11:52 AM Saturday22 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಶರಣಾಗತಿ ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ ಚಿಕ್ಕಮಗಳೂರು ಕೋರ್ಟಿಗೆ ಹಾಜರು: ಕೇರಳ ಪೊಲೀಸರ ಕ್ರಮ

26/06/2025, 11:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶರಣಾಗತಿ ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ ಅವರನ್ನು ಕೇರಳ ಪೊಲೀಸರು ಚಿಕ್ಕಮಗಳೂರು ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ನಕ್ಸಲ್ ಹೋರಾಟದ ಹಾದಿಯಲ್ಲಿ ಬಿ.ಜಿ.ಕೃಷ್ಣಮೂರ್ತಿ ಮೇಲೆ ಚಿಕ್ಕಮಗಳೂರು, ಉಡುಪಿ ಹಾಗೂ ಮಂಗಳೂರು ಹಲವು ಪ್ರಕರಣಗಳು ದಾಖಲಾಗಿದ್ದವು. ವಿಚಾರಣೆ ಸಂಬಂಧ ಕೇರಳ ಪೊಲೀಸರು ಚಿಕ್ಕಮಗಳೂರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಬಿ.ಜಿ.ಕೃಷ್ಣಮೂರ್ತಿ ಮೇಲೆ ಒಟ್ಟು 66 ಪ್ರಕರಣಗಳು ದಾಖಲಾಗಿವೆ. ಇಂದು ಚಿಕ್ಕಮಗಳೂರು ಜಿಲ್ಲೆಯ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ಜುಲೈ 21ಕ್ಕೆ ಮುಂದೂಡಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ನಕ್ಸಲ್ ನಾಯಕ ಸಾಕೇತ್ ರಾಜನ್ ಎನ್ಕೌಂಟರ್ ಆದ ಬಳಿಕ ಸುಮಾರು ಒಂದೂವರೆ ದಶಕಗಳ ಕಾಲ ಬಿ.ಜಿ.ಕೃಷ್ಣಮೂರ್ತಿ ನಕ್ಸಲ್ ನಾಯಕತ್ವ ವಹಿಸಿಕೊಂಡಿದ್ದರು. 2014ರ ಬಳಿಕ ನಿರಂತರ ಕಾಂಬಿಂಗ್, ಮಲೆನಾಡಿಗರ ಬೆಂಬಲ ಕಡಿಮೆಯಾದ ಹಿನ್ನೆಲೆ ಬಿ.ಜಿ.ಕೃಷ್ಣಮೂರ್ತಿ ಸೇರಿ ಹಲವಾರು ನಕ್ಸಲರು ಕೇರಳತ್ತ ಮುಖ ಮಾಡಿದ್ದರು. ಕಳೆದ ವರ್ಷ ಸರ್ಕಾರದ ಪ್ಯಾಕೇಜ್ ಅಡಿಯಲ್ಲಿ ಬಿ.ಜಿ.ಕೃಷ್ಣಮೂರ್ತಿ ಪೊಲೀಸರಿಗೆ ಶರಣಾಗಿದ್ದರು. ಅವರು ಶರಣಾದ ಬಳಿಕ ಸುಮಾರು 8 ಜನ ನಕ್ಸಲರು ಕರ್ನಾಟಕದಲ್ಲಿ ಶರಣಾಗತಿಯಾಗಿದ್ದರು. 7 ಜನ ಸಿಎಂ ಮುಂದೆ ಶರಣಾಗಿದ್ದರೆ, ಓರ್ವ ಚಿಕ್ಕಮಗಳೂರು ಎಸ್ಪಿ ಮುಂದೆ ಶರಣಾಗಿದ್ದನು. ಇಂದು ವಿಚಾರಣೆ ಮುಗಿದ ಬಳಿಕ ಕೇರಳ ಪೊಲೀಸರು ಬಿ.ಜಿ.ಕೃಷ್ಣಮೂರ್ತಿಯನ್ನ ಮತ್ತೆ ತಮ್ಮ ವಶಕ್ಕೆ ಪಡೆದು ಕರೆದೊಯ್ದರು.

ಇತ್ತೀಚಿನ ಸುದ್ದಿ

ಜಾಹೀರಾತು