9:14 PM Saturday21 - June 2025
ಬ್ರೇಕಿಂಗ್ ನ್ಯೂಸ್
Bagalkote | ಪಟ್ಟದಕಲ್ಲು ವಿಶ್ವ ಪರಂಪರೆ ತಾಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… Udupi | ನೈತಿಕ ಪಾಠ ಶಾಸಕ ಸುನಿಲ್ ಕುಮಾರ್ ಹೇಳಿ ಕೊಡಬೇಕಿಲ್ಲ: ಸಚಿವೆ… ಜಿಲ್ಲಾಸ್ಪತ್ರೆಗಳು, ಆರೋಗ್ಯ ಕೇಂದ್ರಗಳಲ್ಲಿ ಯೋಗ ಮಂದಿರ ಸ್ಥಾಪನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪಾಲಿಕೆ ಮೇಲೆ ಲೋಕಾಯುಕ್ತ ದಾಳಿ: ಕಂದಾಯ, ಆರೋಗ್ಯ ಹಾಗೂ ಎಂಜಿನಿಯರಿಂಗ್ ವಿಭಾಗಗಳ ತೀವ್ರ… Bangalore | ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ: ರಾಜ್ಯಾದ್ಯಂತ ಪರಿಸರ… Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ

ಇತ್ತೀಚಿನ ಸುದ್ದಿ

ಕಡಲನಗರಿ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ

21/06/2025, 15:11

ಮಂಗಳೂರು(reporterkarnataka.com): ನಗರದ ಕದ್ರಿ ಪಾರ್ಕ್ ಬಳಿ ಇರುವ ಯುದ್ಧ ಸ್ಮಾರಕದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು, ಎನ್ ಸಿ ಸಿ ನೌಕಾಪಡೆ ಘಟಕದ ಕೆಡೆಟ್‍ಗಳು , ಎನ್ ಸಿಸಿ ಅಧಿಕಾರಿಗಳು ಮತ್ತು ಸೈನಿಕರ ಜೊತೆಗೂಡಿ ಈ ವರ್ಷದ ಯೋಗ ದಿನವನ್ನು ಕ ಆಚರಿಸಿದರು.


ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಭಾರತೀಯ ನೌಕಾಪಡೆಯ ನಿವೃತ್ತ ಪಿಒ ಸುಧೀರ್ ಪೈ ಯೋಗ ದಿನದ ಮಹತ್ವ ಮತ್ತು ಅದರ ಪ್ರಯೋಜನಗಳ ಬಗ್ಗೆ ಮಾತನಾಡಿದರು. ಸಶಸ್ತ್ರ ಪಡೆಗಳಿಗೆ ಸೇರುವ ಪ್ರಸ್ತುತತೆಯನ್ನು ಅವರು ತಿಳಿಸಿದರು.
ವಿಶ್ವ ವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗಣಪತಿ ಗೌಡ ಅವರು ಯೋಗದಿಂದ ಶರೀರಕ್ಕೆ ಉಂಟಾಗುವ ಉಪಯೋಗದ ಬಗ್ಗೆ ತಿಳಿಸಿದರು .
ಈ ವರ್ಷದ ವಿಶ್ವ ಯೋಗ ದಿನದ ದ್ಯೇಯ ವಾಕ್ಯವಾಗಿರುವ ‘ಒಂದು ಭೂಮಿ ಮತ್ತು ಒಂದು ಆರೋಗ್ಯಕ್ಕಾಗಿ ಯೋಗ’ ಕಾರ್ಯಕ್ರಮದಲ್ಲಿ ಕೆಡೆಟ್ ಗಳು ಸಕ್ರಿಯವಾಗಿ ಭಾಗವಹಿಸಿ, ಯೋಗದ ಒಟ್ಟಾರೆ ಯೋಗಕ್ಷೇಮ , ಸಾಮರಸ್ಯಕ್ಕೆ ಸಹಕಾರ. ದೈಹಿಕ ಭಂಗಿಗಳು, ಉಸಿರಾಟದ ತಂತ್ರಗಳು ಮತ್ತು ಧ್ಯಾನವನ್ನು ಸಂಯೋಜಿಸಿ ಮನಸ್ಸು-ದೇಹವನ್ನು ಆರೋಗ್ಯವಾಗಿಡಲು ಸಹಕಾರಿಯಾಗುವ ಬಗ್ಗೆ ತಿಳಿದರು .
ಕಾರ್ಯಕ್ರಮದಲ್ಲಿ ಲೆಫ್ಟಿನೆಂಟ್‌ ಕಮಾಂಡರ್ ಪ್ರೊ. ಯತೀಶ್‌ ಕುಮಾರ್ ಸ್ವಾಗತಿಸಿದರು , ಮೇಜರ್‌ ಡಾ. ಜಯರಾಜ್‌ ವಂದಿಸಿದರು.
ಯೋಗ ಪ್ರದರ್ಶನದಲ್ಲಿ ವಿವಿ ಕಾಲೇಜಿನ 10 ಕೆಡೆಟ್ ಗಳು ಮತ್ತು 14 ಜನ ಸೈನಿಕರು ಉಪಸ್ಥಿತರಿದ್ದರು. ಕೆಡೆಟ್‌ಗಳು ಸೂರ್ಯ ನಮಸ್ಕಾರ, ಪದ್ಮಾಸನ, ಧನುರಾಸನ , ನಟರಾಜಾಸನವನ್ನು ಪ್ರದರ್ಶಿಸಿದರು .

ಇತ್ತೀಚಿನ ಸುದ್ದಿ

ಜಾಹೀರಾತು