1:38 PM Saturday16 - August 2025
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.…

ಇತ್ತೀಚಿನ ಸುದ್ದಿ

ಕತಾರಿನಲ್ಲಿ ಹಣ್ಣಿನ ರಾಜನ ದರ್ಬಾರು: ರಾಜಪುರಿ, ತೂತಪುರಿ, ಬಾದಾಮಿ, ನಾಟಿ, ಸಿಂಧೂರ!

23/06/2025, 21:18

ಕತಾರು(reporterkarnataka.com): ಕೊಲ್ಲಿ ರಾಷ್ಟ್ರಗಳಲ್ಲೊಂದು ಪುಟ್ಟ ದೇಶ, ಅದರ ರಾಜಧಾನಿಯಲ್ಲೊಂದು ಚಿಕ್ಕ ಜಾಗದಲ್ಲಿ ಒಳಾಂಗಣ ಮಳಿಗೆ. ಮಳಿಗೆಯ ಹೊರಗಿನ ಮಾರುಕಟ್ಟೆ ಪ್ರದೇಶದಲ್ಲಿ 36°C ತಾಪಮಾನ, ಮಳಿಗೆಯ ಒಳಗೆ ಹವಾನಿಯಂತ್ರಿತ ವಾತಾವರಣ, ವಿಶೇಷವಾಗಿ ಹಣ್ಣಿನ ರಾಜನಿಗೆ ಈ ಸಿದ್ಧತೆ. ಎರಡನೇ ಬಾರಿ ಆಯೋಜಿಸುತ್ತಿರುವ ಮಾವಿನ ಹಾಂಬಾ ಪ್ರದರ್ಶನ ಇದಾಗಿದೆ.
50ಕ್ಕೂ ಹೆಚ್ಚು ಅಂಗಡಿಗಳು, ಸುಮಾರು 25 ಮಾರಾಟಗಾರರು, ಎರಡು ವಾರದ ಸಂತೆ ಎಂದೇ ಹೇಳಬಹುದು. ಪ್ರತಿದಿನಕ್ಕೆ ಸಾವಿರಾರು ಜನರು ಬಂದು ಆನಂದಿಸಿ, ಸ್ವಾದಿಸಿ, ಹೋಗುತ್ತಿರುವರು. ಇದೇ ಕತಾರಿನ ದೋಹದಲ್ಲಿರುವ ಸೂಕ್ ವಾಕಿಫ್ ನಲ್ಲಿ ನಡೆದ ಮಾವಿನ ಮೇಳ. ರಾಜಪುರಿ, ತೂತಪುರಿ, ಬಾದಾಮಿ, ನಾಟಿ, ಸಿಂಧೂರ ಇನ್ನೂ ಅನೇಕ ತಳಿಗಳ ಮಾವಿನ ಹಣ್ಣುಗಳ ಸುವಾಸನೆ ತುಂಬಿದ ಈ ಒಳಾಂಗಣ ಪ್ರದೇಶದಲ್ಲಿ, ಮಾವಿನ ಹಣ್ಣಿನ ರಸ, ಮಾವಿನಕಾಯಿ ಜೊತೆಗೆ ಉಪ್ಪು ಖಾರ, ಮಾವಿನ ಉಪ್ಪಿನಕಾಯಿ, ಮಾವಿನ ಐಸ್ ಕ್ರೀಮ್, ಮಾವಿನ ಫಲೂದ, ಮಾವಿನ ಲಸ್ಸಿ ಹೀಗೆ ವೈವಿಧ್ಯಮಯ ರುಚಿಕರ ರಸಭರಿತ ಮಾವಿನ ತಿಂಡಿ ಮತ್ತು ಪಾನಿಯಗಳು ಎಲ್ಲರ ಇಂದ್ರಿಯಗಳನ್ನು ಆಕರ್ಷಿಸಿತು.


ಒಂದೆಡೆ ಸುಪ್ರಸಿದ್ಧ ವಾಣಿಜ್ಯ ಮಳಿಗೆಗಳ ಸಾಲಾಗಿ ಇದ್ದರೆ ಇನ್ನೊಂದೆಡೆ ಪ್ರಸಿದ್ಧ ಉಪಹಾರ ಕೇಂದ್ರಗಳ ಅಂಗಡಿ ಮುಂಗಟ್ಟುಗಳು ಇದ್ದವು, ಮತ್ತೊಂದೆಡೆ ನೇರ ಮಾರಾಟಗಾರರ (ಹೋಲ್ಸೇಲ್) ಮಳಿಗೆಗಳು ಇದ್ದವು. ಭಾರತ , ಕತಾರ್ , ಶ್ರೀಲಂಕಾ , ಬಾಂಗ್ಲಾದೇಶ, ಫಿಲಿಪಿನ್ಸ್ ಇನ್ನೂ ಹಲವು ದೇಶದ ಜನರು ಬಂದು ಈ ಮಾವಿನ ಮೇಳದಲ್ಲಿ ಹಣ್ಣಿನ ಯಾವುದಾದರೂ ಒಂದು ರುಚಿಯನ್ನು ಸೇವಿಸಿ ಹೋಗಿರುವರು.
ನಿಜವಾಗಲೂ ಅದ್ಭುತ ದೃಶ್ಯವಲ್ಲವೇ? ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಕೇರಳ, ಮಧ್ಯಪ್ರದೇಶ, ಗೋವಾ ಇನ್ನಿತರ ರಾಜ್ಯಗಳಿಂದ ಆಮದು ತರಿಸಿದ ಮಾವಿನ ಹಣ್ಣುಗಳು. ಕತರಿನ ಭಾರತೀಯ ದೂತಾವಾಸದ ನೇತೃತ್ವದಲ್ಲಿ ಐಬಿಪಿಸಿ (ಭಾರತೀಯ ವ್ಯವಹಾರ ಹಾಗೂ ವೃತ್ತಿ ನಿರತ ಮಂಡಳಿಯ) ಸಹಯೋಗದೊಂದಿಗೆ ಏರ್ಪಡಿಸಿದ್ದ ಎರಡು ವಾರಗಳ ಮಾವಿನ ಮೇಳವು, ದಿನಾಂಕ 12 ಜೂನ್ 2025ರಂದು ಪ್ರಾರಂಭವಾಗಿ 21 ಜೂನ್ 2025ರಂದು ಸಂಪನ್ನಗೊಂಡಿತು. ನಿಜಕ್ಕೂ ಅದ್ದೂರಿ ಯಶಸ್ಸು ಕಂಡದ್ದು ಹಣ್ಣಿನ ರಾಜನೆ!

ಇತ್ತೀಚಿನ ಸುದ್ದಿ

ಜಾಹೀರಾತು