5:06 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯಕ್ಕೆ ಭೂಮಿ ಮಂಜೂರು; ಕಂದಾಯ ಸಚಿವರೊಂದಿಗೆ ಸಮಾಲೋಚನಾ ಸಭೆ

27/06/2025, 21:41

ಬೆಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದವರಿಗೆ ಕೃಷಿಯೋಗ್ಯ ಭೂಮಿಯನ್ನು ಮಂಜೂರು ಮಾಡುವ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರೊಂದಿಗೆ ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಕೊರಗ ಸಮುದಾಯದ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಲಾಯಿತು.


ಇಂದು ಜಾಗೃತ ಕರ್ನಾಟಕದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದ ಪ್ರತಿನಿಧಿಗಳು ಮತ್ತು ತುಮಕೂರಿನ ಅಲೆಮಾರಿ ಸಮುದಾಯದ ಪ್ರತಿನಿಧಿಗಳ ನಿಯೋಗದೊಂದಿಗೆ ಸಚಿವರಾದ ಕೃಷ್ಣಬೈರೇಗೌಡರೊಂದಿಗೆ ಸಭೆ ಏರ್ಪಡಿಸಲಾಗಿತ್ತು.
ಕೊರಗ ಸಮುದಾಯದವರಿಗೆ ನೀಡಲೆಂದು ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾಡಳಿತವು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಗುರುತಿಸಿರುವ ಕೃಷಿ ಯೋಗ್ಯ ಭೂಮಿಯನ್ನು ಶೀಘ್ರವಾಗಿ ಮಂಜೂರು ಮಾಡುವಂತೆ ಕೊರಗ ಸಂಘದ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರ ಮುಂದೆ ತಮ್ಮ ಅಹವಾಲನ್ನು ಸಲ್ಲಿಸಿದರು.
ಉಡುಪಿ ಜಿಲ್ಲೆಯಲ್ಲಿ ಕೊರಗ ಸಮುದಾಯದವರಿಗೆ ಕೃಷಿ ಭೂಮಿಯ ಹಂಚಿಕೆ ಉತ್ತಮ ರೀತಿಯಲ್ಲಿ ನಡೆದಿದ್ದು, ಅದೇ ಮಾದರಿಯನ್ನು ದಕ್ಷಿಣ ಕನ್ನಡದಲ್ಲೂ ಅನುಸರಿಸುವಂತೆ ಕೊರಗ ಸಂಘದ ಪ್ರತಿನಿಧಿಗಳು ಸಚಿವರಲ್ಲಿ ಮನವಿ ಮಾಡಿದರು.
ಸಮುದಾಯದ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ, ಈ ಹಿಂದೆ ಕೊರಗ ಸಮುದಾಯಕ್ಕೆ ಕೃಷಿ ಭೂಮಿ ಮಂಜೂರು ಮಾಡಿದ ಪ್ರಕ್ರಿಯೆಗಳನ್ನು ಜಿಲ್ಲಾಡಳಿತದೊಂದಿಗೆ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚಲೋಚನೆ ನಡೆಸಿ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಅತೀ ಸೂಕ್ಷ್ಮ ಹಾಗೂ ಅತೀ ಹಿಂದುಳಿದಿರುವ ಪರಿಶಿಷ್ಟ ಪಂಗಡದ ಸಮುದಾಯವಾಗಿರುವ ಕೊರಗರು ಗುಂಪು ಗುಂಪಾಗಿ ವಾಸಿಸುವ ಹಿನ್ನೆಲೆಯವರಾಗಿದ್ದು, ಕನಿಷ್ಠ 10 ರಿಂದ 15 ಕುಟುಂಬಗಳಿಗೆ ಒಟ್ಟೊಟ್ಟಿಗೆ ಯಾಗಿ ಭೂಮಿ ಮಂಜೂರು ಮಾಡಿದರೆ ತಮ್ಮ ಹಿಂದಿನ ಸಮುದಾಯ ಪರಿಕಲ್ಪನೆಯಂತೆ ಕೊರಗರು ಸ್ವತಂತ್ರವಾಗಿ ಬದುಕಿ ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ದ.ಕ. ಜಿಲ್ಲಾ ಕೊರಗ ಸಂಘದ ಅಧ್ಯಕ್ಷ ಸುಂದರ ಬೆಳವಾಯಿ ಅವರು ಸಭೆಯಲ್ಲಿ ಮನವಿ ಮಾಡಿದರು.
ಕಾನೂನು ವ್ಯಾಪ್ತಿಯಲ್ಲಿ ಸಾಧ್ಯವಿರುವ ಎಲ್ಲ ಪ್ರಯತ್ನವನ್ನು ಪ್ರಾಮಾಣಿಕವಾಗಿ ನಡೆಸುವುದಾಗಿ ಸಚಿವ ಕೃಷ್ಣ ಬೈರೇಗೌಡ ನಿಯೋಗಕ್ಕೆ ಭರವಸೆ ನೀಡಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಕೊರಗ ಸಮುದಾಯದ ಹಿನ್ನೆಲೆ ಹಾಗೂ ಪ್ರಸ್ತುತ ಕೊರಗ ಸಮುದಾಯದ ಸ್ಥಿತಿಗತಿಯ ಬಗ್ಗೆ ಸಭೆಗೆ ವಿವರ ನೀಡಿದರು.
ಸಮಾಲೋಚನಾ ಸಭೆಯಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು. ಎಚ್, ದ.ಕ ಜಿಲ್ಲಾ ಕೊರಗರ ಸಂಘದ ಅಧ್ಯಕ್ಷ ಸುಂದರ ಬೆಳುವಾಯಿ, ಉಪಾಧ್ಯಕ್ಷ ಕೊಗ್ಗ ರಮೇಶ್, ಪ್ರಧಾನ ಕಾರ್ಯದರ್ಶಿ ಶಶಿಕಲಾ, ಪದಾಧಿಕಾರಿಗಳಾದ ಸಂಜೀವ ಕೊಡಿಕಲ್, ಕಮಲ ಮೊಂಟೆಪದವು, ಜಾಗೃತ ಕರ್ನಾಟಕದ ರಾಜ್ಯ ಸಮಿತಿ ಸದಸ್ಯರಾದ ಬಿ.ಸಿ ಬಸವರಾಜ್, ಲಕ್ಷ್ಮಣ್ ಕುಂದರ್, ಡಾ.ವಾಸು ಎಚ್.ವಿ, ದೊಡ್ಡಿಪಾಳ್ಯ ನರಸಿಂಹಮೂರ್ತಿ ಸೇರಿ ಇತರರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು