1:23 AM Wednesday1 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಸರ್ಕಾರದಲ್ಲಿ ಕಮೀಶನ್ ದಂಧೆ 224 ಶಾಸಕರಿಗೂ ಗೊತ್ತಿದೆ: ಕೇಂದ್ರ ಸಚಿವ ಕುಮಾರಸ್ವಾಮಿ

22/06/2025, 13:50

ಬೆಂಗಳೂರು(reporterkarnataka.com): ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಕಮೀಶನ್ ವ್ಯವಹಾರದ ಬಗ್ಗೆ 224 ಶಾಸಕರಿಗೂ ಗೊತ್ತಿರುವ ವಿಷಯವೇ ಆಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.
ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ಶಾಸಕರ ಹಣೆಬರಹವೋ ಏನೋ, ತಮ್ಮ ಕ್ಷೇತ್ರಗಳಿಗೆ ಸರ್ಕಾರದ ಯಾವುದೇ ಕಾರ್ಯಕ್ರಮ ತೆಗೆದುಕೊಂಡು ಹೋಗಬೇಕಾದರೆ ಪೇಮೆಂಟ್ ಆಗಲೇಬೇಕು. ಈ ಸರ್ಕಾರದಲ್ಲಿ ಇದೇ ನಡೆಯುತ್ತಿದೆ ಎಂದು ಆರೋಪಿಸಿದರು.
ಈ ಮುಖ್ಯಮಂತ್ರಿಗೆ ಮಾನ‌ ಮರ್ಯಾದೆ ಎನ್ನುವುದು ಇದೆಯಾ? ಇಂಥ ಭ್ರಷ್ಟನನ್ನು ಪಕ್ಕದಲ್ಲಿ ಕೂರಿಸಿಕೊಳ್ಳುತ್ತಾರೆ. ಅಂತಹ ವ್ಯಕ್ತಿಯನ್ನು ಇನ್ನೂ ಸಂಪುಟದಲ್ಲಿ ಇಟ್ಟುಕೊಂಡಿದ್ದಾರೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.
ಈ ಸರ್ಕಾರದಲ್ಲಿ ಭ್ರಷ್ಟಾಚಾರ, ಕಮೀಶನ್ ವ್ಯವಹಾರ ಅವ್ಯಾಹತವಾಗಿ ಸಾಗಿದೆ. ಅದಕ್ಕೆ ಕೊನೆ ಎಂಬುದೇ ಇಲ್ಲ. ಪ್ರತಿಯೊಬ್ಬ ಶಾಸಕರು ಇದರಿಂದ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.
ವಸತಿ ಇಲಾಖೆಯ ಕರ್ಮಕಾಂಡದ ಬಗ್ಗೆ ಬೀದಿ ಬೀದಿಯಲ್ಲಿ ಚರ್ಚೆ ಆಗುತ್ತಿದೆ. ಇವೆಲ್ಲವನ್ನು ಇಲಾಖೆಗಳು ಅಂತಾರಾ?ಇವರೆಲ್ಲಾ ಮಂತ್ರಿಗಳಾ? ಈ ವ್ಯಕ್ತಿಯನ್ನು ಬೇರೆ ಉಪ ಮುಖ್ಯಮಂತ್ರಿಆಡಬೇಕಿತ್ತಂತೆಂತೆ

*ಹೆಚ್.ಕೆ‌. ಪಾಟೀಲ್ ಏನು ಮಾಡುತ್ತಿದ್ದರು?:*
ಗಣಿಗಾರಿಕೆ ಬಗ್ಗೆ ತನಿಖೆ ಮಾಡುವಂತೆ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ‌. ಪಾಟೀಲ್ ಅವರು ಪತ್ರ ಬರೆದಿದ್ದಾರೆ. ಅವರು ಈ ಸರ್ಕಾರದಲ್ಲಿ ಎರಡು ವರ್ಷದಿಂದ ಸಚಿವರಾಗಿದ್ದಾರೆ. ಈಗ ಪತ್ರ ಬರೆದಿದ್ದಾರೆ. ಅವರು ಇಷ್ಟು ದಿನ ಏನು ಮಾಡುತ್ತಿದ್ದರು? 2015 – 16ರಲ್ಲಿ ತನಿಖೆ ನಡೆಸುವಂತೆ ಇದೇ ಹೆಚ್.ಕೆ. ಪಾಟೀಲ್ ಅವರೇ ಶಿಫಾರಸು ಮಾಡಿದ್ದರು. ಆ ವರದಿನಿಟ್ಟುಕೊಂಡು ಅವರು ದಿನವೂ ಪೂಜೆ ಮಾಡುತ್ತಿದ್ದಾರಾ? ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು