4:04 PM Friday18 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

Mangaluru | ರಾಜ್ಯ ಸರ್ಕಾರದ ಎಲ್ಲ ಭ್ರಷ್ಟಾಚಾರಕ್ಕೆ ಮುಖ್ಯಮಂತ್ರಿಗಳೇ ಗಾಡ್ ಫಾದರ್: ಶಾಸಕ ವೇದವ್ಯಾಸ ಕಾಮತ್

26/06/2025, 13:08

ಮಂಗಳೂರು(reporterkarnataka.com): ಇಷ್ಟು ದಿನ ಒಳಗೊಳಗೆ ನಡೆಯುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರದ ಕಮಿಷನ್‌ ಅವ್ಯವಹಾರ ಇದೀಗ ಬಹಿರಂಗವಾಗಿಯೇ ನಡೆಯಲಾರಂಭಿಸಿದ್ದು ಸರ್ಕಾರದ ಹುಳುಕುಗಳೆಲ್ಲ ಬೀದಿಗೆ ಬಂದು ಜನಸಾಮಾನ್ಯರೂ ಸಹ ಹೇಸಿಗೆ ಪಟ್ಟುಕೊಳ್ಳುವಷ್ಟರ ಮಟ್ಟಿಗೆ ರಾಜ್ಯದ ಆಡಳಿತ ಹದಗೆಟ್ಟಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಆರೋಪಿಸಿದರು.
ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದಿಂದ ಸ್ವತಃ ಕಾಂಗ್ರೆಸ್ಸಿನ ಹಿರಿಯ ನಾಯಕರುಗಳೇ ಬೇಸತ್ತಿದ್ದು ಇದೀಗ ನೇರವಾಗಿ ಸರ್ಕಾರದ ವಿರುದ್ಧ ವಾಗ್ದಾಳಿ ಆರಂಭಿಸಿದ್ದಾರೆ. ಬಡವರಿಗಾಗಿ ಇರುವ ಹೌಸಿಂಗ್ ಬೋರ್ಡ್‌ ಲಂಚಕೋರರ ಅಡ್ಡೆಯಾಗಿದ್ದು, ಕಮಿಷನ್‌ ಕೊಟ್ಟವರಿಗೆ ಮಾತ್ರ ಮನೆ ನೀಡಲಾಗಿದೆ ಎಂದು ಬಿ.ಆರ್ ಪಾಟೀಲ್ ರವರು ಆರೋಪಿಸಿದರೆ, ಕಂದಾಯ ಸಚಿವ ಕೃಷ್ಣ ಬೈರೇಗೌಡರು, “ಸರ್ಕಾರಿ ಕಚೇರಿಗಳಲ್ಲಿ ಯಾವ ಕೆಲಸಕ್ಕೆ ಎಷ್ಟು ಲಂಚ ಎಂಬುದನ್ನು ಬೋರ್ಡ್ ಹಾಕಿಕೊಂಡು ಬಿಡಿ” ಎಂದು ಹತಾಶೆ ವ್ಯಕ್ತಪಡಿಸಿದ್ದಾರೆ. ನಾನೊಬ್ಬ ಆಡಳಿತ ಪಕ್ಷದ ಶಾಸಕನಾಗಿದ್ದುಕೊಂಡು ಒಂದು ಚರಂಡಿ, ರಸ್ತೆ ನಿರ್ಮಿಸಲು ಸಹ ಸಾಧ್ಯವಾಗುತ್ತಿಲ್ಲ ಎಂದು ಎನ್.‌ ವೈ. ಗೋಪಾಲಕೃಷ್ಣ ಆಕ್ರೋಶ ತೋರಿಸಿದರೆ, ರಾಜ್ಯದಲ್ಲಿ ಆಡಳಿತ ಸಂಪೂರ್ಣ ವಿಫಲವಾಗಿದ್ದು, ಎರಡು ವರ್ಷದಿಂದ ಯಾವುದೇ ಅನುದಾನ ಸಿಗುತ್ತಿಲ್ಲ. ರಾಜೀನಾಮೆ ಕೊಟ್ಟು ಹೋಗುವ ಪರಿಸ್ಥಿತಿ ಇದೆ ಎಂದು ರಾಜು ಕಾಗೆಯವರು ಅಳಲು ತೋಡಿಕೊಂಡಿದ್ದಾರೆ. ಅಲ್ಲದೇ ಈ ಸರ್ಕಾರದ ಭ್ರಷ್ಟಾಚಾರಗಳ ಬಗ್ಗೆ ತನಿಖೆ ನಡೆಯಲಿ, ಅದಕ್ಕೂ ಮೊದಲು ಜಮೀರ್ ಅಹ್ಮದ್ ರಾಜೀನಾಮೆ ಕೊಡಲಿ ಎಂದು ಬೇಳೂರು ಗೋಪಾಲ ಕೃಷ್ಣರವರು ತಮ್ಮದೇ ಸರ್ಕಾರವನ್ನು ಆಗ್ರಹಿಸಿದ್ದು ಇಡೀ ಸರ್ಕಾರದ ಬಂಡವಾಳವೇ ಬಯಲಾಗಿದೆ ಎಂದು ಶಾಸಕರು ಹೇಳಿದರು.
ಸ್ವತಃ ಮುಖ್ಯಮಂತ್ರಿಗಳೇ ಎಲ್ಲಾ ಅಕ್ರಮಗಳಿಗೆ ಗಾಡ್‌ ಫಾದರ್‌ ಆಗಿ ನಿಂತಿರುವಾಗ ಇನ್ನು ಭ್ರಷ್ಟರಿಗೆ ಯಾವ ಭಯ? ವಿಪಕ್ಷದವರಾದ ನಾವು ಹೇಳಿದರೆ ರಾಜಕೀಯ ಎನ್ನುವ ಕಾಂಗ್ರೆಸ್ಸಿಗರು ಈಗೇನು ಹೇಳುತ್ತಾರೆ? ಇನ್ನೂ ಸಹ ಯಾವ ಮುಖ ಇಟ್ಟುಕೊಂಡು ಆಡಳಿತ ನಡೆಸುತ್ತಿದ್ದಾರೆ? ಕಿಂಚಿತ್ತಾದರೂ ಮರ್ಯಾದೆ ಉಳಿದಿದ್ದರೆ ಕೂಡಲೇ ರಾಜ್ಯದ ಜನತೆಯ ಕ್ಷಮೆಯಾಚಿಸಿ ರಾಜೀನಾಮೆ ಕೊಟ್ಟು ತೊಲಗಲಿ ಎಂದು ಶಾಸಕ ಕಾಮತ್ ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು