1:35 AM Friday18 - September 2026
ಬ್ರೇಕಿಂಗ್ ನ್ಯೂಸ್
ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:…

ಇತ್ತೀಚಿನ ಸುದ್ದಿ

Mangaluru Flood | ಪ್ರವಾಹ ಪೀಡಿತ ಪ್ರದೇಶದ ಶಾಶ್ವತ ಪರಿಹಾರಕ್ಕೆ ಕ್ರಮ: ಶಾಸಕ ವೇದವ್ಯಾಸ ಕಾಮತ್

16/06/2025, 21:10

ಮಂಗಳೂರು(reporterkarnataka.com): ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನಗರದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿ ಜನಜೀವನ ಅಸ್ತವ್ಯಸ್ತಗೊಂಡ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು.
ಈ ವೇಳೆ ಎಕ್ಕೂರು, ತೋಚಿಲ ಕಟ್ಟಪುಣಿ, ರಾಷ್ಟ್ರೀಯ ಹೆದ್ದಾರಿ ಬಳಿಯ ವೈದ್ಯನಾಥ ನಗರ, ಜಪ್ಪಿನಮೊಗರುವಿನ ಗಣೇಶ ನಗರ, ರಾಜಕಾಲುವೆ ಸೇರುವ ನೇತ್ರಾವತಿ ತೀರದ ಕಡೇಕಾರು ಪ್ರದೇಶ, ಮೊದಲಾದ ಪ್ರದೇಶಗಳ, ನೆರೆ ಪರಿಸ್ಥಿತಿಗೆ ಕಾರಣ, ತುರ್ತಾಗಿ ನಡೆಯಬೇಕಿರುವ ಕಾರ್ಯ, ಭವಿಷ್ಯದಲ್ಲಿ ಪ್ರವಾಹ ಮರುಕಳಿಸದಂತೆ ಪರಿಹಾರ ಕ್ರಮ ಇತ್ಯಾದಿ ವಿಷಯಗಳ ಬಗ್ಗೆ ಸ್ಥಳೀಯರ ಅಭಿಪ್ರಾಯದ ಮೇರೆಗೆ ಕೂಡಲೇ ಕ್ರಮಕೈಗೊಳ್ಳುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು. ವಿಶೇಷವಾಗಿ ಎಕ್ಕೂರಿನ ಧ್ರುವ ರೆಸಿಡೆನ್ಸಿ ಸಮೀಪದ ರಾಜಕಾಲುವೆ ಬಳಿ ಇರುವ ಬೃಹತ್ ಖಾಸಗಿ ಕಾಂಪೌಂಡ್ ಕುಸಿದಿದ್ದೇ ಜಪ್ಪಿನಮೊಗರು, ಗಣೇಶ ನಗರ ಪರಿಸರ, ದೊಂಪದ ಬಲಿ, ಹೊಯ್ಗೆ ರಾಶಿ, ಮುಳುಗಡೆಯಾಗಲು ಕಾರಣವಾಗಿದೆ, ಕೆಲವೆಡೆ ಇದೇ ಮೊದಲ ಬಾರಿ ನೆರೆ ಬಂದಿದ್ದರೆ, ಉಳಿದೆಡೆ ಈ ಹಿಂದೆಯೂ ಸಮಸ್ಯೆ ತಲೆದೋರಿತ್ತು, ಇಲ್ಲಿದ್ದ ಗದ್ದೆ ಪ್ರದೇಶಗಳಲ್ಲೇ ಅತೀ ಹೆಚ್ಚು ಮನೆ ನಿರ್ಮಾಣಗೊಂಡಿರುವುದರಿಂದ ನೀರು ಸರಾಗವಾಗಿ ಹರಿಯಲು ಅಡಚಣೆಯಾಗಿ ಈ ಪರಿಸ್ಥಿತಿ ಉಂಟಾಗಿದೆ ಎಂದು ಸ್ಥಳೀಯರು ಅಳಲು ತೋಡಿಕೊಂಡರು.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸುಮಾರು 75 ಕೋಟಿ ವಿಶೇಷ ಅನುದಾನದ ಮೂಲಕ ಕ್ಷೇತ್ರದ ಹಲವು ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಾಣ ಮಾಡಿದ್ದರಿಂದ ಹೆಚ್ಚಿನ ಹಾನಿಯಾಗುವುದು ತಪ್ಪಿದೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಕ್ಷೇತ್ರಕ್ಕೆ ಬಿಡಿಗಾಸು ದೊರೆತಿಲ್ಲ, ಹೀಗಾಗಿ ಸಣ್ಣಪುಟ್ಟ ತುರ್ತುಕ್ರಮಕ್ಕೂ ಹಿನ್ನಡೆಯಾಗಿರುವುದು ಅತೀ ದೊಡ್ಡ ಸಮಸ್ಯೆಯಾಗಿದೆ. ಹಾಗಿದ್ದೂ ಕೂಡಲೇ ಜಿಲ್ಲಾಧಿಕಾರಿಗಳ ಸಹಿತ ಪಾಲಿಕೆ ಅಧಿಕಾರಿಗಳೊಂದಿಗೆ ತುರ್ತುಸಭೆ ನಡೆಸಿ ತಾತ್ಕಾಲಿಕ ಪರಿಹಾರ ಕೈಗೊಂಡು, ಮುಂಬರುವ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ಶಾಶ್ವತ ಪರಿಹಾರಕ್ಕೆ ಸರ್ಕಾರದ ಮೇಲೆ ಒತ್ತಡ ಹೇರುತ್ತೇನೆ ಎಂದು ಶಾಸಕರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕಾರ್ಯಪಾಲಕ ಎಂಜಿನಿಯರ್ ಹಾಗೂ ಪಾಲಿಕೆಯ ಉಪ ಆಯುಕ್ತರಾದ (ಅಭಿವೃದ್ಧಿ) ನರೇಶ್ ಶೆಣೈ, ಎಇಇ ರಾಜೇಶ್, ಸಣ್ಣ ನೀರಾವರಿ ಇಲಾಖೆಯ ರಾಕೇಶ್, ಪಿಡಬ್ಲ್ಯೂ ಇಂಜಿನಿಯರ್ ಸೂರಜ್, ಗ್ರಾಮ ಲೆಕ್ಕಾಧಿಕಾರಿ ರೂಪಾ ಸೇರಿದಂತೆ ಬಿಜೆಪಿ ಪ್ರಮುಖರಾದ ವೀಣಾ ಮಂಗಳ, ಭರತ್ ಕುಮಾರ್, ಕಿರಣ್ ರೈ, ಸುರೇಂದ್ರ ರಾವ್ ಹಾಗೂ ಕಾರ್ಯಕರ್ತರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು