2:41 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Bangalore | ತುರ್ತು ಕಾಮಗಾರಿ: ಜೂನ್‌ 19 ರಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ

17/06/2025, 11:20

ಬೆಂಗಳೂರು(reporterkarnataka.com): ಬೃಹತ್ ಬೆಂಗಳೂರು ನಗರದ ಜನತೆಗೆ ಯಾವುದೇ ಅಡತಡೆಯಿಲ್ಲದೇ ನೀರನ್ನು ಸರಬರಾಜು ಮಾಡುವ ಸದುದ್ದೇಶದಿಂದ ಟಿ.ಕೆ. ಹಳ್ಳಿಯಲ್ಲಿ ಕಾವೇರಿ 5ನೇ ಹಂತದ ಕೊಳವೆ ಮಾರ್ಗಕ್ಕೆ ಹೊಸ 3000 ಮಿ.ಮೀ. ವ್ಯಾಸ ಕೊಳವೆ ಮಾರ್ಗದ ಜೋಡಣೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಸೂಚಿಸಿರುವ ವಿದ್ಯುತ್ ಸ್ಥಾವರಗಳ ವಾರ್ಷಿಕ ನಿರ್ವಹಣೆ, ತುರ್ತು ಕಾಮಗಾರಿ ಮತ್ತು ವಿವಿಧ ವಾರ್ಷಿಕ/ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳಬೇಕಾಗಿರುತ್ತದೆ.
ಆದ್ದರಿಂದ ತುರ್ತು ನಿರ್ವಹಣಾ ಕಾಮಗಾರಿಗಳನ್ನ ಕೈಗೊಳ್ಳುವ ಸಲುವಾಗಿ ದಿನಾಂಕ: 19-06-2025 ರ ಗುರುವಾರ ಬೆಳಿಗ್ಗೆ 6-00 ಗಂಟೆಯಿಂದ ದಿನಾಂಕ: 20-06-2025 ಶುಕ್ರವಾರದ ಬೆಳಿಗ್ಗೆ 6-0 ಗಂಟೆಯವರೆಗೆ ಒಟ್ಟು 24 ಗಂಟೆಗಳ ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1 ರಿಂದ ಹಂತ – 5 ರ ಎಲ್ಲಾ ಜಲರೇಚಕ ಯಂತ್ರಾಗಾರಗಳನು ಸ್ಥಗಿತಗೊಳಿಸಲು ಸಕ್ಷಮ ಪ್ರಾಧಿಕಾರದಿಂದ ಅನುಮತಿ ದೊರೆತಿರುತ್ತದೆ.
ಈ ಹಿನ್ನಲೆಯಲ್ಲಿ, 24 ಗಂಟೆಗಳ ಕಾಲ ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1ರಿಂದ ಹಂತ-5ರವರೆಗಿನ ಜಲರೇಚಕ ಯಂತ್ರಾಗಾರಗಳನ್ನು ಸ್ಥಗಿತಗೊಳಿಸಲಾಗುವುದು. ಇದರಿಂದಾಗಿ ಬೃಹತ್ ಬೆಂಗಳೂರು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗುವುದರಿಂದ ಬೆಂಗಳೂರಿನ ನಾಗರೀಕರಿಗೆ ಹಾಗೂ ವಾಣಿಜ್ಯ/ಕೈಗಾರಿಕಾ ಪ್ರದೇಶಗಳಿಗೆ ಮುಂಜಾಗ್ರತೆಯಾಗಿ ಅಗತ್ಯವಿರುವ ನೀರನ್ನು ಸಂಗ್ರಹಣೆ ಮಾಡಿಕೊಳ್ಳುವಂತೆ ಕೋರಿದೆ.

ಇತ್ತೀಚಿನ ಸುದ್ದಿ

ಜಾಹೀರಾತು