1:45 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್ ಬಂಧನ

29/06/2025, 17:58

ಶಿವಮೊಗ್ಗ(reporterkarnataka.com):ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸಹಪ್ರಾಧ್ಯಾಪಕ ಹಾಗೂ ಶಸ್ತ್ರಚಿಕಿತ್ಸೆಕರಾಗಿ ಕೆಲಸ ನಿರ್ವಹಿಸುತ್ತಿದ್ದ ಡಾ.ಅಶ್ವಿನ್ ಹೆಬ್ಬಾರ್ ಅವರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಇಂಟರ್ನ್ಶಿಪ್ ಹಾಗೂ ಎಮ್ ಎಸ್ ಓದುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ಹಾಗೂ ಜಾತಿ ನಿಂದನ ಪ್ರಕರಣದಲ್ಲಿ ಅಶ್ವಿನ್ ಹೆಬ್ಬಾರ್ ಆರೋಪಿಯಾಗಿದ್ದರು. ಈ ಪ್ರಕರಣ ಕಾಲೇಜಿನಲ್ಲಿ ಸಂಚಲನ ಮೂಡಿಸಿತ್ತು.ಪ್ರಕರಣ ನಡೆದ ನಂತರ ಶಿವಮೊಗ್ಗದ ಮಹಿಳಾ ಠಾಣೆಯಲ್ಲಿ ಜೂ.20 ರಂದು ದೂರು ದಾಖಲಾಗಿತ್ತು. ದಾಖಲಾಗಿ ಈಗ ಏಳು ದಿನ ಕಳೆದಿತ್ತು. ದೂರು ದಾಖಲಾಗಿ ನಾಲ್ಕು ದಿನ ಕಳೆದರೂ ಆರೋಪಿ ಬಂಧನವಾಗಿಲ್ಲ ಎಂದು ಕಾಲೇಜು ವಿದ್ಯಾರ್ಥಿಗಳು ಎರಡು ದಿನಗಳ ಕಾಲ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದ್ದರು.ಪ್ರತಿಭಟನೆಗೂ ಮುನ್ನ ಸಂಘ ಸಂಸ್ಥೆಗಳು ಆರೋಪಿ ಬಂಧನಕ್ಕೆ ಗಡವು ಸಹ ನೀಡಿದ್ದರು. ಡಿವೈಎಸ್ಪಿ ಬಾಬು ಅಂಜನಪ್ಪ ಅವರ ನೇತೃತ್ವದ ತಂಡ ವೈದ್ಯರನ್ನ ಬಂಧಿಸಲಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು