12:37 PM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

Mangaluru | ಕದ್ರಿ ಶಿವಭಾಗ್ ಬೃಹತ್ ತಡೆಗೋಡೆ ಕುಸಿತ: ಶಾಸಕ ವೇದವ್ಯಾಸ ಕಾಮತ್ ಭೇಟಿp

18/06/2025, 10:38

ಮಂಗಳೂರು(reporterkarnataka.com): ನಗರದಲ್ಲಿ ಇತ್ತೀಚಿಗೆ ಸುರಿದ ಭಾರೀ ಮಳೆಗೆ ಕದ್ರಿ ಶಿವಭಾಗ್ ನ ಮುಖ್ಯ ರಸ್ತೆಯ ಸುಂದರಿ ಅಪಾರ್ಟ್ಮೆಂಟಿನ ಹಿಂಬದಿಯ ಬೃಹತ್ ತಡೆಗೋಡೆ ಕುಸಿದು ಅಲ್ಲಿನ ಫ್ಲ್ಯಾಟ್ ಗಳಿಗೆ ತೀವ್ರ ಹಾನಿಯಾಗಿದ್ದು ಶಾಸಕ ವೇದವ್ಯಾಸ ಕಾಮತ್ ಅವರು ಭೇಟಿ ನೀಡಿ ಪರಿಶೀಲಿಸಿದರು.

ತೀವ್ರ ಮಳೆಯಿಂದ ತಡೆಗೋಡೆ ಇದ್ದ ಭಾಗದ ಗುಡ್ಡವೇ ಕುಸಿದಿದ್ದು, ಆ ರಭಸಕ್ಕೆ ಅಪಾರ್ಟ್ಮೆಂಟಿನ ಎರಡು ಮನೆಗಳು ಹಾನಿಗೀಡಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಮಣ್ಣು ಕುಸಿದ ನಂತರ ಇದೀಗ ಅಲ್ಲಿನ ಮರಗಳೂ ಸಹ ಅಪಾಯಕಾರಿ ಸ್ಥಿತಿಯಲ್ಲಿದ್ದು ಕೂಡಲೇ ಅವುಗಳನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇಂತಹ ಪ್ರಾಕೃತಿಕ ವಿಕೋಪದಿಂದ ಸಾರ್ವಜನಿಕರ ಆಸ್ತಿಪಾಸ್ತಿಗಳಿಗೆ ಹಾನಿಯಾದಾಗ ಹಿಂದಿನ ಬಿಜೆಪಿ ಸರ್ಕಾರ ಗರಿಷ್ಟ 5 ಲಕ್ಷದವರೆಗೂ ಪರಿಹಾರ ನೀಡುತ್ತಿತ್ತು. ಅಲ್ಲದೇ 35 ಕೋಟಿ ವಿಶೇಷ ಅನುದಾನದ ಮೂಲಕ ಕುಸಿದ ತಡೆಗೋಡೆಗಳ ಸಹಿತ ಕ್ಷೇತ್ರದ ಅನೇಕ ದುರಸ್ತಿ ಕಾರ್ಯ ನಡೆಸಲಾಗಿತ್ತು. ಆದರೆ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರ ಆ ಎಲ್ಲಾ ಪರಿಹಾರ ಧನಕ್ಕೂ ಕತ್ತರಿ ಹಾಕಿರುವುದರಿಂದ ಇಲ್ಲಿನ ಜನತೆ ತೀವ್ರ ಸಮಸ್ಯೆ ಅನುಭವಿಸುವಂತಾಗಿದೆ. ಇನ್ನಾದರೂ ರಾಜ್ಯ ಸರ್ಕಾರ ಈ ಬಗ್ಗೆ ಗಮನ ಹರಿಸಿ ಸಂತ್ರಸ್ತರ ನೆರವಿಗೆ ಧಾವಿಸಬೇಕೆಂದು ಶಾಸಕರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಪಾಲಿಕೆ ಸದಸ್ಯೆ ಕಾವ್ಯ ನಟರಾಜ್ ಆಳ್ವ, ಬಿಜೆಪಿ ಪ್ರಮುಖರಾದ ನವೀನ್ ಶೆಣೈ, ಪದ್ಮನಾಭ ನಾಯಕ್, ಯೋಗೀಶ್ ಶೆಣೈ, ಕಿರಣ್ ರೈ, ಅಪಾರ್ಟ್ಮೆಂಟಿನ ಪದಾಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು