6:00 AM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

“ಶರ್ಮಿಷ್ಠೆ” ನಾಟಕ ವೀಕ್ಷಿಸಿದ ಸಚಿವ ಡಾ.ಎಚ್.ಸಿ.ಮಹದೇವಪ್ಪ: ಉಮಾಶ್ರೀ ಭಾವಪೂರ್ಣ ಅಭಿನಯಕ್ಕೆ ಫಿದಾ

23/06/2025, 21:30

ಮೈಸೂರು(reporterkarnataka.com): ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಬೇಲೂರು ರಘುನಂದನ್‌ ವಿರಚಿತ, ಚಿದಂಬರ ರಾವ್‌ ಜಂಬೆ ನಿರ್ದೇಶಿಸಿರುವ ಹಿರಿಯ ನಟಿ ಉಮಾಶ್ರೀ ಅವರ ಅಭಿನಯದ “ಶರ್ಮಿಷ್ಠೆ” ನಾಟವನ್ನು ಭಾನುವಾರ ಮಂಡ್ಯ ರಮೇಶ್ ಅವರ ನಟನ ರಂಗಶಾಲೆಯಲ್ಲಿ ವೀಕ್ಷಿಸಿದರು.


ಈ ವೇಳೆ ಮಾತನಾಡಿದ ಅವರು, ಬಹುಮುಖ ಪ್ರತಿಭೆ ಉಮಾಶ್ರೀ ಅವರು ಭಾವಪೂರ್ಣವಾದ ಅಭಿನಯ ನಮ್ಮೆನ್ನೆಲ್ಲ ಒಂದು ಗಂಟೆ ಕಾಲ ಭಾವಪರವಶಗೊಳಿಸಿದೆ. ಇಬ್ಬರು ಪರಮಾಪ್ತ ಸ್ನೇಹಿತರ ವಿಭಿನ್ನವಾದ ನಡೆ, ನುಡಿಗಳು ಹಾಗೂ ಸಂಘರ್ಷದ ಸನ್ನಿವೇಶಗಳ ಮನೋಜ್ಞವಾದ ನಟನೆ ನಿಜಕ್ಕೂ ಪ್ರಶಂಸನೀಯ ಎಂದರು.
ಕಷ್ಟದ ದಿನಗಳಿಂದ ಬೆಳೆದು ಬಂದಿರುವ ಉಮಾಶ್ರೀ ಅವರು ಜೀವನದ ಅನೇಕ ಮಜಲುಗಳನ್ನು ಹತ್ತಿರದಿಂದ ಕಂಡಿದ್ದಾರೆ. ನಾಟಕದಲ್ಲೂ ಕೂಡ ಎಲ್ಲಿಯೂ ಏರಿಳಿತಗಳಿಲ್ಲದೆ ಅತ್ಯುತ್ತಮವಾಗಿ ಏಕಪಾತ್ರದಲ್ಲಿ ಅಭಿನಯಿಸಿ ಪಾತ್ರಕ್ಕೆ ಜೀವತುಂಬಿದ್ದಾರೆ. ಅವರ ಅಪ್ರತಿಮಾ ಕಲಾಪ್ರತಿಭೆಯನ್ನು ಈ ನಾಟಕದ ಮೂಲಕ ಅಭಿವ್ಯಕ್ತಿಗೊಳಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ರಾಜಕೀಯದಲ್ಲಿಯೂ ಕೂಡ ಮಹಿಳಾ ಮತ್ತು ಮಕ್ಕಳ ಸಚಿವೆಯಾಗಿ ಮಹಿಳಾ ಪರವಾಗಿ ಉತ್ತಮವಾದ ಕೆಲಸಗಳನ್ನು ಮಾಡಿದ್ದಾರೆ. ಮಕ್ಕಳು ಹಾಗೂ ಬಾಣಂತಿಯರ ಬಗ್ಗೆ ಆಸಕ್ತಿವಹಿಸಿ ಅನೇಕ ಕೊಡುಗೆ ನೀಡಿದ್ದಾರೆ. ವಿಧಾನ ಪರಿಷತ್‌ನಲ್ಲಿ ಕೂಡ ಚಳುವಳಿಯ ಮೂಲಕ ತಮ್ಮ ಜವಬ್ದಾರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಿದ್ದಾರೆ ಎಂದರು.
ರಂಗಕ್ಷೇತ್ರಗಳು ಸಾಮಾಜಿಕ ಜವಾಬ್ದಾರಿ ಮತ್ತು ಸಂದೇಶಗಳನ್ನು ಸಾರುವ ಮೂಲಕ ಮಹತ್ತರವಾದ ಬದಲಾವಣೆಯನ್ನು ಜಾರಿಮಾಡುವಂತಹ ವೇದಿಕೆಗಳಾಗಿವೆ. ಇಂತಹ ಕೆಲಸಗಳಿಗೆ ಪ್ರೇರಕ ಶಕ್ತಿಯಾಗಿ ಉಮಾಶ್ರೀ ಹಾಗೂ ಮಂಡ್ಯ ರಮೇಶ್ ಅವರಂತಹ ಕಲಾವಿದರ ಕೊಡುಗೆ ಶ್ಲಾಘನೀಯ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು