8:42 AM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

Mangaluru | ರಾಜ್ಯ ಸರ್ಕಾರದ ಎಲ್ಲ ಭ್ರಷ್ಟಾಚಾರಕ್ಕೆ ಮುಖ್ಯಮಂತ್ರಿಗಳೇ ಗಾಡ್ ಫಾದರ್: ಶಾಸಕ ವೇದವ್ಯಾಸ ಕಾಮತ್

26/06/2025, 13:08

ಮಂಗಳೂರು(reporterkarnataka.com): ಇಷ್ಟು ದಿನ ಒಳಗೊಳಗೆ ನಡೆಯುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರದ ಕಮಿಷನ್‌ ಅವ್ಯವಹಾರ ಇದೀಗ ಬಹಿರಂಗವಾಗಿಯೇ ನಡೆಯಲಾರಂಭಿಸಿದ್ದು ಸರ್ಕಾರದ ಹುಳುಕುಗಳೆಲ್ಲ ಬೀದಿಗೆ ಬಂದು ಜನಸಾಮಾನ್ಯರೂ ಸಹ ಹೇಸಿಗೆ ಪಟ್ಟುಕೊಳ್ಳುವಷ್ಟರ ಮಟ್ಟಿಗೆ ರಾಜ್ಯದ ಆಡಳಿತ ಹದಗೆಟ್ಟಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಆರೋಪಿಸಿದರು.
ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದಿಂದ ಸ್ವತಃ ಕಾಂಗ್ರೆಸ್ಸಿನ ಹಿರಿಯ ನಾಯಕರುಗಳೇ ಬೇಸತ್ತಿದ್ದು ಇದೀಗ ನೇರವಾಗಿ ಸರ್ಕಾರದ ವಿರುದ್ಧ ವಾಗ್ದಾಳಿ ಆರಂಭಿಸಿದ್ದಾರೆ. ಬಡವರಿಗಾಗಿ ಇರುವ ಹೌಸಿಂಗ್ ಬೋರ್ಡ್‌ ಲಂಚಕೋರರ ಅಡ್ಡೆಯಾಗಿದ್ದು, ಕಮಿಷನ್‌ ಕೊಟ್ಟವರಿಗೆ ಮಾತ್ರ ಮನೆ ನೀಡಲಾಗಿದೆ ಎಂದು ಬಿ.ಆರ್ ಪಾಟೀಲ್ ರವರು ಆರೋಪಿಸಿದರೆ, ಕಂದಾಯ ಸಚಿವ ಕೃಷ್ಣ ಬೈರೇಗೌಡರು, “ಸರ್ಕಾರಿ ಕಚೇರಿಗಳಲ್ಲಿ ಯಾವ ಕೆಲಸಕ್ಕೆ ಎಷ್ಟು ಲಂಚ ಎಂಬುದನ್ನು ಬೋರ್ಡ್ ಹಾಕಿಕೊಂಡು ಬಿಡಿ” ಎಂದು ಹತಾಶೆ ವ್ಯಕ್ತಪಡಿಸಿದ್ದಾರೆ. ನಾನೊಬ್ಬ ಆಡಳಿತ ಪಕ್ಷದ ಶಾಸಕನಾಗಿದ್ದುಕೊಂಡು ಒಂದು ಚರಂಡಿ, ರಸ್ತೆ ನಿರ್ಮಿಸಲು ಸಹ ಸಾಧ್ಯವಾಗುತ್ತಿಲ್ಲ ಎಂದು ಎನ್.‌ ವೈ. ಗೋಪಾಲಕೃಷ್ಣ ಆಕ್ರೋಶ ತೋರಿಸಿದರೆ, ರಾಜ್ಯದಲ್ಲಿ ಆಡಳಿತ ಸಂಪೂರ್ಣ ವಿಫಲವಾಗಿದ್ದು, ಎರಡು ವರ್ಷದಿಂದ ಯಾವುದೇ ಅನುದಾನ ಸಿಗುತ್ತಿಲ್ಲ. ರಾಜೀನಾಮೆ ಕೊಟ್ಟು ಹೋಗುವ ಪರಿಸ್ಥಿತಿ ಇದೆ ಎಂದು ರಾಜು ಕಾಗೆಯವರು ಅಳಲು ತೋಡಿಕೊಂಡಿದ್ದಾರೆ. ಅಲ್ಲದೇ ಈ ಸರ್ಕಾರದ ಭ್ರಷ್ಟಾಚಾರಗಳ ಬಗ್ಗೆ ತನಿಖೆ ನಡೆಯಲಿ, ಅದಕ್ಕೂ ಮೊದಲು ಜಮೀರ್ ಅಹ್ಮದ್ ರಾಜೀನಾಮೆ ಕೊಡಲಿ ಎಂದು ಬೇಳೂರು ಗೋಪಾಲ ಕೃಷ್ಣರವರು ತಮ್ಮದೇ ಸರ್ಕಾರವನ್ನು ಆಗ್ರಹಿಸಿದ್ದು ಇಡೀ ಸರ್ಕಾರದ ಬಂಡವಾಳವೇ ಬಯಲಾಗಿದೆ ಎಂದು ಶಾಸಕರು ಹೇಳಿದರು.
ಸ್ವತಃ ಮುಖ್ಯಮಂತ್ರಿಗಳೇ ಎಲ್ಲಾ ಅಕ್ರಮಗಳಿಗೆ ಗಾಡ್‌ ಫಾದರ್‌ ಆಗಿ ನಿಂತಿರುವಾಗ ಇನ್ನು ಭ್ರಷ್ಟರಿಗೆ ಯಾವ ಭಯ? ವಿಪಕ್ಷದವರಾದ ನಾವು ಹೇಳಿದರೆ ರಾಜಕೀಯ ಎನ್ನುವ ಕಾಂಗ್ರೆಸ್ಸಿಗರು ಈಗೇನು ಹೇಳುತ್ತಾರೆ? ಇನ್ನೂ ಸಹ ಯಾವ ಮುಖ ಇಟ್ಟುಕೊಂಡು ಆಡಳಿತ ನಡೆಸುತ್ತಿದ್ದಾರೆ? ಕಿಂಚಿತ್ತಾದರೂ ಮರ್ಯಾದೆ ಉಳಿದಿದ್ದರೆ ಕೂಡಲೇ ರಾಜ್ಯದ ಜನತೆಯ ಕ್ಷಮೆಯಾಚಿಸಿ ರಾಜೀನಾಮೆ ಕೊಟ್ಟು ತೊಲಗಲಿ ಎಂದು ಶಾಸಕ ಕಾಮತ್ ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು