11:47 PM Sunday29 - June 2025
ಬ್ರೇಕಿಂಗ್ ನ್ಯೂಸ್
Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:… ಸಿದ್ದರಾಮಯ್ಯರಿಗೆ ಅಂಬೇಡ್ಕರ್ ಸಂವಿಧಾನ ಬೇಕಾ, ಇಂದಿರಾ ಗಾಂಧಿ ಸಂವಿಧಾನ ಬೇಕಾ: ಬಸವರಾಜ ಬೊಮ್ಮಾಯಿ… Mandya | ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಹ ಕೆಆರ್ ಎಸ್… ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸೆ. 22ರಂದು ದಸರಾಕ್ಕೆ ಚಾಲನೆ:… ಹುಲಿಗಳ ಸಾವು ಸಂಪೂರ್ಣ ತನಿಖೆಯಾಗಲಿ; ಕಾಂಗ್ರೆಸ್ ಕಚ್ಚಾಟದಲ್ಲಿ ರಾಜ್ಯ ಅಭಿವೃದ್ಧಿ ಶೂನ್ಯ: ಬಸವರಾಜ… ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ: ಸಿಎಂ ಸಿದ್ದರಾಮಯ್ಯ ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಇಂಧನ ಸಚಿವ… ಮೂಕ ಪ್ರಾಣಿಗಳ ಮೇಲೆ ಕ್ರೌರ್ಯ ಕಂಡು ಬಂದರೆ ಕಠಿಣ ಕ್ರಮ; ಪೆಟ್ ಶಾಪ್‍ಗಳ… BNG | ಪ್ರತಿ ಜಿಲ್ಲೆಗೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಾಂಪಿಯನ್ ಗಳಾಗಿ ಬನ್ನಿ: ಕರ್ನಾಟಕ‌ ಪೊಲೀಸರಿಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಕಿವಿಮಾತು

29/06/2025, 23:34

ಬೆಂಗಳೂರು (reporterkarnataka.com): ರಾಷ್ಟ್ರೀಯ ಮಟ್ಟದ ಪೊಲೀಸ್ ಕ್ರೀಡಾಕೂಟದಲ್ಲಿ ಕರ್ನಾಟಕ‌ ಪೊಲೀಸ್ ಚಾಂಪಿಯನ್ ಆಗಿ ಹೊರ ಹೊಮ್ಮಬೇಕು. ಈ ನಿಟ್ಟಿನಲ್ಲಿ ಎಲ್ಲ ರೀತಿಯ ಉತ್ತೇಜನವನ್ನು ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು.
ಅವರು ಇಂದು ಕೋಮಂಗಲದ ಕೆಎಸ್‌ಆರ್‌ಪಿ ಕ್ರೀಡಾಂಗಣದಲ್ಲಿ ನಡೆದ ‘ಕರ್ನಾಟಕ ರಾಜ್ಯ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2024 ಸಮಾರೋಪ ಸಮಾರಂಭ’ದಲ್ಲಿ ಭಾಗವಹಿಸಿ, ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.


