿ ತೀರದ ಗ್ರಾಮಗಳ ಜನ ಜಾನುವಾರುಗಳು ನದಿಗೆ ಇಳಿಯದಂತೆ ಯಾವುದೇ ಚಟುವಟಿಕೆ ನಡೆಸದಂತೆ ಕೆಬಿಜೆಎನ್ ಎಲ್ ವೃತ್ತ ಕಚೇರಿಯ ಅಧೀಕ್ಷಕ ಅಭಿಯಂತರ ರಮೇಶ ರಾಠೋಡ ಮಾಹಿತಿ ನೀಡಿದ್ದಾರೆ.
ಇಇ ಹಣಮಂತ ಕೊಣ್ಣೂರ, ಎಇಇಗಳಾದ ವಿದ್ಯಾಧರ, ರಾಘವೇಂದ್ರ ಕುಲಕರ್ಣಿ, ಅರ್ಚಕ ರಾಘವೇಂದ್ರ ಆಚಾರ್ಯ, ಎಇಗಳಾದ ವಿಜಯ ಅರಳಿ, ಬಾಲಸುಭ್ರಮಣ್ಯಂ, ವಿರೇಶ, ಮಲ್ಲಿಕಾರ್ಜುನ, ಸುಮೀತ, ಬಾಲಚಂದ್ರ,
ಹಣಮಂತ, ಸಿದ್ದು ವಡವಡಗಿ, ವಿರೇಶ ಮತ್ತಿತರರಿದ್ದರು.

*ಜಲಾಶಯದ ಮಟ್ಟ:* ಜಲಾಶಯದ ಗರಿಷ್ಠ ಮಟ್ಟ
492.25ಮೀ.ನಲ್ಲಿ ಇಂದು 490.99 ಮೀಟರ್ಗೆ ನೀರಿದ್ದು, ಗರಿಷ್ಠ ಸಂಗ್ರಹ 33.31 ಟಿಎಂಸಿ ಅಡಿ ಗಳಲ್ಲಿ 27.80 ಟಿಎಂಸಿ ಅಡಿ ನೀರು ಸಂಗ್ರಹ ಇದೆ. ಒಳಹರಿವು 20ಸಾವಿರ ಕ್ಯೂಸೆಕ್ ಇದ್ದರೆ, ಹೊರ ಹರಿವು 8 ಸಾವಿರ ಕ್ಯೂಸೆಕ್ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು