8:45 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಶರಣಾಗತಿ ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ ಚಿಕ್ಕಮಗಳೂರು ಕೋರ್ಟಿಗೆ ಹಾಜರು: ಕೇರಳ ಪೊಲೀಸರ ಕ್ರಮ

26/06/2025, 11:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶರಣಾಗತಿ ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ ಅವರನ್ನು ಕೇರಳ ಪೊಲೀಸರು ಚಿಕ್ಕಮಗಳೂರು ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ನಕ್ಸಲ್ ಹೋರಾಟದ ಹಾದಿಯಲ್ಲಿ ಬಿ.ಜಿ.ಕೃಷ್ಣಮೂರ್ತಿ ಮೇಲೆ ಚಿಕ್ಕಮಗಳೂರು, ಉಡುಪಿ ಹಾಗೂ ಮಂಗಳೂರು ಹಲವು ಪ್ರಕರಣಗಳು ದಾಖಲಾಗಿದ್ದವು. ವಿಚಾರಣೆ ಸಂಬಂಧ ಕೇರಳ ಪೊಲೀಸರು ಚಿಕ್ಕಮಗಳೂರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಬಿ.ಜಿ.ಕೃಷ್ಣಮೂರ್ತಿ ಮೇಲೆ ಒಟ್ಟು 66 ಪ್ರಕರಣಗಳು ದಾಖಲಾಗಿವೆ. ಇಂದು ಚಿಕ್ಕಮಗಳೂರು ಜಿಲ್ಲೆಯ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ಜುಲೈ 21ಕ್ಕೆ ಮುಂದೂಡಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ನಕ್ಸಲ್ ನಾಯಕ ಸಾಕೇತ್ ರಾಜನ್ ಎನ್ಕೌಂಟರ್ ಆದ ಬಳಿಕ ಸುಮಾರು ಒಂದೂವರೆ ದಶಕಗಳ ಕಾಲ ಬಿ.ಜಿ.ಕೃಷ್ಣಮೂರ್ತಿ ನಕ್ಸಲ್ ನಾಯಕತ್ವ ವಹಿಸಿಕೊಂಡಿದ್ದರು. 2014ರ ಬಳಿಕ ನಿರಂತರ ಕಾಂಬಿಂಗ್, ಮಲೆನಾಡಿಗರ ಬೆಂಬಲ ಕಡಿಮೆಯಾದ ಹಿನ್ನೆಲೆ ಬಿ.ಜಿ.ಕೃಷ್ಣಮೂರ್ತಿ ಸೇರಿ ಹಲವಾರು ನಕ್ಸಲರು ಕೇರಳತ್ತ ಮುಖ ಮಾಡಿದ್ದರು. ಕಳೆದ ವರ್ಷ ಸರ್ಕಾರದ ಪ್ಯಾಕೇಜ್ ಅಡಿಯಲ್ಲಿ ಬಿ.ಜಿ.ಕೃಷ್ಣಮೂರ್ತಿ ಪೊಲೀಸರಿಗೆ ಶರಣಾಗಿದ್ದರು. ಅವರು ಶರಣಾದ ಬಳಿಕ ಸುಮಾರು 8 ಜನ ನಕ್ಸಲರು ಕರ್ನಾಟಕದಲ್ಲಿ ಶರಣಾಗತಿಯಾಗಿದ್ದರು. 7 ಜನ ಸಿಎಂ ಮುಂದೆ ಶರಣಾಗಿದ್ದರೆ, ಓರ್ವ ಚಿಕ್ಕಮಗಳೂರು ಎಸ್ಪಿ ಮುಂದೆ ಶರಣಾಗಿದ್ದನು. ಇಂದು ವಿಚಾರಣೆ ಮುಗಿದ ಬಳಿಕ ಕೇರಳ ಪೊಲೀಸರು ಬಿ.ಜಿ.ಕೃಷ್ಣಮೂರ್ತಿಯನ್ನ ಮತ್ತೆ ತಮ್ಮ ವಶಕ್ಕೆ ಪಡೆದು ಕರೆದೊಯ್ದರು.

ಇತ್ತೀಚಿನ ಸುದ್ದಿ

ಜಾಹೀರಾತು