8:16 PM Tuesday12 - August 2025
ಬ್ರೇಕಿಂಗ್ ನ್ಯೂಸ್
ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ… ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast… Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ… ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಲ್ಲೂ ಮತಗಳ್ಳತನ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ… ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್…

ಇತ್ತೀಚಿನ ಸುದ್ದಿ

“ಶರ್ಮಿಷ್ಠೆ” ನಾಟಕ ವೀಕ್ಷಿಸಿದ ಸಚಿವ ಡಾ.ಎಚ್.ಸಿ.ಮಹದೇವಪ್ಪ: ಉಮಾಶ್ರೀ ಭಾವಪೂರ್ಣ ಅಭಿನಯಕ್ಕೆ ಫಿದಾ

23/06/2025, 21:30

ಮೈಸೂರು(reporterkarnataka.com): ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಬೇಲೂರು ರಘುನಂದನ್‌ ವಿರಚಿತ, ಚಿದಂಬರ ರಾವ್‌ ಜಂಬೆ ನಿರ್ದೇಶಿಸಿರುವ ಹಿರಿಯ ನಟಿ ಉಮಾಶ್ರೀ ಅವರ ಅಭಿನಯದ “ಶರ್ಮಿಷ್ಠೆ” ನಾಟವನ್ನು ಭಾನುವಾರ ಮಂಡ್ಯ ರಮೇಶ್ ಅವರ ನಟನ ರಂಗಶಾಲೆಯಲ್ಲಿ ವೀಕ್ಷಿಸಿದರು.


ಈ ವೇಳೆ ಮಾತನಾಡಿದ ಅವರು, ಬಹುಮುಖ ಪ್ರತಿಭೆ ಉಮಾಶ್ರೀ ಅವರು ಭಾವಪೂರ್ಣವಾದ ಅಭಿನಯ ನಮ್ಮೆನ್ನೆಲ್ಲ ಒಂದು ಗಂಟೆ ಕಾಲ ಭಾವಪರವಶಗೊಳಿಸಿದೆ. ಇಬ್ಬರು ಪರಮಾಪ್ತ ಸ್ನೇಹಿತರ ವಿಭಿನ್ನವಾದ ನಡೆ, ನುಡಿಗಳು ಹಾಗೂ ಸಂಘರ್ಷದ ಸನ್ನಿವೇಶಗಳ ಮನೋಜ್ಞವಾದ ನಟನೆ ನಿಜಕ್ಕೂ ಪ್ರಶಂಸನೀಯ ಎಂದರು.
ಕಷ್ಟದ ದಿನಗಳಿಂದ ಬೆಳೆದು ಬಂದಿರುವ ಉಮಾಶ್ರೀ ಅವರು ಜೀವನದ ಅನೇಕ ಮಜಲುಗಳನ್ನು ಹತ್ತಿರದಿಂದ ಕಂಡಿದ್ದಾರೆ. ನಾಟಕದಲ್ಲೂ ಕೂಡ ಎಲ್ಲಿಯೂ ಏರಿಳಿತಗಳಿಲ್ಲದೆ ಅತ್ಯುತ್ತಮವಾಗಿ ಏಕಪಾತ್ರದಲ್ಲಿ ಅಭಿನಯಿಸಿ ಪಾತ್ರಕ್ಕೆ ಜೀವತುಂಬಿದ್ದಾರೆ. ಅವರ ಅಪ್ರತಿಮಾ ಕಲಾಪ್ರತಿಭೆಯನ್ನು ಈ ನಾಟಕದ ಮೂಲಕ ಅಭಿವ್ಯಕ್ತಿಗೊಳಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ರಾಜಕೀಯದಲ್ಲಿಯೂ ಕೂಡ ಮಹಿಳಾ ಮತ್ತು ಮಕ್ಕಳ ಸಚಿವೆಯಾಗಿ ಮಹಿಳಾ ಪರವಾಗಿ ಉತ್ತಮವಾದ ಕೆಲಸಗಳನ್ನು ಮಾಡಿದ್ದಾರೆ. ಮಕ್ಕಳು ಹಾಗೂ ಬಾಣಂತಿಯರ ಬಗ್ಗೆ ಆಸಕ್ತಿವಹಿಸಿ ಅನೇಕ ಕೊಡುಗೆ ನೀಡಿದ್ದಾರೆ. ವಿಧಾನ ಪರಿಷತ್‌ನಲ್ಲಿ ಕೂಡ ಚಳುವಳಿಯ ಮೂಲಕ ತಮ್ಮ ಜವಬ್ದಾರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಿದ್ದಾರೆ ಎಂದರು.
ರಂಗಕ್ಷೇತ್ರಗಳು ಸಾಮಾಜಿಕ ಜವಾಬ್ದಾರಿ ಮತ್ತು ಸಂದೇಶಗಳನ್ನು ಸಾರುವ ಮೂಲಕ ಮಹತ್ತರವಾದ ಬದಲಾವಣೆಯನ್ನು ಜಾರಿಮಾಡುವಂತಹ ವೇದಿಕೆಗಳಾಗಿವೆ. ಇಂತಹ ಕೆಲಸಗಳಿಗೆ ಪ್ರೇರಕ ಶಕ್ತಿಯಾಗಿ ಉಮಾಶ್ರೀ ಹಾಗೂ ಮಂಡ್ಯ ರಮೇಶ್ ಅವರಂತಹ ಕಲಾವಿದರ ಕೊಡುಗೆ ಶ್ಲಾಘನೀಯ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು