ಇತ್ತೀಚಿನ ಸುದ್ದಿ
ಬಂಟ್ವಾಳದಲ್ಲಿ ಮನ ಕಲಕುವ ಘಟನೆ ; ತುಂಬು ಗರ್ಭಿಣಿ ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ
19/06/2025, 16:32

ಬಂಟ್ವಾಳ (reporterkarnataka.com)
ಬಂಟ್ವಾಳ ನಾವೂರು ಗ್ರಾಮದ ಬಡಗುಂಡಿಯಲ್ಲಿ ತುಂಬು ಗರ್ಭಿಣಿ ಪತ್ನಿಯನ್ನು ಕೊಂದು ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬುಧವಾರ ರಾತ್ರಿಯಿಂದ ಗುರುವಾರ ಮುಂಜಾವಿನ ವೇಳೆಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಜಯಂತಿ(45) ಮೃತ ದುರ್ದೈವಿಯಾಗಿದ್ದು, ಪತಿ ತಿಮ್ಮಪ್ಪ ಮೂಲ್ಯ (52) ಕತ್ತು ಹಿಸುಕಿ ಪತ್ನಿಯ ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
15ವರ್ಷಗಳಿಂದ ಮಗುವಿನ ನಿರೀಕ್ಷೆಯಲ್ಲಿದ್ದರು. ಜು.2ಕ್ಕೆ ಸೀಮಂತವೂ ನಿಗದಿಯಾಗಿತ್ತು. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.