ಇತ್ತೀಚಿನ ಸುದ್ದಿ
ಮಂಗಳೂರು: ಭೀಕರ ರಸ್ತೆ ಅಪಘಾತ: ಎನ್ ಎಸ್ ಯುಐ ಜಿಲ್ಲಾ ಉಪಾಧ್ಯಕ್ಷ ಓಂಶ್ರೀ ಸಹಿತ ಇಬ್ಬರು ಬಲಿ; ಇನ್ನಿಬ್ಬರು ಗಂಭೀರ
18/06/2025, 13:15

ಮಂಗಳೂರು(reporterkarnataka.com): ನಗರದ ಹೊರವಲಯದ ಜಪ್ಪಿನಮೊಗರು ಬಳಿ ಇಂದು ಮುಂಜಾನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಎನ್ ಎಸ್ ಯುಐ ಜಿಲ್ಲಾ ಉಪಾಧ್ಯಕ್ಷ ಓಂಶ್ರೀ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಜಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅವರು ಪ್ರಯಾಣಿಸುತ್ತಿದ್ದ ಕಾರು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ನಂತರ ಕಿರು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಈ ಘೋರ ದುರಂತ ಸಂಭವಿಸಿದೆ. ಓಂಶ್ರೀ(24) ಅವರ ಸ್ನೇಹಿತ ಅಮನ್ ರಾವ್(22) ಮೃತಪಟ್ಟ ಇನ್ನೊರ್ವ ದುರ್ದೈವಿ. ಕಾರನ್ನು ವಿಪರೀತ ವೇಗದಲ್ಲಿ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಮೃತಪಟ್ಟ ಓಂಶ್ರೀ ನಗರದ ದೇರೆಬೈಲ್ ಕೊಂಚಾಡಿಯ ಲ್ಯಾಂಡ್ ಲಿಂಕ್ಸ್ ನಿವಾಸಿ. ಅಮನ್ ರಾವ್ ಅವರು ಕದ್ರಿಯ ನಿವಾಸಿ. ಕಾರಿನಲ್ಲಿ ಒಟ್ಟು 5 ಮಂದಿ ಇದ್ದು, ಓಂಶ್ರೀ ಅವರು ಚಾಲಕನ ಹಿಂಭಾಗದ ಸೀಟಿನಲ್ಲಿ ಕುಳಿತ್ತಿದ್ದರು ಎನ್ನಲಾಗಿದೆ. ಗಂಭೀರ
ಗಾಯಗೊಂಡಿರುವ ವಂಶಿ ಹಾಗೂ ಆಶಿಕ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿದ್ದ ಇನ್ನೊರ್ವ ಅಪಾಯದಿಂದ ಪಾರಾಗಿದ್ದಾರೆ.