5:33 PM Monday22 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಮಂಗಳೂರು: ಬರೀ ಮಳೆಯಲ್ಲ, ಕಷ್ಟಗಳ ಸುರಿಮಳೆ; ಹೊರಗಿನ ಮಳೆ ನೀರು ಜತೆ ಸೇರದಿರಲಿ ಕಣ್ಣೀರು

16/06/2025, 12:54

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು
info.reporterkarnataka@gmail.com

ಕರಾವಳಿಯಲ್ಲಿ ಕಳೆದ 4- 5 ದಿನಗಳಿಂದ ನಿರಂತರವಾಗಿ ಬಿರುಸಿನ ಮಳೆಯಾಗುತ್ತಿದ್ದು, ಕಡಲನಗರಿ ಮಂಗಳೂರು ಸಂಪೂರ್ಣ ನಲುಗಿ ಹೋಗಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಶಾಲಾ- ಕಾಲೇಜು ಬಂದ್ ಆಗಿದೆ.
ಮಂಗಳೂರಿನಲ್ಲಿ ಮಳೆಯ ತೀವ್ರತೆ ಎಷ್ಟಿದೆಯೆಂದರೆ ಎಲ್ಲೂ ಕಾಗೆ, ಗುಬ್ಬಿ, ಪಕ್ಷಿಗಳು ಹಾರುತ್ತಿಲ್ಲ. ಭೂಮಿ ಸರಿಯಾಗಿ ನೇಸರನ ಕಾಣದೆ 4 ದಿನಗಳು ಉರುಳಿವೆ. ಆಗಸದತ್ತ ದೃಷ್ಟಿ ಹಾಸಿದರೆ ಬರೇ ಕಪ್ಪು ಮೋಡಗಳ ರಾಶಿ ಕಾಣಿಸುತ್ತಿದೆ. ಹಗಲು- ರಾತ್ರಿ ಮಳೆ ಸುರಿಯುತ್ತಲೇ ಇದೆ. ಈಗಾಗಲೇ 21 ಕುಟುಂಬಗಳು ಪುನರ್ವಸತಿ ಕೇಂದ್ರ ಸೇರಿವೆ. ದಿನಗೂಲಿ ಕಾರ್ಮಿಕರ ಹೊಟ್ಟೆಪಾಡು ಕೇಳುವವರೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ನೀರು ತುಂಬಿದ ರಸ್ತೆಯಲ್ಲಿ ಜಾಲಿ ರೈಡ್ ಮಾಡುವವರೂ ಇದ್ದಾರೆ. ರೀಲ್ಸ್ ತೆಗೆದು ಲೈಕ್ ಪಡೆಯುವವರೂ ಇದ್ದಾರೆ. ಇವರ ಜತೆ ಹೊಟ್ಟೆಪಾಡಿಗಾಗಿ ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡುವ ಮಂದಿಯೂ ಇದ್ದಾರೆ.
ನಗರದ 4 ದಿಕ್ಕುಗಳಲ್ಲಿರುವ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಹಳ್ಳ-ಕೊಳ್ಳ, ನದಿ, ತೊರೆ ಮೈ ತುಂಬಿ ಹರಿಯುತ್ತಿವೆ. ಮಂಗಳೂರಿನ ಗೇಟ್ ವೇ ಎಂದು ಪರಿಗಣಿಸಲಾದ ಪಂಪ್ ವೆಲ್ ಕಳೆದು 3- 4 ದಿನಗಳಿಂದ ಸಂಪೂರ್ಣ ಜಲಾವೃತಗೊಂಡಿದೆ. ಮೊದಲೇ ತಗ್ಗು ಪ್ರದೇಶವಾದ ಪಂಪ್ ವೆಲ್ ನಲ್ಲಿ ಅವೈಜ್ಞಾನಿಕ ಕಾಮಗಾರಿಯಿಂದ ನೆರೆ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಂಡಿದೆ. ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಹಾಗೂ ಮುಂಭೈ- ತಿರುವನಂತಪುರ ರಾಷ್ಟ್ರೀಯ ಹೆದ್ದಾರಿ ಪಂಪ್ ವೆಲ್ ಮೂಲಕವೇ ಹಾದು ಹೋಗುತ್ತದೆ. ಸಂಚಾರ ನಿಬಿಡತೆ ಇಲ್ಲಿ ಜಾಸ್ತಿಯಾಗಿದೆ. ವ್ಯವಸ್ಥಿತವಾದ ತೋಡಿನ ವ್ಯವಸ್ಥೆ ಇಲ್ಲದಿರುವುದು ಇಲ್ಲಿನ ನೆರೆ ಸಮಸ್ಯೆಗೆ ಪ್ರಮುಖ ಕಾರಣವಾಗಿದೆ. ಇನ್ನು ಮಂಗಳೂರು- ಮುಂಬೈ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಕೊಟ್ಟಾರ ಚೌಕಿಯಲ್ಲಿಯೂ ಇಂತಹದ್ದೇ ಸಮಸ್ಯೆ ಇದೆ. ಕೊಟ್ಟಾರ ಚೌಕಿ ಕೂಡ ತಗ್ಗು ಪ್ರದೇಶವಾಗಿದೆ. ಇಲ್ಲಿ ರಸ್ತೆಯನ್ನು ಎತ್ತರಿಸುವ ಕೆಲಸಕ್ಕೆ ನಮ್ಮನ್ನಾಳುವ ಮಂದಿ ಆಸಕ್ತಿ ತೋರಿಸಿಲ್ಲ. ರಾಜಕಾಲುವೆ ಒತ್ತುವರಿಯಾಗಿದೆ. ಸರಿಯಾಗಿ ಹೂಳೆತ್ತುವ ಕಾಮಗಾರಿ ನಡೆದಿಲ್ಲ. ಕೆಲವು ಕಡೆಗಳಲ್ಲಿ ಡ್ರಜ್ಜಿಂಗ್ ನ ಅಗತ್ಯವಿದೆ. ಇದು ಯಾವುದೂ ನಡೆದಿಲ್ಲ.
ನಗರದ ಹಲವೆಡೆ ತಗ್ಗು ಪ್ರದೇಶದಲ್ಲಿ ನೆರೆ ನೀರು ನುಗ್ಗುತ್ರಲೇ ಇದೆ‌. ನಗರದ ಹೃದಯಭಾಗವಾದ ಸ್ಟೇಟ್ ಬ್ಯಾಂಕ್ ಬಳಿಯ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿಯ ಮಿಷನ್ ರಸ್ತೆ ಮುಳುಗಡೆಯಾಗುತ್ತದೆ. ಅತ್ತಾವರ, ಪಾಂಡೇಶ್ವರ, ಮಂಗಳಾದೇವಿ, ಎಕ್ಕಾರು, ತೊಕ್ಕೊಟ್ಟು, ಕಲ್ಲಾಪು ಮುಂತಾದ ಪ್ರದೇಶಗಳು ಜಲಾವೃತಗೊಂಡಿವೆ. ಪ್ರತಿ ವರ್ಷವೂ ಇದೇ ರಾಗ. ಮುಳುಗಿದ ನಂತರ ಎಚ್ಚೆತ್ತಿಕೊಳ್ಳುವುದು, ಮಳೆಗೆ ದೂರು ಹಾಕುವುದು ವಾಡಿಕೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು