3:49 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಹೆದ್ದಾರಿಯಲ್ಲಿ ಮರಣ ಗುಂಡಿಗಳು: ಆಡಳಿತದ ವೈಫಲ್ಯತೆ; ಮಾನವೀಯತೆ ಮೆರೆದ ಟ್ರಾಫಿಕ್ ಪೊಲೀಸರು

18/06/2025, 08:18

ವಿಶೇಷ ವರದಿ ಮಂಗಳೂರು

info.reporterkarnataka@gmail.com

ನಗರದ ನಂತೂರು ರಸ್ತೆಯಲ್ಲಿ ಮೂರು ದಿನಗಳ ಹಿಂದೆ ಒಂದು ಅಪಘಾತ ಸಂಭವಿಸಿತು. ಒಬ್ಬರು ಜೀವ ಕಳೆದುಕೊಂಡರು. ಆ ಘಟನೆಯ ಬಳಿಕ, ರಸ್ತೆಯನ್ನು ದುರಸ್ತಿ ಮಾಡುವ ಭರವಸೆ ನೀಡಲಾಯಿತು. ಆದರೆ ಇವತ್ತು, ಅದೇ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ಮತ್ತೆ ಕಾಣಿಸಿಕೊಂಡಿವೆ. ಇದು ನಮ್ಮ ಆಡಳಿತದ ವೈಫಲ್ಯವಾದರೆ, ಇನ್ನೊಂದು ಕಡೆ ಈ ಗುಂಡಿಗಳು ಕೇವಲ ಮಣ್ಣಿನ ಹೊಂಡಗಳಲ್ಲ, ಇದು ಭ್ರಷ್ಟಾಚಾರದ ಕಾಮಗಾರಿಯ ಫಲಿತಾಂಶವಾಗಿದೆ.
ದಕ್ಷಿಣ ಕನ್ನಡದ ರಸ್ತೆಗಳ ಕಳಪೆ ಕಾಮಗಾರಿಯನ್ನು ನೋಡಿದರೆ, ಪ್ರಪಂಚದ ಯಾವುದೇ ಮೂಲೆಯಲ್ಲಿ ಇಂತಹ ದಯನೀಯ ಸ್ಥಿತಿಯಿರಲಿಕ್ಕಿಲ್ಲ ಎಂಬಂತೆ ಭಾಸವಾಗುತ್ತದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಕೇವಲ ಟೋಲ್ ಸಂಗ್ರಹಕ್ಕೆ ಸೀಮಿತವಾಗಿದೆಯೇ? ರಸ್ತೆ ಸುರಕ್ಷತೆಯ ಜವಾಬ್ದಾರಿಯನ್ನು ಯಾರು ಹೊರಬೇಕು? ಈ ಪ್ರಶ್ನೆಗಳಿಗೆ ಉತ್ತರವಿಲ್ಲದಂತೆ ಕಾಣುತ್ತದೆ. ಎಲ್ಲಿದೆ ದ.ಕ. ಜಿಲ್ಲಾಧಿಕಾರಿ ನೇತೃತ್ವದ ರಸ್ತೆ ಸುರಕ್ಷತಾ ಪ್ರಾಧಿಕಾರ ?
ಈ ಸಂದರ್ಭದಲ್ಲಿ, ನಮ್ಮ ಟ್ರಾಫಿಕ್ ಪೊಲೀಸರ ಕಾರ್ಯವೈಖರಿಯನ್ನು ಮೆಚ್ಚಲೇಬೇಕು. ಬಿಸಿಲಿನಲ್ಲಿ, ಮಳೆಗಾಲದ ತೊಂದರೆಯಲ್ಲಿ, ಅರ್ಧ ಜೀವ ಕಳೆದುಕೊಂಡರೂ, ರಸ್ತೆಯ ಗುಂಡಿಗಳನ್ನು ಕಲ್ಲುಗಳಿಂದ ಮುಚ್ಚುವ ಕೆಲಸವನ್ನು ಅವರು ಮಾಡುತ್ತಿದ್ದಾರೆ. ಇದು ಅವರ ಮಾನವೀಯತೆ ಮತ್ತು ಕರ್ತವ್ಯನಿಷ್ಠೆಯ ಸಂಕೇತವಾಗಿದೆ. ಆದರೆ, ಇದು ಅವರ ಕೆಲಸವೇ? ರಸ್ತೆ ದುರಸ್ತಿಯ ಜವಾಬ್ದಾರಿಯನ್ನು ಟ್ರಾಫಿಕ್ ಪೊಲೀಸರ ಮೇಲೆ ಹೊರಿಸುವುದು ಎಷ್ಟು ಸರಿ?
ನಮ್ಮ ಆಡಳಿತ ಮತ್ತು NHAI ಕಂಬಳಿ ಹಾಕಿ ಮಲಗಿದ್ದರೂ, ಟ್ರಾಫಿಕ್ ಪೊಲೀಸರು ದಿನದ 24 ಗಂಟೆಯೂ ಎಚ್ಚರದಿಂದ ಜನರ ಸುರಕ್ಷತೆಗಾಗಿ ಶ್ರಮಿಸುತ್ತಿದ್ದಾರೆ. ಆದರೆ, ಇದಕ್ಕೆ ಶಾಶ್ವತ ಪರಿಹಾರ ಬೇಕು. ಜನಪ್ರತಿನಿಧಿಗಳು ತಮ್ಮ ಎಸಿ ಕೊಠಡಿಗಳಿಂದ ಹೊರಬಂದು, ಜನಸಾಮಾನ್ಯರ ಕಷ್ಟವನ್ನು ಅರಿಯಬೇಕು. ಭ್ರಷ್ಟಾಚಾರದ ಕಾಮಗಾರಿಯನ್ನು ತಡೆಗಟ್ಟಿ, ಗುಣಮಟ್ಟದ ರಸ್ತೆಗಳನ್ನು ನಿರ್ಮಿಸುವ ಜವಾಬ್ದಾರಿಯನ್ನು ಯಾರಾದರೂ ತೆಗೆದುಕೊಳ್ಳಬೇಕು.
ಇನ್ನು ಯಾರೂ ರಸ್ತೆ ಗುಂಡಿಗಳಿಗೆ ಬಲಿಯಾಗಬಾರದು. ಸರಕಾರವೇ, ಎಚ್ಚರಿಕೆ! ಇದು ಜನರ ಅಗ್ರಹ

ಇತ್ತೀಚಿನ ಸುದ್ದಿ

ಜಾಹೀರಾತು