9:52 PM Friday18 - September 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ

ಇತ್ತೀಚಿನ ಸುದ್ದಿ

ಮಂಗಳೂರು: ಮಳೆ ಹಾನಿ ಪ್ರದೇಶಗಳಿಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ; ಪರಿಶೀಲನೆ

27/06/2025, 21:48

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಇತ್ತೀಚಿಗೆ ಸುರಿದ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ತಲೆದೋರಿದ್ದ ಸ್ಥಳಗಳಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿದರು.


30ನೇ ವಾರ್ಡ್ ಕೊಡಿಯಾಲ್ ಬೈಲ್ ಪೂರ್ವ ರಸ್ತೆ, ಬಲ್ಲಾಳ್ ಬಾಗ್ ಬ್ರಿಡ್ಜ್, ವೆಟ್ ವೆಲ್ ಇರುವ ಪ್ರದೇಶ, ಮೊದಲಾದ ಸ್ಥಳಗಳಿಗೆ ಭೇಟಿ ನೀಡಿದ ಶಾಸಕರು, ಅಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿಗೆ ಕಾರಣ, ತುರ್ತಾಗಿ ನಡೆಯಬೇಕಿರುವ ಕಾರ್ಯ, ಭವಿಷ್ಯದಲ್ಲಿ ಪ್ರವಾಹ ಮರುಕಳಿಸದಂತೆ ಪರಿಹಾರ ಕ್ರಮ ಇತ್ಯಾದಿ ವಿಷಯಗಳ ಬಗ್ಗೆ ಸ್ಥಳೀಯರ ಅಭಿಪ್ರಾಯದ ಮೇರೆಗೆ ಕೂಡಲೇ ಕ್ರಮಕೈಗೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸುಮಾರು 75 ಕೋಟಿ ವಿಶೇಷ ಅನುದಾನದಲ್ಲಿ ಕ್ಷೇತ್ರದ ಹಲವು ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಾಣ ಮಾಡಿದ್ದು ಬಿಟ್ಟರೆ, ಪ್ರಸ್ತುತ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಇಲ್ಲಿನ ಸಣ್ಣಪುಟ್ಟ ತುರ್ತುಕ್ರಮಕ್ಕೂ ಬಿಡಿಗಾಸು ದೊರೆಯುತ್ತಿಲ್ಲ. ಇದರಿಂದಾಗಿ ವಿಶೇಷವಾಗಿ ಮಳೆಗಾಲದ ಸಮಯದಲ್ಲಿ ಸ್ಥಳೀಯ ಜನತೆ ತೀವ್ರ ತೊಂದರೆ ಅನುಭವಿಸುತ್ತಿದ್ದು ಈ ಎಲ್ಲದರ ಬಗ್ಗೆ ಮುಂಬರುವ ಅಧಿವೇಶನದಲ್ಲಿ ಪ್ರಸ್ತಾಪಿಸಿ ಶಾಶ್ವತ ಪರಿಹಾರಕ್ಕೆ ಸರ್ಕಾರದ ಮೇಲೆ ಒತ್ತಡ ಹೇರುತ್ತೇನೆಂದು ಶಾಸಕರು ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪ್ರಮುಖರಾದ ವಿವೇಕ್, ಪ್ರಶಾಂತ್ ಆಳ್ವ, ಸೇರಿದಂತೆ ಅನೇಕ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ವಾರ್ಡ್ 29 ರಲ್ಲಿ ಉಂಟಾಗಿದ್ದ ಪ್ರವಾಹ ಪೀಡಿತ ಪ್ರದೇಶಕ್ಕೂ ಶಾಸಕ ವೇದವ್ಯಾಸ ಕಾಮತ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಪತ್ತುಮುಡಿ ಜನತಾ ಡಿಲಕ್ಸ್ ಬಳಿ ಉಂಟಾಗಿದ್ದ ನೆರೆಗೆ ಕಾರಣ, ಮುಂದೆ ಈ ಭಾಗದಲ್ಲಿ ಅಂತಹ ಪರಿಸ್ಥಿತಿ ಮರುಕಳಿಸದಂತೆ ಅಗತ್ಯ ಕ್ರಮ ಮೊದಲಾದ ವಿಷಯಗಳ ಬಗ್ಗೆ ಸ್ಥಳೀಯರೊಂದಿಗೆ ಚರ್ಚಿಸಿ, ಮುಖ್ಯವಾಗಿ ರಾಜಕಾಲುವೆಗಳಿಗೆ ತಡೆಗೋಡೆ ಹಾಗೂ ಈಗಾಗಲೇ ಇರುವ ತಡೆಗೋಡೆಗಳ ಎತ್ತರ ಹೆಚ್ಚಿಸುವ ಬಗ್ಗೆ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ನಿಕಟ ಪೂರ್ವ ಪಾಲಿಕೆ ಸದಸ್ಯೆ ಲೀಲಾವತಿ ಪ್ರಕಾಶ್, ಬಿಜೆಪಿ ಪ್ರಮುಖರಾದ ಜಯರಾಜ್ ಕೊಟ್ಟಾರಿ, ರಿತೇಶ್ ಬಲ್ಲಾಲ್‌ಬಾಗ್, ಪ್ರಸಾದ್ ಆಚಾರಿ, ನಾರಾಯಣ ಭಂಡಾರಿ, ವೆಂಕಟೇಶ್, ನಟರಾಜ್, ರಜನಿ ಶೆಟ್ಟಿ, ವಿಠ್ಠಲ್, ಪ್ರಕಾಶ್ ಕೊಡಿಯಾಲ್‌ಬೈಲ್ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು