7:40 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಕಡಲನಗರಿ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ

21/06/2025, 15:11

ಮಂಗಳೂರು(reporterkarnataka.com): ನಗರದ ಕದ್ರಿ ಪಾರ್ಕ್ ಬಳಿ ಇರುವ ಯುದ್ಧ ಸ್ಮಾರಕದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು, ಎನ್ ಸಿ ಸಿ ನೌಕಾಪಡೆ ಘಟಕದ ಕೆಡೆಟ್‍ಗಳು , ಎನ್ ಸಿಸಿ ಅಧಿಕಾರಿಗಳು ಮತ್ತು ಸೈನಿಕರ ಜೊತೆಗೂಡಿ ಈ ವರ್ಷದ ಯೋಗ ದಿನವನ್ನು ಕ ಆಚರಿಸಿದರು.


ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಭಾರತೀಯ ನೌಕಾಪಡೆಯ ನಿವೃತ್ತ ಪಿಒ ಸುಧೀರ್ ಪೈ ಯೋಗ ದಿನದ ಮಹತ್ವ ಮತ್ತು ಅದರ ಪ್ರಯೋಜನಗಳ ಬಗ್ಗೆ ಮಾತನಾಡಿದರು. ಸಶಸ್ತ್ರ ಪಡೆಗಳಿಗೆ ಸೇರುವ ಪ್ರಸ್ತುತತೆಯನ್ನು ಅವರು ತಿಳಿಸಿದರು.
ವಿಶ್ವ ವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗಣಪತಿ ಗೌಡ ಅವರು ಯೋಗದಿಂದ ಶರೀರಕ್ಕೆ ಉಂಟಾಗುವ ಉಪಯೋಗದ ಬಗ್ಗೆ ತಿಳಿಸಿದರು .
ಈ ವರ್ಷದ ವಿಶ್ವ ಯೋಗ ದಿನದ ದ್ಯೇಯ ವಾಕ್ಯವಾಗಿರುವ ‘ಒಂದು ಭೂಮಿ ಮತ್ತು ಒಂದು ಆರೋಗ್ಯಕ್ಕಾಗಿ ಯೋಗ’ ಕಾರ್ಯಕ್ರಮದಲ್ಲಿ ಕೆಡೆಟ್ ಗಳು ಸಕ್ರಿಯವಾಗಿ ಭಾಗವಹಿಸಿ, ಯೋಗದ ಒಟ್ಟಾರೆ ಯೋಗಕ್ಷೇಮ , ಸಾಮರಸ್ಯಕ್ಕೆ ಸಹಕಾರ. ದೈಹಿಕ ಭಂಗಿಗಳು, ಉಸಿರಾಟದ ತಂತ್ರಗಳು ಮತ್ತು ಧ್ಯಾನವನ್ನು ಸಂಯೋಜಿಸಿ ಮನಸ್ಸು-ದೇಹವನ್ನು ಆರೋಗ್ಯವಾಗಿಡಲು ಸಹಕಾರಿಯಾಗುವ ಬಗ್ಗೆ ತಿಳಿದರು .
ಕಾರ್ಯಕ್ರಮದಲ್ಲಿ ಲೆಫ್ಟಿನೆಂಟ್‌ ಕಮಾಂಡರ್ ಪ್ರೊ. ಯತೀಶ್‌ ಕುಮಾರ್ ಸ್ವಾಗತಿಸಿದರು , ಮೇಜರ್‌ ಡಾ. ಜಯರಾಜ್‌ ವಂದಿಸಿದರು.
ಯೋಗ ಪ್ರದರ್ಶನದಲ್ಲಿ ವಿವಿ ಕಾಲೇಜಿನ 10 ಕೆಡೆಟ್ ಗಳು ಮತ್ತು 14 ಜನ ಸೈನಿಕರು ಉಪಸ್ಥಿತರಿದ್ದರು. ಕೆಡೆಟ್‌ಗಳು ಸೂರ್ಯ ನಮಸ್ಕಾರ, ಪದ್ಮಾಸನ, ಧನುರಾಸನ , ನಟರಾಜಾಸನವನ್ನು ಪ್ರದರ್ಶಿಸಿದರು .

ಇತ್ತೀಚಿನ ಸುದ್ದಿ

ಜಾಹೀರಾತು