ಕ್ರೀಡೆಯಲ್ಲಿ ಭಾಗವಹಿಸುವವರಿಗೆ ತಯಾರಿ ಬಹಳ‌ ಮುಖ್ಯವಾಗುತ್ತದೆ ಅದಕ್ಕಾಗಿ ವಿಶೇಷ ತರಬೇತಿಯನ್ನು ನೀಡುವಂತೆ ಇಲಾಖೆಯ ಮುಖ್ಯಸ್ಥರಿಗೆ ಸೂಚಿಸುತ್ತೇನೆ. ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ ಗಳಾಗಬೇಕು. ತನಿಖೆಯಲ್ಲಿ ಕರ್ನಾಟಕ ಪೊಲೀಸ್ ಬೆಸ್ಟ್‌ ಪೊಲೀಸ್ ಎಂದು ಹೇಳುತ್ತಾರೆ. ಕ್ರೀಡೆಯಲ್ಲಿಯೂ ಕೂಡ ಕರ್ನಾಟಕ ಪೊಲೀಸ್ ಬೆಸ್ಟ್ ಎಂದು ಹೇಳುವಂತಾಗಬೇಕು ಎಂದರು.
ಮುಖ್ಯಮಂತ್ರಿಯವರು ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಶೇ. 3ರಷ್ಟು ಮೀಸಲಾತಿಯನ್ನು ಕಲ್ಪಿಸಿ ಕ್ರೀಡಾಪಟುಗಳಿಗೆ ಉತ್ತೇಜನ ನೀಡಲಾಗುತ್ತಿದೆ. ಬೇರೆ ಯಾವ ರಾಜ್ಯಗಳು ಸಹ ಇಷ್ಟೊಂದು ಮೀಸಲಾತಿಯನ್ನು ನೀಡಿಲ್ಲ‌‌. ಕೆಎಸ್‌ಆರ್‌ಪಿ ಕ್ರೀಡಾಂಗಣ ನವೀಕರಣಗೊಳಿಸಲು 3 ಕೋಟಿ ರೂ‌. ಅನುದಾನ ನೀಡಲಾಗಿದೆ. ಮುಂದಿನ ವರ್ಷದ ಕ್ರೀಡಾಕೂಟದ ವೇಳೆಗೆ ಸಿಂಥೆಟಿಕ್ ಟ್ರ್ಯಾಕ್ ಸಿದ್ಧವಾಗಲಿದೆ ಎಂದು ಹೇಳಿದರು.
ಪೊಲೀಸ್ ಇಲಾಖೆಗೆ ಕ್ರೀಡಾ ಚಟುವಟಿಕೆಗಳು ಬಹಳ‌ ಮುಖ್ಯ. ಆತ್ಮಸ್ಥೈರ್ಯ, ದೈಹಿಕ ಸದೃಢತೆಯನ್ನು ಹೆಚ್ಚಿಸುತ್ತದೆ. ನಮ್ಮ ಜೀವನದಲ್ಲಿ ಸೋಲು-ಗೆಲುವುಗಳನ್ನು ಸರಿಸಮಾನವಾಗಿ ತೆಗೆದುಕೊಳ್ಳಲು ಕ್ರೀಡೆ ಸ್ಪೂರ್ತಿಯಾಗುತ್ತದೆ. ಕ್ರೀಡಾಕೂಟ ನಿಮ್ಮೆಲ್ಲರ ಆತ್ಮಸ್ಥೈರ್ಯ ಹೆಚ್ಚಿಸಲಿ ಎಂದು ಪೊಲೀಸ್ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಎಂ.ಎ. ಸಲೀಂ ಅವರು ರಾಜ್ಯದಲ್ಲಿ ಸಮರ್ಥವಾದ ಪೊಲೀಸ್ ಪಡೆ ಕಟ್ಟಬೇಕು ಎಂಬ ಇಚ್ಛೆ ಹೊಂದಿದ್ದಾರೆ. ಕಳೆದ ಎರಡು ದಿನದಿಂದ‌ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ‌ ಸಮಾವೇಶದಲ್ಲಿ ಪೊಲೀಸ್ ದೂರದೃಷ್ಟಿಯ ಬಗ್ಗೆ ಚರ್ಚಿಸಲಾಯಿತು. ಎಲ್ಲ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು. ಪೊಲೀಸ್ ಇಲಾಖೆ ಜನಸಮುದಾಯದ ಜೊತೆ ಹೇಗೆ ಕೆಲಸ ಮಾಡಬೇಕು ಎಂಬುದು ಸೇರಿದಂತೆ ಹಲವು ಮಹತ್ವದ ವಿಚಾರಗಳು ಕುರಿತು ಚರ್ಚಿಸಲಾಗಿದೆ ಎಂದು ತಿಳಿಸಿದರು.
ಸಮಾರಂಭದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ.ಎ.ಸಲೀಂ, ಕೆಎಸ್‌ಆರ್‌ಪಿ ಎಡಿಜಿಪಿ‌ ಉಮೇಶ್ ಕುಮಾರ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಕೆಎಸ್‌ಆರ್‌ಪಿ ಐಜಿಪಿ ಸಂದೀಪ್ ಪಾಟೀಲ್ ಮುಂತಾದ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು