9:25 AM Saturday22 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

Mangaluru | ಕದ್ರಿ ಶಿವಭಾಗ್ ಬೃಹತ್ ತಡೆಗೋಡೆ ಕುಸಿತ: ಶಾಸಕ ವೇದವ್ಯಾಸ ಕಾಮತ್ ಭೇಟಿp

18/06/2025, 10:38

ಮಂಗಳೂರು(reporterkarnataka.com): ನಗರದಲ್ಲಿ ಇತ್ತೀಚಿಗೆ ಸುರಿದ ಭಾರೀ ಮಳೆಗೆ ಕದ್ರಿ ಶಿವಭಾಗ್ ನ ಮುಖ್ಯ ರಸ್ತೆಯ ಸುಂದರಿ ಅಪಾರ್ಟ್ಮೆಂಟಿನ ಹಿಂಬದಿಯ ಬೃಹತ್ ತಡೆಗೋಡೆ ಕುಸಿದು ಅಲ್ಲಿನ ಫ್ಲ್ಯಾಟ್ ಗಳಿಗೆ ತೀವ್ರ ಹಾನಿಯಾಗಿದ್ದು ಶಾಸಕ ವೇದವ್ಯಾಸ ಕಾಮತ್ ಅವರು ಭೇಟಿ ನೀಡಿ ಪರಿಶೀಲಿಸಿದರು.

ತೀವ್ರ ಮಳೆಯಿಂದ ತಡೆಗೋಡೆ ಇದ್ದ ಭಾಗದ ಗುಡ್ಡವೇ ಕುಸಿದಿದ್ದು, ಆ ರಭಸಕ್ಕೆ ಅಪಾರ್ಟ್ಮೆಂಟಿನ ಎರಡು ಮನೆಗಳು ಹಾನಿಗೀಡಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಮಣ್ಣು ಕುಸಿದ ನಂತರ ಇದೀಗ ಅಲ್ಲಿನ ಮರಗಳೂ ಸಹ ಅಪಾಯಕಾರಿ ಸ್ಥಿತಿಯಲ್ಲಿದ್ದು ಕೂಡಲೇ ಅವುಗಳನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇಂತಹ ಪ್ರಾಕೃತಿಕ ವಿಕೋಪದಿಂದ ಸಾರ್ವಜನಿಕರ ಆಸ್ತಿಪಾಸ್ತಿಗಳಿಗೆ ಹಾನಿಯಾದಾಗ ಹಿಂದಿನ ಬಿಜೆಪಿ ಸರ್ಕಾರ ಗರಿಷ್ಟ 5 ಲಕ್ಷದವರೆಗೂ ಪರಿಹಾರ ನೀಡುತ್ತಿತ್ತು. ಅಲ್ಲದೇ 35 ಕೋಟಿ ವಿಶೇಷ ಅನುದಾನದ ಮೂಲಕ ಕುಸಿದ ತಡೆಗೋಡೆಗಳ ಸಹಿತ ಕ್ಷೇತ್ರದ ಅನೇಕ ದುರಸ್ತಿ ಕಾರ್ಯ ನಡೆಸಲಾಗಿತ್ತು. ಆದರೆ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರ ಆ ಎಲ್ಲಾ ಪರಿಹಾರ ಧನಕ್ಕೂ ಕತ್ತರಿ ಹಾಕಿರುವುದರಿಂದ ಇಲ್ಲಿನ ಜನತೆ ತೀವ್ರ ಸಮಸ್ಯೆ ಅನುಭವಿಸುವಂತಾಗಿದೆ. ಇನ್ನಾದರೂ ರಾಜ್ಯ ಸರ್ಕಾರ ಈ ಬಗ್ಗೆ ಗಮನ ಹರಿಸಿ ಸಂತ್ರಸ್ತರ ನೆರವಿಗೆ ಧಾವಿಸಬೇಕೆಂದು ಶಾಸಕರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಪಾಲಿಕೆ ಸದಸ್ಯೆ ಕಾವ್ಯ ನಟರಾಜ್ ಆಳ್ವ, ಬಿಜೆಪಿ ಪ್ರಮುಖರಾದ ನವೀನ್ ಶೆಣೈ, ಪದ್ಮನಾಭ ನಾಯಕ್, ಯೋಗೀಶ್ ಶೆಣೈ, ಕಿರಣ್ ರೈ, ಅಪಾರ್ಟ್ಮೆಂಟಿನ ಪದಾಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು