10:08 PM Friday27 - June 2025
ಬ್ರೇಕಿಂಗ್ ನ್ಯೂಸ್
ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ: ಸಿಎಂ ಸಿದ್ದರಾಮಯ್ಯ ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಇಂಧನ ಸಚಿವ… ಮೂಕ ಪ್ರಾಣಿಗಳ ಮೇಲೆ ಕ್ರೌರ್ಯ ಕಂಡು ಬಂದರೆ ಕಠಿಣ ಕ್ರಮ; ಪೆಟ್ ಶಾಪ್‍ಗಳ… BNG | ಪ್ರತಿ ಜಿಲ್ಲೆಗೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್… ಭ್ರಷ್ಟಾಚಾರದಿಂದ ರಾಜ್ಯ ಸರ್ಕಾರ ದಿಕ್ಕು ದೆಸೆ ಇಲ್ಲದೆ ನಡೆದಿದೆ: ಬಸವರಾಜ ಬೊಮ್ಮಾಯಿ ಬೆಂಗಳೂರಿಗೆ ಅತ್ಯಾಧುನಿಕ ಭೂಗತ ರಸ್ತೆ ಜಾಲ, ಪೆರಿಫೆರಲ್ ರಿಂಗ್ ರಸ್ತೆ: ಹೆದ್ದಾರಿ ಸಚಿವ… ಎನ್.ಆರ್.ಪುರ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಾರು ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು;… Chikkamagaluru | ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್ ಗೆ ಡಿಕ್ಕಿ: ಸವಾರ… ಬಾಣಸವಾಡಿ, ಕಸ್ತೂರಿನಗರ ಅರಣ್ಯ ಪ್ರದೇಶಕ್ಕೆ ಸಚಿವ ಖಂಡ್ರೆ ಭೇಟಿ: ಬೆಂಗಳೂರಿನಲ್ಲಿ ಶ್ವಾಸತಾಣಗಳ ಸಂರಕ್ಷಣೆ… HDK | ವಸತಿ ಇಲಾಖೆ ಅಕ್ರಮ ಮರೆಮಾಚಲು ಎಚ್.ಕೆ. ಪಾಟೀಲ್ ಪತ್ರ ತೇಲಿ…

ಇತ್ತೀಚಿನ ಸುದ್ದಿ

ಸಾಲದ ಒನ್ ಟೈಮ್ ಸೆಟಲ್ ಮೆಂಟ್: ರೈತರ ಜತೆ ಸೌಜನ್ಯದಿಂದ ವರ್ತಿಸುವಂತೆ ಬ್ಯಾಂಕುಗಳಿಗೆ ಕೇಂದ್ರ ಕುಮಾರಸ್ವಾಮಿ ಸೂಚನೆ

27/06/2025, 18:07

*ಮಂಡ್ಯದಲ್ಲಿ ಜಿಲ್ಲಾ ಬ್ಯಾಂಕರುಗಳ ಸಭೆ*

*ನರೇಂದ್ರ ಮೋದಿ ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ಮುಟ್ಟಿಸುವಲ್ಲಿ ಬ್ಯಾಂಕ್ ಗಳ ಪಾತ್ರಕ್ಕೆ ಮೆಚ್ಚುಗೆ*


ಮಂಡ್ಯ(reporterkarnataka.com):
ರೈತರು ತಾವು ಪಡೆದ ಸಾಲವನ್ನು ಒಮ್ಮೆಲೇ ಪಾವತಿ (ಒನ್ ಟೈಮ್ ಸೆಟಲ್ ಮೆಂಟ್) ಮಾಡುವ ಸಂದರ್ಭದಲ್ಲಿ ಬ್ಯಾಂಕುಗಳು ಸೂಕ್ತ ಮಾರ್ಗದರ್ಶನ ಮಾಡಬೇಕು ಹಾಗೂ ಪುನಾ ಸಾಲ ನೀಡಬೇಕು ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಬ್ಯಾಂಕುಗಳಿಗೆ ಸೂಚಿಸಿದರು.
ಮಂಡ್ಯದಲ್ಲಿ ನಡೆದ ಜಿಲ್ಲಾ ಬ್ಯಾಂಕರುಗಳ ಸಭೆಯಲ್ಲಿ ಆನ್ಲೈನ್ ವೇದಿಕೆ ಮೂಲಕ ಭಾಗಿಯಾಗಿ ಮಾತನಾಡಿದ ಸಚಿವರು; ನಾನಾ ಉದ್ದೇಶಗಳಿಗೆ ರೈತರು ಪಡೆಯುವ ಸಾಲಗಳಿಗೆ ಬಡ್ಡಿ ಜಾಸ್ತಿ ಎನ್ನುವ ದೂರುಗಳು ಬರುತ್ತಿವೆ. ಈ ಹಿನ್ನಲೆಯಲ್ಲಿ ಅವರು ಏಕಕಾಲಕ್ಕೆ ತಮ್ಮ ಸಾಲವನ್ನು ಪಾವತಿ ಮಾಡಲು ಮುಂದಾಗುತ್ತಿದ್ದಾರೆ. ಅಂತಹ ರೈತರಿಗೆ ಬ್ಯಾಂಕುಗಳು ಸಹಕರಿಸಬೇಕು ಎಂದು ಹೇಳಿದರು.
ಕೃಷಿಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಅವರ ಸಾಲದ ಬಡ್ಡಿ ಹೆಚ್ಚಾಗಿದೆ ಎಂದು ದಿನವೂ ದೂರುಗಳು ಬರುತ್ತಿವೆ. ಅದಕ್ಕಾಗಿಯೇ ಅವರು ಒಂದೇ ಬಾರಿಗೆ ಹಣ ಪಾವತಿ ಮಾಡಲು ಶ್ರಮಿಸುತ್ತಿದ್ದಾರೆ. ಅಂತಹ ಸಂದರ್ಭದಲ್ಲಿ ಬ್ಯಾಂಕುಗಳು ಸೌಜನ್ಯದಿಂದ ವರ್ತಿಸಬೇಕು. ರೈತರ ವಿಷಯದಲ್ಲಿ ಯಾವುದೇ ಕಾರಣಕ್ಕೂ ಕಠಿಣವಾಗಿ ನಡೆದುಕೊಳ್ಳಬೇಡಿ ಎಂದು ಕೇಂದ್ರ ಸಚಿವರು ಸ್ಪಷ್ಟ ಸೂಚನೆ ಕೊಟ್ಟರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅನೇಕ ಯೋಜನೆಗಳ ಮೂಲಕ ವಿಶೇಷವಾಗಿ ಹೆಣ್ಣು ಮಕ್ಕಳಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸ ಆಗುತ್ತಿದೆ. ಅವರ ಸಬಲೀಕರಣಕ್ಕೆ ಕೇಂದ್ರ ಸರಕಾರ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಮೋದಿ ಅವರು ಜಾರಿಗೆ ತಂದಿರುವ ಯೋಜನೆಗಳ ಸೌಲಭ್ಯಗಳನ್ನು ಜಾರಿಗೆ ತಲುಪಿಸುವ ಕೆಲಸವನ್ನು ಬ್ಯಾಂಕುಗಳು ಉತ್ತಮವಾಗಿ ಮಾಡುತ್ತಿವೆ ಎಂದು ಕೇಂದ್ರ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
ಯುವಕರು, ಮಹಿಳೆಯರು, ಕೃಷಿಕರು ಕೇಂದ್ರದ ಯೋಜನೆಗಳ ಸೌಲಭ್ಯ ಪಡೆಯಲು ಬ್ಯಾಂಕುಗಳು ಸೇತುವೆಯಾಗಿವೆ. ಇದು ಮತ್ತಷ್ಟು ವಿಸ್ತೃತವಾಗಿ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸಚಿವರು ಸಲಹೆ ನೀಡಿದರು.
ಇದೇ ವೇಳೆ ವಾರ್ಷಿಕ ಆರ್ಥಿಕ ಕ್ರೆಡೀಡ್ ರಿಪೋರ್ಟ್ ಬಿಡುಗಡೆ ಮಾಡಲಾಯಿತು. ಜಿಲ್ಲಾ ಪಂಚಾಯಿತಿ ಸಿಇಒ ನಂದಿನಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ಜಿಲ್ಲೆಯ ಬ್ಯಾಂಕ್ ಗಳ ಮುಖ್ಯಸ್ಥರು ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು