2:52 AM Thursday14 - August 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ?

ಇತ್ತೀಚಿನ ಸುದ್ದಿ

Mangaluru | ರಾಜ್ಯ ಸರ್ಕಾರದ ಎಲ್ಲ ಭ್ರಷ್ಟಾಚಾರಕ್ಕೆ ಮುಖ್ಯಮಂತ್ರಿಗಳೇ ಗಾಡ್ ಫಾದರ್: ಶಾಸಕ ವೇದವ್ಯಾಸ ಕಾಮತ್

26/06/2025, 13:08

ಮಂಗಳೂರು(reporterkarnataka.com): ಇಷ್ಟು ದಿನ ಒಳಗೊಳಗೆ ನಡೆಯುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರದ ಕಮಿಷನ್‌ ಅವ್ಯವಹಾರ ಇದೀಗ ಬಹಿರಂಗವಾಗಿಯೇ ನಡೆಯಲಾರಂಭಿಸಿದ್ದು ಸರ್ಕಾರದ ಹುಳುಕುಗಳೆಲ್ಲ ಬೀದಿಗೆ ಬಂದು ಜನಸಾಮಾನ್ಯರೂ ಸಹ ಹೇಸಿಗೆ ಪಟ್ಟುಕೊಳ್ಳುವಷ್ಟರ ಮಟ್ಟಿಗೆ ರಾಜ್ಯದ ಆಡಳಿತ ಹದಗೆಟ್ಟಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಆರೋಪಿಸಿದರು.
ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದಿಂದ ಸ್ವತಃ ಕಾಂಗ್ರೆಸ್ಸಿನ ಹಿರಿಯ ನಾಯಕರುಗಳೇ ಬೇಸತ್ತಿದ್ದು ಇದೀಗ ನೇರವಾಗಿ ಸರ್ಕಾರದ ವಿರುದ್ಧ ವಾಗ್ದಾಳಿ ಆರಂಭಿಸಿದ್ದಾರೆ. ಬಡವರಿಗಾಗಿ ಇರುವ ಹೌಸಿಂಗ್ ಬೋರ್ಡ್‌ ಲಂಚಕೋರರ ಅಡ್ಡೆಯಾಗಿದ್ದು, ಕಮಿಷನ್‌ ಕೊಟ್ಟವರಿಗೆ ಮಾತ್ರ ಮನೆ ನೀಡಲಾಗಿದೆ ಎಂದು ಬಿ.ಆರ್ ಪಾಟೀಲ್ ರವರು ಆರೋಪಿಸಿದರೆ, ಕಂದಾಯ ಸಚಿವ ಕೃಷ್ಣ ಬೈರೇಗೌಡರು, “ಸರ್ಕಾರಿ ಕಚೇರಿಗಳಲ್ಲಿ ಯಾವ ಕೆಲಸಕ್ಕೆ ಎಷ್ಟು ಲಂಚ ಎಂಬುದನ್ನು ಬೋರ್ಡ್ ಹಾಕಿಕೊಂಡು ಬಿಡಿ” ಎಂದು ಹತಾಶೆ ವ್ಯಕ್ತಪಡಿಸಿದ್ದಾರೆ. ನಾನೊಬ್ಬ ಆಡಳಿತ ಪಕ್ಷದ ಶಾಸಕನಾಗಿದ್ದುಕೊಂಡು ಒಂದು ಚರಂಡಿ, ರಸ್ತೆ ನಿರ್ಮಿಸಲು ಸಹ ಸಾಧ್ಯವಾಗುತ್ತಿಲ್ಲ ಎಂದು ಎನ್.‌ ವೈ. ಗೋಪಾಲಕೃಷ್ಣ ಆಕ್ರೋಶ ತೋರಿಸಿದರೆ, ರಾಜ್ಯದಲ್ಲಿ ಆಡಳಿತ ಸಂಪೂರ್ಣ ವಿಫಲವಾಗಿದ್ದು, ಎರಡು ವರ್ಷದಿಂದ ಯಾವುದೇ ಅನುದಾನ ಸಿಗುತ್ತಿಲ್ಲ. ರಾಜೀನಾಮೆ ಕೊಟ್ಟು ಹೋಗುವ ಪರಿಸ್ಥಿತಿ ಇದೆ ಎಂದು ರಾಜು ಕಾಗೆಯವರು ಅಳಲು ತೋಡಿಕೊಂಡಿದ್ದಾರೆ. ಅಲ್ಲದೇ ಈ ಸರ್ಕಾರದ ಭ್ರಷ್ಟಾಚಾರಗಳ ಬಗ್ಗೆ ತನಿಖೆ ನಡೆಯಲಿ, ಅದಕ್ಕೂ ಮೊದಲು ಜಮೀರ್ ಅಹ್ಮದ್ ರಾಜೀನಾಮೆ ಕೊಡಲಿ ಎಂದು ಬೇಳೂರು ಗೋಪಾಲ ಕೃಷ್ಣರವರು ತಮ್ಮದೇ ಸರ್ಕಾರವನ್ನು ಆಗ್ರಹಿಸಿದ್ದು ಇಡೀ ಸರ್ಕಾರದ ಬಂಡವಾಳವೇ ಬಯಲಾಗಿದೆ ಎಂದು ಶಾಸಕರು ಹೇಳಿದರು.
ಸ್ವತಃ ಮುಖ್ಯಮಂತ್ರಿಗಳೇ ಎಲ್ಲಾ ಅಕ್ರಮಗಳಿಗೆ ಗಾಡ್‌ ಫಾದರ್‌ ಆಗಿ ನಿಂತಿರುವಾಗ ಇನ್ನು ಭ್ರಷ್ಟರಿಗೆ ಯಾವ ಭಯ? ವಿಪಕ್ಷದವರಾದ ನಾವು ಹೇಳಿದರೆ ರಾಜಕೀಯ ಎನ್ನುವ ಕಾಂಗ್ರೆಸ್ಸಿಗರು ಈಗೇನು ಹೇಳುತ್ತಾರೆ? ಇನ್ನೂ ಸಹ ಯಾವ ಮುಖ ಇಟ್ಟುಕೊಂಡು ಆಡಳಿತ ನಡೆಸುತ್ತಿದ್ದಾರೆ? ಕಿಂಚಿತ್ತಾದರೂ ಮರ್ಯಾದೆ ಉಳಿದಿದ್ದರೆ ಕೂಡಲೇ ರಾಜ್ಯದ ಜನತೆಯ ಕ್ಷಮೆಯಾಚಿಸಿ ರಾಜೀನಾಮೆ ಕೊಟ್ಟು ತೊಲಗಲಿ ಎಂದು ಶಾಸಕ ಕಾಮತ್ ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು