7:48 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಸರ್ಕಾರದಲ್ಲಿ ಕಮೀಶನ್ ದಂಧೆ 224 ಶಾಸಕರಿಗೂ ಗೊತ್ತಿದೆ: ಕೇಂದ್ರ ಸಚಿವ ಕುಮಾರಸ್ವಾಮಿ

22/06/2025, 13:50

ಬೆಂಗಳೂರು(reporterkarnataka.com): ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಕಮೀಶನ್ ವ್ಯವಹಾರದ ಬಗ್ಗೆ 224 ಶಾಸಕರಿಗೂ ಗೊತ್ತಿರುವ ವಿಷಯವೇ ಆಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.
ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ಶಾಸಕರ ಹಣೆಬರಹವೋ ಏನೋ, ತಮ್ಮ ಕ್ಷೇತ್ರಗಳಿಗೆ ಸರ್ಕಾರದ ಯಾವುದೇ ಕಾರ್ಯಕ್ರಮ ತೆಗೆದುಕೊಂಡು ಹೋಗಬೇಕಾದರೆ ಪೇಮೆಂಟ್ ಆಗಲೇಬೇಕು. ಈ ಸರ್ಕಾರದಲ್ಲಿ ಇದೇ ನಡೆಯುತ್ತಿದೆ ಎಂದು ಆರೋಪಿಸಿದರು.
ಈ ಮುಖ್ಯಮಂತ್ರಿಗೆ ಮಾನ‌ ಮರ್ಯಾದೆ ಎನ್ನುವುದು ಇದೆಯಾ? ಇಂಥ ಭ್ರಷ್ಟನನ್ನು ಪಕ್ಕದಲ್ಲಿ ಕೂರಿಸಿಕೊಳ್ಳುತ್ತಾರೆ. ಅಂತಹ ವ್ಯಕ್ತಿಯನ್ನು ಇನ್ನೂ ಸಂಪುಟದಲ್ಲಿ ಇಟ್ಟುಕೊಂಡಿದ್ದಾರೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.
ಈ ಸರ್ಕಾರದಲ್ಲಿ ಭ್ರಷ್ಟಾಚಾರ, ಕಮೀಶನ್ ವ್ಯವಹಾರ ಅವ್ಯಾಹತವಾಗಿ ಸಾಗಿದೆ. ಅದಕ್ಕೆ ಕೊನೆ ಎಂಬುದೇ ಇಲ್ಲ. ಪ್ರತಿಯೊಬ್ಬ ಶಾಸಕರು ಇದರಿಂದ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.
ವಸತಿ ಇಲಾಖೆಯ ಕರ್ಮಕಾಂಡದ ಬಗ್ಗೆ ಬೀದಿ ಬೀದಿಯಲ್ಲಿ ಚರ್ಚೆ ಆಗುತ್ತಿದೆ. ಇವೆಲ್ಲವನ್ನು ಇಲಾಖೆಗಳು ಅಂತಾರಾ?ಇವರೆಲ್ಲಾ ಮಂತ್ರಿಗಳಾ? ಈ ವ್ಯಕ್ತಿಯನ್ನು ಬೇರೆ ಉಪ ಮುಖ್ಯಮಂತ್ರಿಆಡಬೇಕಿತ್ತಂತೆಂತೆ

*ಹೆಚ್.ಕೆ‌. ಪಾಟೀಲ್ ಏನು ಮಾಡುತ್ತಿದ್ದರು?:*
ಗಣಿಗಾರಿಕೆ ಬಗ್ಗೆ ತನಿಖೆ ಮಾಡುವಂತೆ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ‌. ಪಾಟೀಲ್ ಅವರು ಪತ್ರ ಬರೆದಿದ್ದಾರೆ. ಅವರು ಈ ಸರ್ಕಾರದಲ್ಲಿ ಎರಡು ವರ್ಷದಿಂದ ಸಚಿವರಾಗಿದ್ದಾರೆ. ಈಗ ಪತ್ರ ಬರೆದಿದ್ದಾರೆ. ಅವರು ಇಷ್ಟು ದಿನ ಏನು ಮಾಡುತ್ತಿದ್ದರು? 2015 – 16ರಲ್ಲಿ ತನಿಖೆ ನಡೆಸುವಂತೆ ಇದೇ ಹೆಚ್.ಕೆ. ಪಾಟೀಲ್ ಅವರೇ ಶಿಫಾರಸು ಮಾಡಿದ್ದರು. ಆ ವರದಿನಿಟ್ಟುಕೊಂಡು ಅವರು ದಿನವೂ ಪೂಜೆ ಮಾಡುತ್ತಿದ್ದಾರಾ? ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು