7:49 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ: ನದಿ ಪಾತ್ರದ ಜನರು ಎಚ್ಚರ ವಹಿಸಲು ಸೂಚನೆ

29/06/2025, 12:42

ಶಿವು ರಾಠೋಡ ಹುಣಸಗಿ ಯಾದಗಿರಿ
info.reporterkarnataka@gmail.com

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ ಇರೋದರಿಂದ ಸುತ್ತ ಮುತ್ತಲ ನಿವಾಸಿಗಳು ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ.
ಅಣೆಕಟ್ಟಿನ ಪ್ರಸ್ತುತ ನೀರಿನ ಸಂಗ್ರಹವು 80.27% ಇದೆ .ಕೃಷ್ಣಾ ನದಿಗೆ ಹೊರಹರಿವು 84,445 ಕ್ಯೂಸೆಕ್ ಇದೆ. ಅಣೆಕಟ್ಟಿನ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ ಅಣೆಕಟ್ಟೆಯ ಹೊರಹರಿವು ಪರಿಗಣಿಸಲಾಗಿ ನಾರಾಯಣಪುರ ಅಣೆಕಟ್ಟೆ ಗೆ ಸುಮಾರು 1,10,000 ಕ್ಯೂಸೆಕ್ ಒಳಹರಿವು ಬರುವ ಸಾಧ್ಯತೆ ಇದ್ದು ,ಮದ್ಯಾಹ್ನ. 3.00 ಗಂಟೆ ನಂತರ , ಪ್ರಸ್ತುತ ಇರುವ ಹೊರಹರಿವನ್ನು 84,445 ಕ್ಯೂಸೆಕ್ ರಿಂದ 1,10,000 ಕ್ಯೂಸೆಕ್ ಗೆ ಹಂತ ಹಂತವಾಗಿ ಹೆಚ್ಚಿಸಲಾಗುವುದು & ಒಳಹರಿವಿನ ಅನುಸಾರ ನದಿಗೆ ಬಿಡುತ್ತಿರುವ ಹೊರಹರಿವನ್ನು ಕ್ರಮೇಣ ಹೆಚ್ಚಿಸಲಾಗುವುದು/ಕಡಿಮೆ ಮಾಡಲಾಗುವುದು.
ಆದರಿಂದ ನಾರಾಯಣಪುರ ಅಣೆಕಟ್ಟಿನಕೆಳಭಾಗದಲ್ಲಿರುವ ನದಿ ಪಾತ್ರದ ಜನರು ಹಾಗೂ ಜಾನುವಾರು ಜಾಗ್ರತೆಯಿಂದ ಇರಲು ಎಚ್ಚರಿಕೆಯಿಂದಿರಲು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು