2:34 PM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಕತಾರಿನಲ್ಲಿ ಹಣ್ಣಿನ ರಾಜನ ದರ್ಬಾರು: ರಾಜಪುರಿ, ತೂತಪುರಿ, ಬಾದಾಮಿ, ನಾಟಿ, ಸಿಂಧೂರ!

23/06/2025, 21:18

ಕತಾರು(reporterkarnataka.com): ಕೊಲ್ಲಿ ರಾಷ್ಟ್ರಗಳಲ್ಲೊಂದು ಪುಟ್ಟ ದೇಶ, ಅದರ ರಾಜಧಾನಿಯಲ್ಲೊಂದು ಚಿಕ್ಕ ಜಾಗದಲ್ಲಿ ಒಳಾಂಗಣ ಮಳಿಗೆ. ಮಳಿಗೆಯ ಹೊರಗಿನ ಮಾರುಕಟ್ಟೆ ಪ್ರದೇಶದಲ್ಲಿ 36°C ತಾಪಮಾನ, ಮಳಿಗೆಯ ಒಳಗೆ ಹವಾನಿಯಂತ್ರಿತ ವಾತಾವರಣ, ವಿಶೇಷವಾಗಿ ಹಣ್ಣಿನ ರಾಜನಿಗೆ ಈ ಸಿದ್ಧತೆ. ಎರಡನೇ ಬಾರಿ ಆಯೋಜಿಸುತ್ತಿರುವ ಮಾವಿನ ಹಾಂಬಾ ಪ್ರದರ್ಶನ ಇದಾಗಿದೆ.
50ಕ್ಕೂ ಹೆಚ್ಚು ಅಂಗಡಿಗಳು, ಸುಮಾರು 25 ಮಾರಾಟಗಾರರು, ಎರಡು ವಾರದ ಸಂತೆ ಎಂದೇ ಹೇಳಬಹುದು. ಪ್ರತಿದಿನಕ್ಕೆ ಸಾವಿರಾರು ಜನರು ಬಂದು ಆನಂದಿಸಿ, ಸ್ವಾದಿಸಿ, ಹೋಗುತ್ತಿರುವರು. ಇದೇ ಕತಾರಿನ ದೋಹದಲ್ಲಿರುವ ಸೂಕ್ ವಾಕಿಫ್ ನಲ್ಲಿ ನಡೆದ ಮಾವಿನ ಮೇಳ. ರಾಜಪುರಿ, ತೂತಪುರಿ, ಬಾದಾಮಿ, ನಾಟಿ, ಸಿಂಧೂರ ಇನ್ನೂ ಅನೇಕ ತಳಿಗಳ ಮಾವಿನ ಹಣ್ಣುಗಳ ಸುವಾಸನೆ ತುಂಬಿದ ಈ ಒಳಾಂಗಣ ಪ್ರದೇಶದಲ್ಲಿ, ಮಾವಿನ ಹಣ್ಣಿನ ರಸ, ಮಾವಿನಕಾಯಿ ಜೊತೆಗೆ ಉಪ್ಪು ಖಾರ, ಮಾವಿನ ಉಪ್ಪಿನಕಾಯಿ, ಮಾವಿನ ಐಸ್ ಕ್ರೀಮ್, ಮಾವಿನ ಫಲೂದ, ಮಾವಿನ ಲಸ್ಸಿ ಹೀಗೆ ವೈವಿಧ್ಯಮಯ ರುಚಿಕರ ರಸಭರಿತ ಮಾವಿನ ತಿಂಡಿ ಮತ್ತು ಪಾನಿಯಗಳು ಎಲ್ಲರ ಇಂದ್ರಿಯಗಳನ್ನು ಆಕರ್ಷಿಸಿತು.


ಒಂದೆಡೆ ಸುಪ್ರಸಿದ್ಧ ವಾಣಿಜ್ಯ ಮಳಿಗೆಗಳ ಸಾಲಾಗಿ ಇದ್ದರೆ ಇನ್ನೊಂದೆಡೆ ಪ್ರಸಿದ್ಧ ಉಪಹಾರ ಕೇಂದ್ರಗಳ ಅಂಗಡಿ ಮುಂಗಟ್ಟುಗಳು ಇದ್ದವು, ಮತ್ತೊಂದೆಡೆ ನೇರ ಮಾರಾಟಗಾರರ (ಹೋಲ್ಸೇಲ್) ಮಳಿಗೆಗಳು ಇದ್ದವು. ಭಾರತ , ಕತಾರ್ , ಶ್ರೀಲಂಕಾ , ಬಾಂಗ್ಲಾದೇಶ, ಫಿಲಿಪಿನ್ಸ್ ಇನ್ನೂ ಹಲವು ದೇಶದ ಜನರು ಬಂದು ಈ ಮಾವಿನ ಮೇಳದಲ್ಲಿ ಹಣ್ಣಿನ ಯಾವುದಾದರೂ ಒಂದು ರುಚಿಯನ್ನು ಸೇವಿಸಿ ಹೋಗಿರುವರು.
ನಿಜವಾಗಲೂ ಅದ್ಭುತ ದೃಶ್ಯವಲ್ಲವೇ? ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಕೇರಳ, ಮಧ್ಯಪ್ರದೇಶ, ಗೋವಾ ಇನ್ನಿತರ ರಾಜ್ಯಗಳಿಂದ ಆಮದು ತರಿಸಿದ ಮಾವಿನ ಹಣ್ಣುಗಳು. ಕತರಿನ ಭಾರತೀಯ ದೂತಾವಾಸದ ನೇತೃತ್ವದಲ್ಲಿ ಐಬಿಪಿಸಿ (ಭಾರತೀಯ ವ್ಯವಹಾರ ಹಾಗೂ ವೃತ್ತಿ ನಿರತ ಮಂಡಳಿಯ) ಸಹಯೋಗದೊಂದಿಗೆ ಏರ್ಪಡಿಸಿದ್ದ ಎರಡು ವಾರಗಳ ಮಾವಿನ ಮೇಳವು, ದಿನಾಂಕ 12 ಜೂನ್ 2025ರಂದು ಪ್ರಾರಂಭವಾಗಿ 21 ಜೂನ್ 2025ರಂದು ಸಂಪನ್ನಗೊಂಡಿತು. ನಿಜಕ್ಕೂ ಅದ್ದೂರಿ ಯಶಸ್ಸು ಕಂಡದ್ದು ಹಣ್ಣಿನ ರಾಜನೆ!

ಇತ್ತೀಚಿನ ಸುದ್ದಿ

ಜಾಹೀರಾತು